ಕಿಸ್ ಆಫ್ ಲವ್ ಗೆ ಅವಕಾಶ ನಿರಾಕರಿಸಿದ್ದು ಯಾಕೆ?
ಬೆಂಗಳೂರು. ನ. 25: ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಿಗೆ ಆಹಾರವಾಗಿದ್ದ ಕಿಸ್ ಆಫ್ ಲವ್ ಆಚರಣೆಗೆ ಬೆಂಗಳೂರಿನಲ್ಲಿ ಅವಕಾಶವಿಲ್ಲ. ನವೆಂಬರ್ 30 ರಂದು ಟೌನ್ ಹಾಲ್ ಮುಂಭಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ನವೆಂಬರ್ 30 ರಂದು ಕಿಸ್ ಆಫ್ ಲವ್ ಆಚರಣೆಗೆ ಅನುಮತಿ ಕೇಳಿ ಮನವಿ ಸಲ್ಲಿಸಲಾಗಿತ್ತು. ಆದರೆ ಇದು ಭಾರತೀಯ ದಂಡ ಸಂಹಿತೆಯ 294(ಎ) ಉಲ್ಲಂಘನೆಯಾಗಲಿದ್ದು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.[ಹಿಂದೆ ಸರಿದ ರಚಿತಾ ತನೇಜಾ]

ಕಾರ್ಯಕ್ರಮದಲ್ಲಿ ಎಷ್ಟು ಜನ ಭಾಗವಹಿಸುತ್ತಾರೆ? ಹಿನ್ನೆಲೆಯೇನು? ಉದ್ದೇಶವೇನು? ಎಂಬುದರ ಬಗ್ಗೆ ಮಾಹಿತಿ ನೀಡಲು ಆಯೋಜಕರ ಬಳಿ ಕೇಳಲಾಗಿತ್ತು. ಆದರೆ ಇಲ್ಲಿಯವರೆಗೆ ಯಾವುದೇ ವಿವರ ಸಲ್ಲಿಕೆಯಾಗಿಲ್ಲ. ಇಂಥ ಆಚರಣೆಗಳು ಶಾಂತಿ ಮತ್ತು ಭದ್ರತೆಗೆ ಭಂಗ ತರುವಂತೆ ಕಂಡುಬರುತ್ತಿದ್ದು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಕಿಸ್ ಆಫ್ ಲವ್ ಬಗ್ಗೆ ರಾಜ್ಯಾದ್ಯಂತ ತೀವ್ರ ವಿರೊಧ ವ್ಯಕ್ತವಾಗಿದೆ. ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಆಚರಣೆಗೆ ಅವಕಾಶ ನೀಡಿ ಅಹಿತಕರ ಘಟನೆಗಳಿಗೆ ಕಾರಣವಾದರೆ ಯಾರು ಜವಾಬ್ದಾರಿ? ಎಂದು ಆಯೋಜಕರನ್ನು ಕೇಳಲಾಗಿತ್ತು. ಈ ಬಗ್ಗೆಯೂ ಸ್ಪಷ್ಟ ಉತ್ತರ ಬಂದಿರಲಿಲ್ಲ ಎಂದು ಹೇಳಿದ್ದಾರೆ.[ಮುತ್ತು ಕೊಟ್ರೆ ಏನಾಗ್ತದೆ? ಕಿಸ್ ಅಂದ್ರೆ ಏನು?]
ಐಪಿಸಿ 294(ಎ) ಏನು ಹೇಳುತ್ತದೆ?
ಸಾರ್ವಜನಿಕ ಕ್ಷೇತ್ರದಲ್ಲಿ ಅಶ್ಲೀಲವಾಗಿ ವರ್ತಿಸುವುದಕ್ಕೆ ಈ ಸೆಕ್ಷನ್ ತಡೆ ಒಡ್ಡುತ್ತದೆ. ಕೆಟ್ಟ ರೀತಿಯಲ್ಲಿ ಕುಣಿಯುವುದು, ನರ್ತಿಸುವುದು, ಅಶ್ಲೀಲ ಪದಗಳನ್ನು ಬಳಸಿ ಘೋಷಣೆ ಕೂಗುವುದನ್ನು ಈ ಸೆಕ್ಷನ್ ಸಂಪೂರ್ಣವಾಗಿ ನಿಷೇಧಿಸುತ್ತದೆ. ಅಲ್ಲದೇ ಈ ರೀತಿ ವರ್ತಿಸಿದವರಿಗೆ ಮೂರು ತಿಂಗಳು ಜೈಲು ಅಥವಾ ದಂಡ ವಿಧಿಸುವ ಅವಕಾಶವನ್ನು ನೀಡುತ್ತದೆ.
ಹಿಂದೆ ಸರಿದಿದ್ದ ರಚಿತಾ ತನೇಜಾ
ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕಿಸ್ ಆಫ್ ಲವ್ ಆಯೋಜಕಿ ರಚಿತಾ ತನೇಜಾ ತಾನು ಕಾರ್ಯಕ್ರಮದಿಂದ ಹಿಂದೆ ಸರಿಯುತ್ತಿರುವುದಾಗಿ ಸೋಮವಾರ ತಿಳಿಸಿದ್ದರು. ಆದರೆ ಕೆಲ ಫೇಸ್ ಬುಕ್ ನ ಕಿಸ್ ಆಫ್ ಲವ್ ಕಾರ್ಯಕರ್ತರು ತಾವೇ ನವೆಂಬರ್ 30 ರಂದು ಕಾರ್ಯಕ್ರಮ ಆಯೋಜಿಸುವುದಾಗಿ ಹೇಳಿದ್ದರು.
At the same time, so called moral policing will also not be tolerated. Action under Sec 107 CrPc (4/n)
— M N Reddi, IPS (@CPBlr) November 25, 2014 About 'Kiss of Love': the organisers have not given full info on the nature of the event. Past incidents show that obscene acts are (1/n)
— M N Reddi, IPS (@CPBlr) November 25, 2014 -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications