ಬೆಳಗಾವಿ : ಪೆಟ್ರೋಲಿಯಂ ಟ್ಯಾಂಕರ್ಗೆ ಬೆಂಕಿ
ಬೆಳಗಾವಿ, ಜ.10 : ರೈಲಿನ ಬೋಗಿಯಿಂದ ಡೀಸೆಲ್ಅನ್ನು ಟ್ಯಾಂಕರ್ಗೆ ತುಂಬುವಾಗ ಬೆಂಕಿಹೊತ್ತಿಕೊಂಡ ಘಟನೆ ಬೆಳಗಾವಿಯ ದಾಸೂರು ಗ್ರಾಮದ ರೈಲು ನಿಲ್ದಾಣದ ಬಳಿ ಶನಿವಾರ ಬೆಳಗ್ಗೆ ನಡೆದಿದೆ. ಮೂರು ಅಗ್ನಿ ಶಾಮಕ ದಳದ ವಾಹನಗಳು ಕಾರ್ಯಾರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ.
ಭಾರತ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಸುಮಾರು 70,000 ಲೀಟರ್ ಡೀಸೆಲ್ ಬೆಂಕಿಗಾಹುತಿಯಾಗಿದೆ. ರೈಲಿನಲ್ಲಿ ಬಂದ ಡೀಸೆಲ್ಅನ್ನು ಟ್ಯಾಂಕರ್ಗೆ ತುಂಬುವಾಗ ಏಕಾಏಕಿ ಬೆಂಕಿ ಹೊತ್ತಿಕೊಂಡು ಈ ಘಟನೆ ನಡೆದಿದೆ. ಅವಘಡದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.

ಬೆಂಕಿಯ ಕೆನ್ನಾಗಿಲಿಗೆ ಹೆಚ್ಚಾದಂತೆ ಗ್ರಾಮದ ಸುತ್ತಮುತ್ತಲೂ ದಟ್ಟವಾದ ಕಪ್ಪುಹೊಗೆ ಆವರಿಸಿತ್ತು. ಮುಂಜಾಗ್ರತಾ ಕ್ರಮವಾಗಿ ಬೆಳಗಾವಿಗೆ ಬರುವ ರೈಲು ಮತ್ತು ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಟ್ಯಾಂಕರ್ ಸ್ಫೋಟಗೊಳ್ಳುವ ಭೀತಿಯಿಂದ ಸ್ಥಳೀಯರು ಆತಂಕಗೊಂಡಿದ್ದರು. [ಚಿತ್ರ ಕೃಪೆ : http://allaboutbelgaum.com/]
ಮೂರು ಅಗ್ನಿಶಾಮಕ ವಾಹನಗಳು ಸತತವಾಗಿ ಕಾರ್ಯಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಘಟನೆಗೆ ನಿಖವವಾದ ಕಾರಣ ತಿಳಿದುಬಂದಿಲ್ಲ. ಬೆಂಕಿ ಹೊತ್ತಿಕೊಂಡ ಟ್ಯಾಂಕರ್ ಸತತ ಎರಡು ಗಂಟೆ ಹೊತ್ತಿ ಉರಿದಿದ್ದು, ಗ್ರಾಮದ ಸುತ್ತಮುತ್ತಲೂ ದಟ್ಟವಾದ ಕಪ್ಪು ಹೊಗೆ ಆವರಿಸಿತ್ತು.
Fire at oil depot at Desur. #Belagavi #belgaum #fire pic.twitter.com/YMlWh7VyTp
— All About Belgaum (@allaboutbelgaum) January 10, 2015 ಘಟನೆಯಿಂದಾಗಿ ರಾಣಿಚೆನ್ನಮ್ಮ ಎಕ್ಸ್ಪ್ರೆಸ್ ಸೇರಿದಂತೆ ಇತರ ಕೆಲವು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ಬೆಳಗಾವಿ-ಖಾನಾಪುರ ನಡುವಿನ ರಸ್ತೆ ಸಂಚಾರವೂ ಅಸ್ತವ್ಯಸ್ತಗೊಂಡಿತ್ತು.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ












Click it and Unblock the Notifications