ಸಚಿವ ಅನಂತ್ ಕುಮಾರ್, ಪಿಎಗೆ ಸಂಬಳ ಆಗಿಲ್ವಂತೆ
ಬೆಳಗಾವಿ, ನವೆಂಬರ್ 16: ರೈತರು, ಮೀಸಲಾತಿ ಹೋರಾಟಗಾರರ ಪ್ರತಿಭಟನೆ, ವೈದ್ಯರ ಮುಷ್ಕರ, ಜಾರ್ಜ್ ರಾಜೀನಾಮೆಗೆ ಆಗ್ರಹದ ನಡುವೆ ಸಚಿವರು, ಶಾಸಕರ ಆಪ್ತ ಸಹಾಯಕರ ಸಂಬಳದ ಬಗ್ಗೆ ಕೂಡಾ ವಿಧಾನ ಪರಿಷತ್ ನಲ್ಲಿ ಚರ್ಚೆ ನಡೆಯಿತು.
ಪರಿಷತ್ ನಿಯಮ 330 ಅಡಿಯಲ್ಲಿ ಚರ್ಚೆ ಆರಂಭಿಸಿದ ಸದಸ್ಯ ಬಿಜೆ ಪುಟ್ಟಸ್ವಾಮಿ ಅವರು, ಸಂಸದರು, ವಿಧಾನಸಭೆ, ವಿಧಾನ ಪರಿಷತ್ ಸದಸ್ಯರಿಗೆ ಗುತ್ತಿಗೆ ಆಧಾರದ ಆಪ್ತ ಸಹಾಯಕರಿಗೆ 8-9 ತಿಂಗಳ ಸಂಬಳ ನೀಡಿಲ್ಲ ಎಂದರು.

ಕೇಂದ್ರ ಸಚಿವರಾದ ಅನಂತ್ ಕುಮಾರ್, ಸದಾನಂದಗೌಡ, ನಿರ್ಮಲ ಸೀತಾರಾಮನ್, ಸೇರಿದಂತೆ ಸಂಸದರು, ರಾಜ್ಯದ ಶಾಸಕರ ಆಪ್ತ ಸಹಾಯಕರಿಗೆ ಸಂಬಳ ನೀಡಿಲ್ಲ, ಕೂಡಲೇ ಸಂಬಳ ಬಿಡುಗಡೆ ನೀಡಬೇಕು, ಗುತ್ತಿಗೆ ಆಧಾರದ ಆಪ್ತ ಸಹಾಯಕರಿಗೆ ಸಂಬಳ ಜಾಸ್ತಿ ಮಾಡಬೇಕು, ಅಧಿವೇಶನ ಅವಧಿಯಲ್ಲಿ ಅವರಿಗೂ ಭತ್ಯೆ ನೀಡಬೇಕು ಎಂದು ಸರ್ಕಾರಕ್ಕೆ ಪುಟ್ಟಸ್ವಾಮಿ ಆಗ್ರಹಿಸಿದರು.
ಸಚಿವ ಕಾಗೋಡು ತಿಮ್ಮಪ್ಪ ಅವರು ಉತ್ತರಿಸಿ, ಆಪ್ತ ಸಹಾಯಕರಿಗೆ ಸಂಬಳವನ್ನ ಬಿಡುಗಡೆ ಮಾಡಿಸುತ್ತೇನೆ, ಬಾಕಿ ಸಂಬಳ ತಕ್ಷಣ ಬಿಡುಗಡೆ ಮಾಡಲು ಅಧಿಕಾರಿ ಸೂಚನೆ ನೀಡುತ್ತೇನೆ ಎಂದರು.
ಕಾಗೋಡು ಉತ್ತರಕ್ಕೆ ಬಹುತೇಕ ಸದಸ್ಯರ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿ ತಿಂಗಳು ಸಂಬಳ ಕೊಡಿಸುವಂತೆ ಸದಸ್ಯರಿಂದ ಒತ್ತಾಯ ಕೇಳಿದ. ಸರ್ಕಾರ ಪಾಪರ್ ಆಗಿದೆಯಾ ಎಂದು ಪುಟ್ಟಸ್ವಾಮಿ ಪ್ರಶ್ನಿಸಿದರು. ಪುಟ್ಟಸ್ವಾಮಿ ಮಾತಿಗೆ ಗರಂ ಆದ ಕಾಗೋಡು, 'ಹಂಗೆಲ್ಲ ಮಾತಾಡಬೇಡ್ರಿ. ನೀವೇನು ಕೊಟ್ಟು ಇಟ್ಟಿಲ್ ಅಂತ ಗದರಿದರು.
ಸದನದಲ್ಲಿ ಮಾತಿನ ಚಕಮಕಿ ಮುಂದುವರೆಯಿತು, ಪಕ್ಷ ಬೇಧ ಮರೆತು ಸಂಬಳ ಬಿಡುಗಡೆ ಒತ್ತಾಯಿಸಿದ ಸದಸ್ಯರು. ಬಳಿಕ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಕಾಗೋಡು ತಿಮ್ಮಪ್ಪ ಹೇಳಿದರು.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications