ಮ್ಯಾಪ್ ಸಹಾಯದಿಂದ ಕಳ್ಳತನ; ಬೆಳಗಾವಿಯಲ್ಲಿ ಹೈಟೆಕ್ ಕಳ್ಳರ ಬಂಧನ
ಬೆಳಗಾವಿ, ಅಕ್ಟೋಬರ್ 27: ಗೂಗಲ್ ಮ್ಯಾಪ್ ಮೂಲಕ ನಗರದ ಹೊರವಲಯದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡಲು ಪ್ಲಾನ್ ಮಾಡುತ್ತಿದ್ದ ಖತರ್ನಾಕ್ ಕಳ್ಳರು ಇದೀಗ ಬೆಳಗಾವಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಇಸ್ತುರಲ್ ಗ್ರಾಮದ ಪ್ರಶಾಂತ ಕಾಶಿನಾಥ ಕರೋಶಿ (35) ಹಾಗೂ ಧಾಮಣಿ ಗ್ರಾಮದ ಅವಿನಾಶ್ ಶಿವಾಜಿ ಅಡಾವಕರ್ (28) ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಗೂಗಲ್ ಮ್ಯಾಪ್ ತಂತ್ರಜ್ಞಾನ ಬಳಕೆ ಮಾಡಿಕೊಂಡು ಬೆಳಗಾವಿ ನಗರ ಪ್ರದೇಶದ ಹೊರ ವಲಯದ ಮನೆಗಳನ್ನು ಸ್ಯಾಟಲೈಟ್ ಮೂಲಕ ಈ ಕಳ್ಳರು ಪತ್ತೆ ಮಾಡುತ್ತಿದ್ದರು. ನಂತರ, ಆ ಮನೆಯ ಅಕ್ಕಪಕ್ಕ ಏನೇನಿದೆ? ಎಷ್ಟು ಮನೆಗಳಿವೆ, ಮುಖ್ಯರಸ್ತೆಗೂ, ಆ ಮನೆಗೂ ಎಷ್ಟು ಅಂತರವಿದೆ? ಯಾರಾದರೂ ಬಂದರೆ ಎಸ್ಕೇಪ್ ಆಗಲು ಏನು ಮಾಡಬೇಕು? ಹೀಗೆ ಎಲ್ಲಾ ಸಂಗತಿಯನ್ನೂ ಗೂಗಲ್ ಮ್ಯಾಪ್ ಲೆಕ್ಕಾಚಾರ ಮಾಡಿಕೊಂಡು, ಸ್ಥಳ ಪರಿಶೀಲನೆಯನ್ನೂ ನಡೆಸುತ್ತಿದ್ದರು. ಎಲ್ಲಾ ತಿಳಿಯುತ್ತಿದ್ದಂತೆ ಒಂದು ದಿನ ನಿಗದಿಗೊಳಿಸಿ, ಆ ಮನೆಯಲ್ಲಿ ಕಳ್ಳತನಕ್ಕೂ ಮುಂದಾಗುತ್ತಿದ್ದರು.

ಈ ಎಲ್ಲಾ ಸಂಗತಿಗಳೂ ಹೊರಬಂದಿದ್ದು, ಬೆಳಗಾವಿ ನಗರದ ಕ್ಯಾಂಪ್ ಠಾಣೆಯ ಹೊರ ವಲಯದಲ್ಲಿ ನಡೆದ ಕಳ್ಳತನ ಪ್ರಕರಣದಿಂದ. ಈ ಪ್ರಕರಣದ ತನಿಖೆ ಕೈಗೊಂಡಿದ್ದ ಕ್ಯಾಂಪ್ ಠಾಣೆಯ ಪೊಲೀಸ್ ನಿರೀಕ್ಷಕ ಡಿ.ಸಂತೋಷ ಕುಮಾರ್, ಒಂದು ತಂಡ ರಚನೆ ಮಾಡಿದ್ದರು. ಪಕ್ಕದ ರಾಜ್ಯದ ಕಳ್ಳರೇ ಕಳ್ಳತನ ಎಸಗಿರುವ ಶಂಕೆ ಈ ಪ್ರಕರಣದಲ್ಲಿ ಕಂಡುಬಂದಿತ್ತು. ಹೀಗಾಗಿ ಪಕ್ಕದ ಮಹಾರಾಷ್ಟ್ರದ ಕೊಲ್ಲಾಪುರ ಕ್ರೈಮ್ ತನಿಖಾ ತಂಡದಿಂದ ಮಾಹಿತಿ ಪಡೆದ ಪೊಲೀಸರು, ಇಲ್ಲಿ ನಡೆದ ಅಪರಾಧದ ಮಾಹಿತಿ ನೀಡಿ ಅಲ್ಲಿದ್ದ ಕೆಲವು ಶಂಕಿತ ಆರೋಪಿಗಳ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬೆಳಗಾವಿ ನಗರಕ್ಕೆ ಬಂದು ಕಳ್ಳತನ ಮಾಡಿ ವಾಪಸಾಗುತ್ತಿದ್ದ ಸಂಗತಿಯೂ ತಿಳಿದುಬಂದಿದೆ. ಈ ಮೂಲಕ ಬೆಳಗಾವಿ ನಗರದ ಲಕ್ಷ್ಮೀ ಟೆಕ್, ನಕ್ಷತ್ರ ಕಾಲೊನಿಯಲ್ಲಿನ ಮನೆ ಕಳ್ಳತನ ಸೇರಿದಂತೆ ನಗರದ ಮೂರು ಪ್ರತ್ಯೇಕ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ 28.08 ಲಕ್ಷ ಮೌಲ್ಯದ ಚಿನ್ನದ ಆಭರಣಗಳು ಹಾಗೂ 11.50 ಲಕ್ಷ ಮೌಲ್ಯದ ಕಾರು ಸೇರಿದಂತೆ ಒಟ್ಟು 40 ಲಕ್ಷ ಮೌಲ್ಯದ ಸ್ವತ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications