ಹಾಡಹಗಲಿನಲ್ಲಿ ಪೊಲೀಸ್ ಠಾಣೆ ಎದುರಲ್ಲೇ ನಡೆಯಿತು ವೃದ್ಧನ ಕೊಲೆ
ಬೆಳಗಾವಿ, ನವೆಂಬರ್ 12: ಪೊಲೀಸ್ ಠಾಣೆ ಮುಂಭಾಗದಲ್ಲೇ ವೃದ್ಧರೊಬ್ಬರನ್ನು ಅಟ್ಟಾಡಿಸಿ ಕೊಲೆ ಮಾಡಿರುವ ಘಟನೆ ಬೈಲಹೊಂಗಲದ ಕಿತ್ತೂರಿನಲ್ಲಿ ಇಂದು ನಡೆದಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿರುವ ಪೊಲೀಸ್ ಠಾಣೆ ಮುಂಭಾಗದಲ್ಲಿ ಘಟನೆ ನಡೆದಿದ್ದು, ಬೆಳವಡಿ ಗ್ರಾಮದ ಫಕೀರಪ್ಪ ಮುರಾರಿ (61) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಎಂದಿನಂತೆ ರಸ್ತೆ ಜನಸಂದಣಿಯಿಂದ ತುಂಬಿತ್ತು. ಪೊಲೀಸ್ ಠಾಣೆ ಸಮೀಪ ಫಕೀರಪ್ಪ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಇಬ್ಬರು ವ್ಯಕ್ತಿಗಳು ಮಾರಕಾಸ್ತ್ರಗಳಿಂದ ಏಕಾಏಕಿ ಕುತ್ತಿಗೆ ಭಾಗಕ್ಕೆ ಹೊಡೆದು ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿ ಓಡಿ ಹೋಗುತ್ತಿದ್ದ ಇಬ್ಬರನ್ನೂ ಕಿತ್ತೂರು ಪೊಲೀಸರು ಬಂಧಿಸಿದ್ದಾರೆ.
ಈ ಕೊಲೆ ಹಿಂದಿನ ಉದ್ದೇಶ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Comments
English summary
An old man was murdered in front of the police station in Kittur, Bilahongala today
Story first published: Tuesday, November 12, 2019, 18:24 [IST]