ಅನರ್ಹ ಶಾಸಕ ಮಹೇಶ್ ಕುಮಟಳ್ಳಿಗೆ ಕ್ಷೇತ್ರದ ಜನರಿಂದ ಮಂಗಳಾರತಿ
ಬೆಳಗಾವಿ, ಆಗಸ್ಟ್ 11: ಅಥಣಿ ಕ್ಷೇತ್ರದ ಶಾಸಕರಾಗಿದ್ದು, ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪೀಕರ್ ಅವರಿಂದ ಅನರ್ಹತೆ ಶಿಕ್ಷೆಗೆ ಒಳಗಾಗಿರುವ ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಕ್ಷೇತ್ರದ ಜನ ಇಂದು ಸರಿಯಾಗಿ ಮಂಗಳಾರತಿ ಮಾಡಿದ್ದಾರೆ.
ಇಂದು ಮಹೇಶ್ ಕುಮಟಳ್ಳಿ ಅವರು ಅಥಣಿ ಕ್ಷೇತ್ರದ ಸತ್ತಿ ಗ್ರಾಮದಲ್ಲಿ ಆರಂಭಿಸಲಾಗಿರುವ ಗಂಜಿ ಕೇಂದ್ರಕ್ಕೆ ಭೇಟಿ ನೀಡಲೆಂದು ಆಗಮಿಸಿದ್ದರು. ಆಗ ಅವರನ್ನು ಸುತ್ತವರೆದ ಜನ ಮಹೇಶ್ ಕುಮಟಳ್ಳಿ ಅವರನ್ನು ಬಲವಂತವಾಗಿ ಕಾರಿನಿಂದ ಇಳಿಸಿದರು.
ಮಹೇಶ್ ಕುಮಟಳ್ಳಿ ಅವರನ್ನು ಬಲವಂತವಾಗಿ ಕಾರಿನಿಂದ ಕೆಳಗೆ ಇಳಿಸಿದ ಜನರು, ಅವರನ್ನು ರಸ್ತೆಯ ಮೇಲೆ ಕೂರುವಂತೆ ಸೂಚಿಸಿ ಹಿಗ್ಗಾ-ಮುಗ್ಗಾ ತರಾಟೆಗೆ ತೆಗೆದುಕೊಂಡರು.

ನಮ್ಮ ಕಷ್ಟಗಳಿಗೆ ಸ್ಪಂದಿಸುತ್ತೀರಿ ಎಂದು ನಿಮ್ಮನ್ನು ಆರಿಸಿ ಕಳಿಸಿದ್ದೆವು ಆದರೆ ನೀವು ನಿಮ್ಮ ಸುಖಕಕ್ಕಾಗಿ ರಾಜೀನಾಮೆ ನೀಡಿದ್ದೀರಿ. ನೀವು ಈಗ ಸುಖವಾಗಿ ಇದ್ದೀರಿ ಆದರೆ ನಾವು ಸುಖವಾಗಿ ಇಲ್ಲ ಎಂದು ಜನರು ಮಹೇಶ್ ಕುಮಟಳ್ಳಿ ಅವರನ್ನು ತರಾಟೆಗೆ ತೆಗೆದುಕೊಂಡರು.
ರಾಜೀನಾಮೆ ನೀಡುವಾಗ ನಮ್ಮನ್ನು ಏನಾದರೂ ಕೇಳಿದ್ದಿರೇ? ಆಗ ಜನರ ಬಗ್ಗೆ ಕ್ಷೇತ್ರದ ಬಗ್ಗೆ ಇಲ್ಲದ ಕಾಳಜಿ ಈಗ ರಾಜೀನಾಮೆ ನೀಡಿದ ಮೇಲೆ ಬಂದಿದೆಯೇ ಎಂದು ಸಾರ್ವಜನಿಕರು ಕುಮಟಳ್ಳಿ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications