ಫೋನ್ ಟ್ಯಾಪಿಂಗ್ ಆರೋಪದಲ್ಲಿ ಹುರುಳಿಲ್ಲ; ಡಿಕೆಶಿಗೆ ಡಿಸಿಎಂ ಸವದಿ ತಿರುಗೇಟು

ಬೆಳಗಾವಿ, ಆಗಸ್ಟ್ 24: ರಾಜ್ಯ ಸರ್ಕಾರದಿಂದ ನನ್ನ ಫೋನ್ ಕರೆಗಳು ಕದ್ದಾಲಿಕೆ ಆಗುತ್ತಿವೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಆರೋಪದಲ್ಲಿ ಯಾವುದೇ ಹುರಳಿಲ್ಲ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿರುಗೇಟು ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಮೀಲಾಗಿದ್ದಾರೆ. ಈ ಆರೋಪ ಮರೆಮಾಚಿ, ಜನರ ಗಮನ ಬೇರೆಡೆ ಸೆಳೆಯಲು ಡಿ.ಕೆ ಶಿವಕುಮಾರ್ ಫೋನ್​ ಟ್ಯಾಪಿಂಗ್ ‌ಆರೋಪ ಮಾಡ್ತಿದ್ದಾರಷ್ಟೇ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಫೋನ್​ ಟ್ಯಾಪಿಂಗ್ ಮಾಡುವ ಅವಶ್ಯಕತೆ ನಮಗಿಲ್ಲ, ಡಿಕೆಶಿ​ ಅವರು ‌ಮಾಡುತ್ತಿರುವ ಆರೋಪ ಶುದ್ಧ ಸುಳ್ಳು ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು.

No Truth In DK Shivakumars Phone Tapping Allegation: DCM Lakshman Savadi

ಬೆಂಗಳೂರು ‌ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಶಿವಕುಮಾರ್ ಧಮ್ಕಿ ಹಾಕಿರುವುದು ಸರಿಯಲ್ಲ. ಗಲಭೆಕೋರರನ್ನು ಬಂಧಿಸುವ ಕೆಲಸವನ್ನು ನಮ್ಮ ಪೊಲೀಸರು ಮಾಡುತ್ತಿದ್ದಾರೆ. ಡಿಕೆಶಿ ಅವರ ಬೆದರಿಕೆಗೆ ರಾಜ್ಯ ಸರ್ಕಾರವೂ ಹೆದರಲ್ಲ, ಅಧಿಕಾರಿಗಳೂ ಹೆದರಲ್ಲ ಎಂದು ಟಾಂಗ್ ಕೊಟ್ಟರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+