ಕೊಲ್ಲಾಪುರ ರೇವ್ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಸಚಿವರ ಬೆಂಬಲಿಗರು
ಬೆಳಗಾವಿ, ಆಗಸ್ಟ್, 13 : ಇಲ್ಲಿ ಬೇಲಿನೇ ಎದ್ದು ಹೊಲ ಮೇಯ್ದಿದೆ. ರಾಜ್ಯದ ಗಡಿಭಾಗದಲ್ಲಿ ರೇವ್ ಪಾರ್ಟಿ ನಡೆಸಲು ಹೋಗಿದ್ದ ಸಚಿವರ ನಿಕಟವರ್ತಿ, ಸೆಕ್ರೆಟರಿ ಹಾಗೂ ಗುತ್ತಿಗೆದಾರರು ಸೇರಿದಂತೆ 9 ಮಂದಿಯನ್ನು ಕೊಲ್ಹಾಪುರ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಹೌದು..ರಾಜ್ಯದ ಸಚಿವರೊಬ್ಬರಿಗೆ ನಿಕಟವರ್ತಿ ಕಿರಣ್ ಸಿಂಗ್ ರಜಪೂತ್ (42) ಮತ್ತು ಸೆಕ್ರೆಟರಿ ನಾಗರಾಜ್ ಹನುಮಂತಯ್ಯ, ಶಿಕ್ಷಣ ಇಲಾಖೆಯ ಹೇಮಂತ್ ರಾಮೇಗೌಡ, ಅರುಣ್ ಎಂ. ಇಂದ್ರಶಂಕರ್ ಬಂಧಿತ ಆರೋಪಿಗಳು.[ಕ್ರಿಕೆಟರ್ಸ್, ಸಿನಿ ತಾರೆಯರ ಮೇಲೆ ಚಾರ್ಜ್ ಶೀಟ್]

ಆರೋಪಿಗಳನ್ನು ಬಂಧಿಸಿದ ಕೊಲ್ಲಾಪುರ ಪೊಲೀಸರು ಇವರ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಕ್ಕೆ ಹಾಜರು ಪಡಿಸಲಾಗಿದ್ದು, ಆಗಸ್ಟ್ 14ರ ಶುಕ್ರವಾರದವರೆಗೆ ಪೊಲೀಸ್ ವಶಕ್ಕೆ ನೀಡಲಾಗಿದೆ.
ಏನಿದು ಘಟನೆ?
ಕೆಲವು ದಿನಗಳ ಹಿಂದೆ ಸಚಿವರ ಬೆಂಬಲಿಗರು ಒಂದು ಸಣ್ಣ ಪಾರ್ಟಿ ಮಾಡಲು ನಿರ್ಧರಿಸಿದ್ದರು. ಇದರ ಉಸ್ತುವಾರಿಯನ್ನು ಕೃಷಿ ಪರ್ಯಟನ ಕೇಂದ್ರದ ಮಾಲೀಕ ಇಂದ್ರ ಶಂಕರ್ ಅವರಿಗೆ ವಹಿಸಿಕೊಡಲಾಗಿತ್ತು. ಈತ ಕೊಲ್ಲಾಪುರ ಜಿಲ್ಲೆಯ ಇಂಜೋಲ್ ತೋಟದ ಮನೆಯಲ್ಲಿ ರೇವ್ ಪಾರ್ಟಿಗೆ ವ್ಯವಸ್ಥೆ ಮಾಡಿದ್ದನು.
ದಿಢೀರ್ ತೋಟದ ಮನೆಗೆ ಆಗಮಿಸಿದ ಪೊಲೀಸರು ರೇವ್ ಪಾರ್ಟಿ ನಡೆಯುತ್ತಿರುವುದನ್ನು ಕಂಡು ಕೂಡಲೇ ಕಾರ್ಯಪ್ರವೃತ್ತರಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಒಡಿಶಾ ಮೂಲದ ಮಹಿಳೆ ಸೇರಿದಂತೆ ಸಚಿವರ ಬೆಂಬಲಿಗರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಸಚಿವರ ಬೆಂಬಲಿಗರ ಇಬ್ಬರು ಕಾರು ಚಾಲಕರು ತಲೆಮರೆಸಿಕೊಂಡಿದ್ದು, ಅವರ ಶೋಧನಾ ಕಾರ್ಯ ಮುಂದುವರೆದಿದೆ.
ಸಚಿವಾಲಯದಿಂದ ಕೆಲಸ ಮಾಡಿಸಿಕೊಳ್ಳುವ ಉದ್ದೇಶದಿಂದ ಅಧಿಕಾರಿಗಳಿಗೆ ರೇವ್ ಪಾರ್ಟಿ ಆಯೋಜಿಸಲಾಗಿತ್ತು ಎಂದು ಶಂಕಿಸಿದ ಪೊಲೀಸರು ಇವರ ಬಳಿ ಇದ್ದ ಹಣ, ಮೊಬೈಲ್, ಲ್ಯಾಪ್ ಟಾಪ್ ಸೇರಿದಂತೆ ಒಟ್ಟು 16 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಕರ್ನಾಟಕ ಸರ್ಕಾರ ರೇವ್ ಪಾರ್ಟಿ ಮೇಲೆ ನಿಷೇಧ ಹೇರಿದೆ. ಆದರೆ ಕರ್ನಾಟಕ ಗಡಿ ಭಾಗಗಳಲ್ಲಿ, ಗೋವಾ, ಮಹಾರಾಷ್ಟ್ರ ಇನ್ನಿತರ ಪ್ರದೇಶಗಳಲ್ಲಿ ರೇವ್ ಪಾರ್ಟಿಗಳು ಕಡಿಮೆಯಾಗಿಯೇ ಇಲ್ಲ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications