ಪತ್ರಕರ್ತ ಡಾ. ವೀರೇಶ್ ಹಿರೇಮಠ ಅಪಘಾತದಲ್ಲಿ ದುರ್ಮರಣ

ಬೆಳಗಾವಿ, ಜನವರಿ 14: ಹಿರಿಯ ಪತ್ರಕರ್ತ ಡಾ. ವೀರೇಶ ಹಿರೇಮಠ ಅವರು ಅಪಘಾತದಲ್ಲಿ ದುರಂತ ಸಾವಿಗೀಡಾಗಿದ್ದಾರೆ. ಸಂಸಾರ ಸಮೇತ ಗೋವಾ ಪ್ರವಾಸಕ್ಕೆ ತೆರಳಿದ್ದ ವೀರೇಶ್ ಅವರು, ಬಾಗಲಕೋಟೆಗೆ ಹಿಂತಿರುಗುವಾಗ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ. ಮೃತರು ಪತ್ನಿ ಗೌರಿ, ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಶಿಷ್ಯವರ್ಗವನ್ನು ಅಗಲಿದ್ದಾರೆ.

ವೀರೇಶ್ ಅವರಿದ್ದ ಕಾರು, ಖಾನಪುರ ತಾಲೂಕಿನ ನಂದಗಡ ಬಳಿ ಭಾನುವಾರ ಮುಂಜಾನೆ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ವೀರೇಶ್ ಅವರು ಮೃತಪಟ್ಟಿದ್ದಾರೆ.

Noted Journalist Veeresh Hiremath dies in an accident
ವೀರೇಶ್ ಅವರ ಪತ್ನಿ ಗೌರಿ ಕಾರು ಚಾಲಕ ಸುನೀಲ್ ಗೆ ಗಂಭೀರ ಗಾಯಗಳಾಗಿವೆ. ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.ಗಾಯಗೊಂಡವರನ್ನು ಧಾರವಾಡದ ಸಿವಿಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Noted Journalist Veeresh Hiremath dies in an accident

ಬಾಗಲಕೋಟೆ ಬಿವಿವಿ ಕಾಲೇಜಿನಲ್ಲಿ ಪತ್ರಿಕೋದ್ಯಮ ಅಧ್ಯಾಪಕರಾಗಿ ಡಾ ವಿರೇಶ ಹಿರೇಮಠ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಎಂ.ಎ(ಎಂಸಿ ಜೆ), ಪಿಜಿ ಡಿಪ್ಲೋಮಾ, ಪಿಎಚ್ ಡಿ ಪದವಿ ಪಡೆದಿದ್ದ ವೀರೇಶ್ ಅವರು ವಿದ್ಯಾರ್ಥಿಗಳ ನೆಚ್ಚಿನ ಗುರುವಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+