ಅಂತರ್ ಜಿಲ್ಲಾ ಸಂಚಾರಕ್ಕೆ ಪಾಸ್: ಬೆಳಗಾವಿ ಡಿಸಿ
ಬೆಳಗಾವಿ, ಮೇ 3: ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಕರ್ನಾಟಕ ರಾಜ್ಯದ ಇತರೆ ಜಿಲ್ಲೆಗಳಿಗೆ ತೆರಳಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ಇತರರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ ಬೊಮ್ಮನಹಳ್ಳಿ ಅವರು ತಿಳಿಸಿದರು.
ಬೆಳಗಾವಿ ಜಿಲ್ಲೆಯಿಂದ ಇತರೆ ಜಿಲ್ಲೆಗಳಿಗೆ ಹೋಗುವವರಿಗೆ ಒಂದು ಸಲ, ಒಂದು ದಿನ ಮತ್ತು ಒಂದು ಬಾರಿ ಸಂಚಾರಕ್ಕೆ ಪಾಸ್ ನೀಡಲಾಗುವುದು ಎಂದರು.
ಅಂತರ್ ಜಿಲ್ಲಾ ಪ್ರಯಾಣಕ್ಕೆ ಬೆಳಗಾವಿ ತಾಲ್ಲೂಕು ಹೊರತುಪಡಿಸಿ ಉಳಿದ ತಾಲ್ಲೂಕಿನ ಜನರಿಗೆ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು ಪಾಸ್ ಗಳನ್ನು ನೀಡುವರು. ಅದೇ ರೀತಿ ಬೆಳಗಾವಿ ನಗರ ಮತ್ತು ಬೆಳಗಾವಿ ತಾಲ್ಲೂಕಿನ ಪ್ರದೇಶದಲ್ಲಿರುವ ಜನರಿಗೆ ಉಪ ಪೊಲೀಸ್ ಆಯುಕ್ತರು(ಡಿಸಿಪಿ) ಪಾಸ್ ಗಳನ್ನು ನೀಡಲಿದ್ದಾರೆ ಎಂದು ಹೇಳಿದರು.

ಅರ್ಜಿ ಎಲ್ಲಿ ಸಲ್ಲಿಸಬೇಕು?
ಬೆಳಗಾವಿ ನಗರ ಹಾಗೂ ಬೆಳಗಾವಿ ತಾಲ್ಲೂಕಿನ ಜನರು ಉಪ ಪೊಲೀಸ್ ಆಯುಕ್ತರು (ಡಿಸಿಪಿ) ಬೆಳಗಾವಿ ಇವರಿಗೆ ಅರ್ಜಿಗಳನ್ನು ಸಲ್ಲಿಸಬೇಕು.
ಅದೇ ರೀತಿ ಉಳಿದ ತಾಲ್ಲೂಕಿನಲ್ಲಿ ಇರುವವರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಮತ್ತಿತರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿದ್ದರೆ ಆಯಾ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬೇಕು. ತಾಲ್ಲೂಕು ವ್ಯಾಪ್ತಿಯಲ್ಲಿ ಇರುವವರು ಆಯಾ ತಹಶಿಲ್ದಾರರ ಕಚೇರಿಯಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.
ಹೊರ ರಾಜ್ಯ ಪ್ರವಾಸಕ್ಕೆ ಪಾಸ್ ಪಡೆಯುವ ವಿಧಾನ:
ಬೆಳಗಾವಿ ಜಿಲ್ಲೆಯಲ್ಲಿರುವ ಬೇರೆ ರಾಜ್ಯದ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಇತರೆ ರಾಜ್ಯಗಳಿಗೆ ತೆರಳಲು ಬಯಸಿದರೆ ಕರ್ನಾಟಕ ಸರ್ಕಾರದ ಸೇವಾ ಸಿಂಧು ಯೋಜನೆಯ ವೆಬ್ಸೈಟ್ ಮೂಲಕ ತಮ್ಮ ಹೆಸರು, ವಿವರಗಳನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಪ್ರವಾಸಿಗರು ಸಲ್ಲಿಸುವ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಮಾರ್ಗಸೂಚಿ ಅನುಸಾರ ಪ್ರಯಾಣಕ್ಕೆ ಸರ್ಕಾರದಿಂದ ಅನುಮತಿ ನೀಡಲಾಗುತ್ತದೆ ಎಂದು ಅವರು ಬೆಳಗಾವಿ ಡಿಸಿ ಮಾಹಿತಿ ನೀಡಿದರು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications