2019ರ ಲೋಕಸಭೆ ಚುನಾವಣೆಗೆ ಪ್ರಭಾಕರ ಕೋರೆ ಸ್ಪರ್ಧೆ
ಬೆಳಗಾವಿ, ಸೆಪ್ಟೆಂಬರ್ 30 : ರಾಜ್ಯಸಭಾ ಸದಸ್ಯ ಮತ್ತು ಹಿರಿಯ ಬಿಜೆಪಿ ನಾಯಕ ಪ್ರಭಾಕರ ಕೋರೆ ಅವರು 2019ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದಾರೆ. ಅಚ್ಚರಿಯ ವಿಷಯವೆಂದರೆ ಪ್ರಭಾಕರ ಕೋರೆ ಮತ್ತು ಅವರ ಪುತ್ರ ಇಬ್ಬರೂ ಒಂದೇ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಭಾಕರ ಕೋರೆ ಅವರು, 'ಲೋಕಸಭೆ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದೇನೆ' ಎಂದು ಹೇಳಿದರು.
'ನಾನು ಮತ್ತು ನನ್ನ ಪುತ್ರ ಅಮಿತ್ ಇಬ್ಬರೂ ಚಿಕ್ಕೋಡಿ ಕ್ಷೇತ್ರದಿಂದ ಚುನಾವನಾ ಕಣಕ್ಕಿಳಿಯಲು ನಿರ್ಧರಿಸಿದ್ದೇವೆ. ಆದರೆ, ಸ್ಪರ್ಧೆ ಕುರಿತು ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನವನ್ನು ಕೈಗೊಳ್ಳಬೇಕು' ಎಂದರು.

2014ರ ಲೋಕಸಭೆ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದಿಂದ ಕಾಂಗ್ರೆಸ್ ಪ್ರಕಾಶ್ ಹುಕ್ಕೇರಿ ಅವರು 474373 ಮತಗಳನ್ನು ಪಡೆದು ಜಯಗಳಿಸಿದ್ದಾರೆ. 2013ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು, ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಪ್ರಕಾಶ್ ಹುಕ್ಕೇರಿ ಅವರನ್ನು ಲೋಕಸಭೆ ಚುನಾವಣಾ ಕಣಕ್ಕಿಳಿಸಿ ಕಾಂಗ್ರೆಸ್ ಗೆಲ್ಲಿಸಿತ್ತು.
ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕತ್ತಿ ರಮೇಶ್ ವಿಶ್ವನಾಥ್ ಸ್ಪರ್ಧೆ ಮಾಡಿದ್ದರು. 471370 ಮತಗಳನ್ನು ಪಡೆದು ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದರು. ಈ ಬಾರಿಯ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ? ಎಂಬುದನ್ನು ಕಾದು ನೋಡಬೇಕಿದೆ.
ಮಹಿಳಾ ನಾಯಕಿ ಹೆಸರು ಹೇಳಲಿ : ಬಿಜೆಪಿ ನನಗೆ ಸಚಿವ ಸ್ಥಾನ ಮತ್ತು 30 ಕೋಟಿ ಹಣದ ಆಮಿಷ ನೀಡಿತ್ತು ಎಂಬ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಪ್ರಭಾಕರೆ ಕೋರೆ ಅವರು, 'ಅಮಿಷವೊಡ್ಡಿದ ಬಿಜೆಪಿ ನಾಯಕಿ ಹೆಸರನ್ನು ಅವರು ಬಹಿರಂಗ ಪಡಿಸಲಿ' ಎಂದರು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು?











Click it and Unblock the Notifications