ಜೂಗುಳ: ಇಡೀ ಗ್ರಾಮವನ್ನೇ ಅಪಾಯದಿಂದ ಪಾರು ಮಾಡಿ ರಿಯಲ್ ಹೀರೋ ಆದ ಪವರ್ ಮ್ಯಾನ್ ಆನಂದ್
ಬೆಳಗಾವಿ, ಜುಲೈ, 31: ಸಾಮಾನ್ಯವಾಗಿ ವಿದ್ಯುತ್ ಕೈಕೊಟ್ಟಾಗ ಜನರು ಇಲಾಖೆ ಸಿಬ್ಬಂದಿಗೆ ಹಿಡಿಶಾಪ ಹಾಕುತ್ತಾರೆ. ಆದರೆ, ವಿದ್ಯುತ್ ನೀಡಲು ಸಿಬ್ಬಂದಿ ಎಂತಹ ಅಪಾಯಗಳನ್ನು ಬೇಕಾದರೂ ಎದುರಿಸುತ್ತಾರೆ ಎಂಬುದಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ.
ಮಳೆ ನೀರು ನದಿಯಂತೆ ಹರಿಯುತ್ತಿದ್ದು, ಇಂತಹ ಪರಿಸ್ಥಿತಿಯಲ್ಲೇ ವಿದ್ಯುತ್ ಕಡಿತ ಮೂಲಕ ಬೆಳಗಾವಿ ಜಿಲ್ಲೆಯ ಹೆಸ್ಕಾಂನ ಪವರ್ ಮ್ಯಾನ್ ಆನಂದ್ ಹೆರವಾಡಿ ಸಾಹಸ ಮೆರೆದಿದ್ದಾರೆ. ಅವರ ಈ ಕಾರ್ಯವೈಖರಿ ಈಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಲ್ಲದೆ, ಅವರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.

ಜಿಲ್ಲೆಯ ಕಾಗವಾಡ ತಾಲೂಕಿನ ಜೂಗುಳ ಗ್ರಾಮದ ನದಿ ತೀರದ ಹೊಲವನ್ನು ಆವರಿಸಿದ್ದ ಪ್ರವಾಹದಲ್ಲಿ ಧುಮುಕಿ ವಿದ್ಯುತ್ ಸಂಪರ್ಕ ಕಡಿತ ಮಾಡಿ ಯಾವುದೇ ಅನಾಹುತ ಸಂಭವಿಸದಂತೆ ನೋಡಿಕೊಂಡ ಆನಂದ್ ಹೆರವಾಡಿ ಆ ಭಾಗದ ಜನರ ಪಾಲಿಗೆ ರಿಯಲ್ ಹೀರೋ ಆಗಿದ್ದಾರೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಜೂಗುಳ ಗ್ರಾಮದಲ್ಲಿ ವಿದ್ಯುತ್ ಟಿಸಿ ಜಲಾವೃತಗೊಂಡಿದ್ದು, ವಿದ್ಯುತ್ ಪರಿವರ್ತಕ ಹಾಳಾಗಿ ಶಾರ್ಟ್ ಆಗುವ ಭೀತಿ ಎದುರಾಗಿತ್ತು.
ಗದ್ದೆಗಳ ಪಂಪಸೆಟ್ಗಳಿಗೆ ಅಳವಡಿಸಿದ್ದ ಟಿಸಿ ನೀರಿನಲ್ಲಿ ಮುಳುಗಿ, ಶಾರ್ಟ್ ಆದರೆ ಗ್ರಾಮಕ್ಕೆ ವಿದ್ಯುತ್ ಸಮಸ್ಯೆ ಎದುರಾಗುವ ಸಾಧ್ಯತೆ ಇತ್ತು. ಅಲ್ಲದೆ, ವಿದ್ಯುತ್ ಪ್ರವಹಿಸಿ ಪ್ರಾಣಾಪಾಯ ಆಗುವ ಸಾಧ್ಯತೆಯೂ ಇತ್ತು. ಈ ಪರಿಸ್ಥಿತಿಯನ್ನು ಅರಿತ ಪವರ್ ಮ್ಯಾನ್ ಆನಂದ್ ಹೆರವಾಡಿ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ನೀರಿನಲ್ಲಿ ಈಜಿ, ಟಿಸಿ ಇದ್ದ ಕಂಬವೇರಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಹೆಸ್ಕಾಂನ ಪವರ್ ಮ್ಯಾನ್ ಆನಂದ್ ಹೆರವಾಡಿಯ ಈ ಕೆಲಸಕ್ಕೆ ಇದೀಗ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications