ಪೇಜಾವರರ ಇಫ್ತಾರ್ ಕೂಟಕ್ಕೆ ಮುತಾಲಿಕ್ ವಿರೋಧ
ಬೆಳಗಾವಿ, ಜೂನ್ 2: ಉಡುಪಿಯಲ್ಲಿ ಈ ಬಾರಿಯೂ ಮುಸ್ಲಿಮರಿಗೆ ರಂಜಾನ್ ಮಾಸಾಚರಣೆ ಪ್ರಯುಕ್ತ ಇಫ್ತಾರ್ ಕೂಟ ಆಯೋಜಿಸುವ ಪೇಜಾವರ ಸ್ವಾಮೀಜಿಗಳ ನಿರ್ಧಾರವನ್ನು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರೋಧಿಸಿದ್ದಾರೆ.
ಇಫ್ತಾರ್ ಕೂಟವನ್ನು ಆಯೋಜಿಸಿರುವುದು ಸರಿಯಲ್ಲ. ಅದರ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ವಿಡಿಯೋವೊಂದನ್ನು ಮಾಡಿರುವ ಮುತಾಲಿಕ್, ಸೌಹಾರ್ದ ತರುವ ಪ್ರಯತ್ನಗಳು ಒಂದು ಸಮುದಾಯದಿಂದ ಮಾತ್ರ ನಡೆಯುತ್ತಿದೆ. ಇನ್ನೊಂದು ಕಡೆಯಿಂದಲೂ ಅಂತಹ ಪ್ರಯತ್ನಗಳು ನಡೆದರೆ ಮಾತ್ರ ಅದಕ್ಕೆ ಅರ್ಥ ಬರುತ್ತದೆ ಎಂದಿದ್ದಾರೆ.

'ಪೂಜ್ಯ ಪೇಜಾವರ ಸ್ವಾಮೀಜಿ ಅವರು ಮಠದ ಆವರಣದ ಹೊರಗೆ ಎಲ್ಲೋ ಮತ್ತೆ ಈ ವರ್ಷ ಇಫ್ತಾರ್ ಕೂಟ ಆಯೋಜನೆ ಮಾಡುವುದಾಗಿ ಹೇಳಿದ್ದಾರೆ. ಇದನ್ನು ಖಂಡಿಸುತ್ತೇವೆ.
ಪೂಜ್ಯ ಪೇಜಾವರ ಸ್ವಾಮೀಜಿ ಬಗ್ಗೆ ಗೌರವವಿದೆ. ಅವರು ಅತ್ಯಂತ ಜ್ಞಾನಿಗಳು. ಅವರ ಮುಂದೆ ನಾವು ಏನೂ ಅಲ್ಲ. ಆದರೆ ನಮ್ಮದೂ ಒಂದು ಕರ್ತವ್ಯ ಇದೆ. ಗೋಮಾತೆಯ ರಕ್ಷಣೆಯ ಹಿನ್ನೆಲೆಯಲ್ಲಿ ನಾವು ಈ ಇಫ್ತಾರ್ ಕೂಟವನ್ನು ವಿರೋಧಿಸುತ್ತಿದ್ದೇವೆ' ಎಂದು ಮುತಾಲಿಕ್ ಹೇಳಿದ್ದಾರೆ.
ಸೌಹಾರ್ದ ಎನ್ನುವುದು ಒಂದು ಕಡೆಯಿಂದ ಆಗಬಾರದು. ಹಿಂದೂಗಳಿಗೆ ಮಾತ್ರ ಸೌಹಾರ್ದದ ಉಪದೇಶ ಮಾಡುವಂತೆ ಆಗಬಾರದು. ಮುಸ್ಲಿಂ ಬಾಂಧವರಿಗೂ ಸೌಹಾರ್ದದ ಉಪದೇಶ ಮಾಡಬೇಕು. ಅವರ ಮಸೀದಿ ಒಳಗೆ ಗಣೇಶ ಮೂರ್ತಿಯನ್ನು ಇರಿಸಿ ಪೂಜೆ ಮಾಡಿದರೆ ಆಗ ಸೌಹಾರ್ದ ಸಾಕಾರವಾಗುತ್ತದೆ.
ರಾಮಮಂದಿರ ಕಟ್ಟುವಂತಹ ಕಾರ್ಯಕ್ಕೆ ನಮ್ಮ ಅಭ್ಯಂತರ ಇಲ್ಲ ಎಂದು ಸಹಕಾರ ಕೊಟ್ಟರೆ ಅದು ಸೌಹಾರ್ದ ಆಗುತ್ತದೆ. ನೂರು ಕೋಟಿ ಜನ ಹಿಂದೂಗಳು ರಾಮಮಂದಿರದ ಜಪ ಮಾಡ್ತಿದ್ದೇವೆ. ಗೋ ಮಾತೆಯ ಬಗ್ಗೆ ಮಾತನಾಡುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಸೌಹಾರ್ದದ ಪ್ರಯತ್ನ ಒಂದು ಕಡೆಯಿಂದ ಮಾತ್ರ ಆಗುತ್ತಿರುವುದನ್ನು ಖಂಡಿಸುತ್ತಿದ್ದೇವೆ ಎಂದು ಮುತಾಲಿಕ್ ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications