ಬೆಳಗಾವಿ: ಸಭೆಗೂ ಮುನ್ನ ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ
ಬೆಳಗಾವಿ, ಏಪ್ರಿಲ್ 10: ಸಾರಿಗೆ ನೌಕರರಿಗೆ ಆರನೇ ವೇತನ ಆಯೋಗ ಜಾರಿಗೊಳಿಸಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಶನಿವಾರ ಸಭೆ ಆಯೋಜಿಸಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳಗಾವಿಯಲ್ಲಿ ರೈತರು ಹಾಗೂ ಮುಷ್ಕರ ನಿರತ ಸರ್ಕಾರಿ ನೌಕರರನ್ನು ಭೇಟಿ ಮಾಡಿ ಚರ್ಚಿಸಲು ಕೋಡಿಹಳ್ಳಿ ಚಂದ್ರಶೇಖರ್ ಅವರು ತೆರಳಿದ್ದರು. ಸಾರಿಗೆ ನೌಕರಿಗೆ ಆರನೇ ವೇತನ ಆಯೋಗ ಜಾರಿಗೊಳಿಸುವುದಿಲ್ಲ ಎಂದು ಸರ್ಕಾರ ಪಟ್ಟು ಹಿಡಿದಿರುವುದರಿಂದ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲು ಅವರು ಉದ್ದೇಶಿಸಿದ್ದರು. ಆದರೆ ಅವರು ಉಳಿದುಕೊಂಡಿದ್ದ ಮಿಲನ್ ಹೋಟೆಲ್ನಿಂದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಹಳ್ಳಿ, ಮುಂಜಾಗ್ರತಾ ಕ್ರಮದಿಂದ ವಶಕ್ಕೆ ಪಡೆದುಕೊಳ್ಳುತ್ತಿರುವುದಾಗಿ ಹೇಳುತ್ತಿದ್ದಾರೆ. ಆದರೆ ಇದಕ್ಕೆ ನಿಖರ ಕಾರಣ ಗೊತ್ತಿಲ್ಲ. ಇದು ಸರಿಯಲ್ಲ. ಚಳವಳಿಯನ್ನು ಹತ್ತಿಕ್ಕುವ ಕ್ರಮ ಇದು. ಈ ಬಂಧನ ಅಕ್ರಮ ಮತ್ತು ಧಮನಕಾರಿ ಎಂದು ಆರೋಪಿಸಿದರು.

ವಾಕ್ ಸ್ವಾತಂತ್ರ್ಯ ಮತ್ತು ಚಳವಳಿ ನಡೆಸುವ ಸ್ವಾತಂತ್ರ್ಯ ಇರಬೇಕು. ಆದರೆ ಈ ವಿಚಾರದಲ್ಲಿ ಸರ್ಕಾರ ತಪ್ಪು ನಿರ್ಧಾರ ತೆಗೆದುಕೊಂಡಿದೆ ಎಂದು ಟೀಕಿಸಿದರು.
ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕೋಡಿಹಳ್ಳಿ ಚಂದ್ರಶೇಖರ್, ಬೆಳಗಾವಿಯಲ್ಲಿ ಶನಿವಾ ಮತ್ತು ನಂತರ ಕಲಬುರ್ಗಿಯಲ್ಲಿ ಸಭೆ ನಡೆಸಲಾಗುವುದು. ಯುಗಾದಿ ಹಬ್ಬದ ದಿನದಂದು ಎಲ್ಲ ಕಡೆಗಳಲ್ಲಿಯೂ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ ಮೂಲಕ ನೌಕರರ ಕುಟುಂಬದವರು ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದರು.
ಸಾರಿಗೆ ನಿಗಮಗಳ ನೌಕರರಿಗೆ ಮಾರ್ಚ್ ತಿಂಗಳ ಸಂಬಳ ಪಾವತಿಸಿಲ್ಲ. ಯುಗಾದಿ ಹಬ್ಬದ ಬೋನಸ್ ಕೂಡ ನಿರಾಕರಿಸಲಾಗಿದೆ. ಯುಗಾದಿ ಹಬ್ಬ ಸಾರಿಗೆ ನೌಕರರ ಪಾಲಿಗೆ ಕಹಿ ತಂದಿದೆ. ಹಬ್ಬದ ದಿನದಂದು ನೌಕರರು ತಟ್ಟೆ, ಲೋಟ ಬಡಿದು ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications