ಅತ್ಯುತ್ತಮ ಪೊಲೀಸ್ ಠಾಣೆಯಾಗಿ ನಿಪ್ಪಾಣಿ ಗ್ರಾಮಾಂತರ ಪೊಲೀಸ್ ಠಾಣೆ ಆಯ್ಕೆ!
ಪ್ರತಿ ವರ್ಷ ಗೃಹ ವ್ಯವಹಾರಗಳ ಸಚಿವಾಲಯ ಆಯ್ಕೆ ಮಾಡುವ ಭಾರತದ ಹತ್ತು ಉತ್ತಮ ಪೊಲೀಸ್ ಠಾಣೆಗಳ ಪೈಕಿ ಈ ವರ್ಷ ನಿಪ್ಪಾಣಿ ಗ್ರಾಮಾಂತರ ಪೊಲೀಸ್ ಠಾಣೆಯು ಸ್ಥಾನ ಪಡೆದುಕೊಂಡಿದೆ.
ನಿಪ್ಪಾಣಿ ಫೆಬ್ರವರಿ 15: 2022ನೇ ವರ್ಷದ ಕರ್ನಾಟಕದ ಅತ್ಯುತ್ತಮ ಪೊಲೀಸ್ ಠಾಣೆಯಾಗಿ ನಿಪ್ಪಾಣಿ ಗ್ರಾಮಾಂತರ ಪೊಲೀಸ್ ಠಾಣೆಗೆ ಪ್ರಶಸ್ತಿ ನೀಡಲಾಗಿದೆ. ರಾಜ್ಯದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಗ್ರಾಮಾಂತರ ಪೊಲೀಸ್ ಠಾಣೆಯು ಈ ವರ್ಷದ ದೇಶದ ಅತ್ಯುತ್ತಮ ಠಾಣೆಯೆಂಬ ಹೆಸರು ಪಡೆದುಕೊಂಡಿದೆ. ಪ್ರತಿ ವರ್ಷ ಗೃಹ ವ್ಯವಹಾರಗಳ ಸಚಿವಾಲಯ ಆಯ್ಕೆ ಮಾಡುವ ಭಾರತದ ಹತ್ತು ಉತ್ತಮ ಪೊಲೀಸ್ ಠಾಣೆಗಳ ಪೈಕಿ ಈ ವರ್ಷ ನಿಪ್ಪಾಣಿ ಗ್ರಾಮಾಂತರ ಪೊಲೀಸ್ ಠಾಣೆಯು ಸ್ಥಾನ ಪಡೆದುಕೊಂಡಿದೆ. ಈ ಬಗ್ಗೆ ಠಾಣೆಯ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ನಿಪ್ಪಾಣಿ ಗ್ರಾಮಾಂತರ ಪೊಲೀಸ್ ಠಾಣೆಯ ದಕ್ಷ ಠಾಣಾಧಿಕಾರಿ ಪಿ.ಎಸ್.ಐ ಅನಿಲ್ ಕುಂಬಾರ್ ರವರು ತಮ್ಮ ಸಿಬ್ಬಂದಿಗಳು ಹಾಗೂ ತಮ್ಮ ಹಿರಿಯ ಅಧಿಕಾರಿಗಳಿಗೆ ಧನ್ಯವಾದಗಳನ್ನು ಹೇಳಿ ಶ್ಲಾಘಿಸಿದ್ದಾರೆ. ಕಳೆದ ವರ್ಷ ಕರ್ನಾಟಕದಿಂದ ರಾಯಚೂರು ಜಿಲ್ಲೆಯ ಮಾಣ್ವಿ ಪೊಲೀಸ್ ಠಾಣೆಯು ಈ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಪೊಲೀಸ್ ಠಾಣೆಗಳಲ್ಲಿ ಲಭ್ಯವಿರುವ ಸೇವೆಗಳು ಮತ್ತು ಸೌಲಭ್ಯಗಳ ವಿಷಯದಲ್ಲಿ ಪೊಲೀಸ್ ಠಾಣೆಗಳಿಗೆ ಶ್ರೇಯಾಂಕ ನೀಡಲು ಗೃಹ ವ್ಯವಹಾರಗಳ ಸಚಿವಾಲಯವು ವಾರ್ಷಿಕವಾಗಿ ಭಾರತದ ಟಾಪ್ ಹತ್ತು ಪೊಲೀಸ್ ಠಾಣೆಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಪೊಲೀಸ್ ಠಾಣೆಗಳ ಕಾರ್ಯಕ್ಷಮತೆ ಪರಿಶೀಲನೆಯನ್ನು ಬ್ಯೂರೋ ಆಫ್ ಪೊಲೀಸ್ ರಿಸಚ್ ಅಂಡ ಡೆವಲಪ್ ಮೆಂಟ್ (ಬಿ.ಪಿ.ಆರ.ಡಿ) ನಡೆಸಿದೆ.
#Karnataka #Belagavi
— Kiran Parashar (@KiranParashar21) February 14, 2023
Nippani rural police station has been awarded as the best police station of Karnataka in the annual ranking of police stations for 2022 by Ministry of Home Affairs.@SPBelagavi @allaboutbelgaum @IndianExpress pic.twitter.com/YTVZFYlnWg
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications