ಬೆಳಗಾವಿಗೆ ಹೊಸ ಪೊಲೀಸ್ ಆಯುಕ್ತರ ಕಚೇರಿ
ಬೆಳಗಾವಿ, ಡಿಸೆಂಬರ್ 01 : ಬೆಳಗಾವಿ ಮಹಾನಗರದಲ್ಲಿ ಹೊಸ ಪೊಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಲಾಗಿದೆ. 17 ಕೋಟಿ ರೂಪಾಯಿ ವೆಚ್ವದಲ್ಲಿ ಸುಸಜ್ಜಿತ ಆಯುಕ್ತರ ಕಚೇರಿಯನ್ನು ನಿರ್ಮಾಣ ಮಾಡಲಾಗುತ್ತದೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಂಗಳವಾರ ಬೆಳಗಾವಿಯಲ್ಲಿ ಪೊಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದರು. ನಗರದ ಕಾಲೇಜು ರಸ್ತೆಯಲ್ಲಿ ಕಚೇರಿ ನಿರ್ಮಾಣವಾಗಲಿದೆ.
ಬಳಿಕ ಮಾತನಾಡಿದ ಸಚಿವರು, "ಪೊಲೀಸ್ ಆಯುಕ್ತರ ಕಚೇರಿ ನಿರ್ಮಿಸಿಬೇಕು ಎಂಬುದು ಬಹಳ ದಿನಗಳ ಬೇಡಿಕೆಯಾಗಿತ್ತು. ನಗರದಲ್ಲಿಯೇ ಎರಡು ಎಕರೆ ಜಾಗ ಲಭ್ಯವಿದ್ದು, ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ" ಎಂದು ಹೇಳಿದರು.

"ಬೆಳಗಾವಿ ಮಹಾನಗರಕ್ಕೆ ತಕ್ಕಂತೆ ಎಲ್ಲ ಸೌಕರ್ಯಗಳನ್ನು ಹೊಂದಿರುವ ಸುಸಜ್ಜಿತ ಕಟ್ಟಡವನ್ನು ನಿಗದಿತ ಕಾಲಮಿತಿಯಲ್ಲಿ ನಿರ್ಮಿಸಲಾಗುತ್ತದೆ" ಎಂದು ಹೇಳಿದ ಸಚಿವರು, ಕಟ್ಟಡದ ನೀಲನಕ್ಷೆಯನ್ನು ವೀಕ್ಷಿಸಿದರು. ಸಣ್ಣಪುಟ್ಟ ಬದಲಾವಣೆ ಮಾಡಲು ನಿರ್ದೇಶನ ಕೊಟ್ಟರು.

ನೂತನ ಕಟ್ಟಡದ ಶಂಕು ಸ್ಥಾಪನೆ ಸಮಾರಂಭದಲ್ಲಿ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಶಾಸಕ ಅನಿಲ್ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ, ಕೆ. ಎಸ್. ಆರ್. ಪಿ. ಎಡಿಜಿಪಿ ಅಲೋಕ್ ಕುಮಾರ್, ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಸೇರಿದಂತೆ ಹಲವಾರು ಪಾಲ್ಗೊಂಡಿದ್ದರು.
ಮೂರು ಕಚೇರಿ; ಬೆಳಗಾವಿ ಜಿಲ್ಲೆಯಲ್ಲಿ ಮೂರು ಪ್ರಮುಖ ಪೊಲೀಸ್ ಕಚೇರಿಗಳಿವೆ. ಪೊಲೀಸ್ ಇನ್ಸ್ಪೆಕ್ಟರ್ ಜನರಲ್ (ಉತ್ತರ ವಲಯ), ನಗರ ಪೋಲೀಸ್ ಆಯುಕ್ತರು, ಬೆಳಗಾವಿ ನಗರ ಹಾಗೂ ಪೊಲೀಸ್ ಅಧೀಕ್ಷಕರು ಬೆಳಗಾವಿ ಜಿಲ್ಲೆ.
ಬೆಳಗಾವಿ ಮಹಾನಗರದಲ್ಲಿ ಪೊಲೀಸ್ ಆಯುಕ್ತ ಕಚೇರಿ ಸ್ಥಾಪಿಸಬೇಕು ಎನ್ನುವುದು ಬಹಳ ವರ್ಷಗಳ ಬೇಡಿಕೆಯಾಗಿತ್ತು. 2014ರ ಸೆಪ್ಟೆಂಬರ್ನಲ್ಲಿ ನಗರದಲ್ಲಿ ಪೊಲೀಸ್ ಆಯುಕ್ತರ ಕಚೇರಿಯನ್ನು ಉದ್ಘಾಟನೆ ಮಾಡಲಾಗಿತ್ತು. ಆಯುಕ್ತರ ಕಚೇರಿ ವ್ಯಾಪ್ತಿಗೆ 12 ಪೊಲೀಸ್ ಠಾಣೆಗಳು ಸೇರಿವೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications