ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಾದಾಯಿಯಲ್ಲೂ ಕನ್ನಡಿಗರ ವಿರುದ್ಧ ಕತ್ತಿ ಮಸೆದ ಮರಾಠ ಮಂಚ್

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಡಿಸೆಂಬರ್ 28: ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದ ದಲ್ಲಿ ಮಾತ್ರ ಈವರೆಗೆ ಮೂಗು ತೂರಿಸುತ್ತಿದ್ದ ಬೆಳಗಾವಿ ಮರಾಠ ಪರ ಸಂಘಟನೆಗಳು ಇದೀಗ ಮಹದಾಯಿ ನದಿ ನೀರಿನ ವಿಚಾರದಲ್ಲೂ ರಾಜ್ಯದ ವಿರುದ್ಧ ನಿಲುವು ತಾಳಿವೆ.

5 ದಿನಗಳ ಪ್ರತಿಭಟನೆ ಅಂತ್ಯ, ತವರಿನತ್ತ ಮಹದಾಯಿ ಹೋರಾಟಗಾರರು5 ದಿನಗಳ ಪ್ರತಿಭಟನೆ ಅಂತ್ಯ, ತವರಿನತ್ತ ಮಹದಾಯಿ ಹೋರಾಟಗಾರರು

ಬೆಳಗಾವಿ ಮರಾಠ ಯುವ ಮಂಚ್ ಮರಾಠ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರ ಬರೆದಿದ್ದು ಮಹದಾಯಿ ನದಿ ನೀರಿನ ವಿಚಾರವಾಗಿ ಯಾವುದೇ ಕಾರಣಕ್ಕೂ ಕರ್ನಾಟಕದ ಪರ ನಿಲುವು ತಾಳದಂತೆ ಮನವಿ ಮಾಡಿದ್ದಾರೆ. ಮಹಾಜನ್ ವರದಿ ಪ್ರಕಾರ ಕಳಸಾ ಬಂಡೂರಿ ನಾಲೆ ಮಹಾರಾಷ್ಟ್ರಕ್ಕೆ ಸೇರುತ್ತದೆ. ಯಾವುದೇ ಕಾರಣಕ್ಕೂ ಮಹಾದಾಯಿಗೆ ಸಮ್ಮತಿ ಸೂಚಿಸಬಾರದು.

ಮಹದಾಯಿ ವಿಚಾರದಲ್ಲಿ ಸಿದ್ದರಾಮಯ್ಯರನ್ನು ಬೆಂಬಲಿಸಬೇಕು ಏಕೆ?ಮಹದಾಯಿ ವಿಚಾರದಲ್ಲಿ ಸಿದ್ದರಾಮಯ್ಯರನ್ನು ಬೆಂಬಲಿಸಬೇಕು ಏಕೆ?

Now Maratha Manch opposes Karnataka in Mahadayi issue too

ಮಹಾದಾಯಿ ಬಗ್ಗೆ ಕರ್ನಾಟಕಕ್ಕೆ ಮೂಗು ಹಿಡಿದು ಪಾಠ ಕಲಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಗೋವಾ, ಮಹಾರಾಷ್ಟ್ರ, ಕರ್ನಾಟಕದ ಮುಖ್ಯಮಂತ್ರಿಗಳು ಒಂದೆಡೆ ಚರ್ಚಿಸಿ ಸಮಸ್ಯೆಯನ್ನು ಬಗೆ ಹರಿಸಬೇಕು. ಹಾಗೂ ಗಡಿ ವಿವಾದ ಕುರಿತು ಇತ್ಯರ್ಥ ಮಾಡಬೇಕು. ಈ ಬಗ್ಗೆ ಕರ್ನಾಟಕದ ಮೇಲೆ ಒತ್ತಡ ಹೇರ ಬೇಕು ಎಂದು ಬೆಳಗಾವಿ ಮರಾಠ ಯುವ ಮಂಚ್ನ ಸೂರಜ್ ಕಣಬರಕರ್ ದೇವೇಂದ್ರ ಫಡ್ನವಿಸ್ ಗೆ ಪತ್ರ ಬರೆದಿದ್ದಾರೆ.

ರಾಜಕೀಯ ಹಾಕ್ಯಾಟದಲ್ಲಿ ಹುಗಿದು ಹೋಗದಿರಲಿ ರೈತರ ಹೋರಾಟರಾಜಕೀಯ ಹಾಕ್ಯಾಟದಲ್ಲಿ ಹುಗಿದು ಹೋಗದಿರಲಿ ರೈತರ ಹೋರಾಟ

Now Maratha Manch opposes Karnataka in Mahadayi issue too

ಗುರುವಾರ ಶಿವಮೊಗ್ಗದಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಮೆರವಣಿಗೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮಹಾದಾಯಿ, ಕಳಸಾ ಬಂಡೂರಿ ವಿಚಾರವಾಗಿ ಮಾತುಕತೆ ನಡೆಯಬಹುದು ಎಂದು ಮೂಲಗಳು ತಿಳಿಸಿವೆ.

English summary
Maratha Yuva Manch, a pro maratha organisation has written a letter to Maharastra Chief Minister Devendra Fadnavis to take stand against Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X