ಮೌಢ್ಯ ವಿರೋಧಿ ಸಂಕಲ್ಪ ದಿನ: ಪೂರ್ವ ಸಿದ್ಧತೆ ಪರಿಶೀಲನೆ
ಬೆಳಗಾವಿ, ಡಿಸೆಂಬರ್ 04 : ನಗರದ ಮಹಾನಗರ ಪಾಲಿಕೆಯ ಸದಾಶಿವ ನಗರದ ಬುದ್ಧ ಬಸವ ಅಂಬೇಡ್ಕರ್ ಶಾಂತಿಧಾಮ (ಸ್ಮಶಾನದಲ್ಲಿ) ಮಾನವ ಬಂಧುತ್ವ ವೇದಿಕೆ ವತಿಯಿಂದ ಡಿ.06 ರಂದು ಮೌಢ್ಯ ವಿರೋಧಿ ಸಂಕಲ್ಪ ದಿನ ನಡೆಯಲಿದೆ.
ಶಾಸಕ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಕಾರ್ಯಕ್ರಮ ನಡೆಯಲಿದೆ. ಸಮಾರಂಭದ ಪೂರ್ವ ಸಿದ್ಧತೆಗಳನ್ನು ಭಾನುವಾರ (ಡಿ.03)ರಂದು ಶಾಸಕ ಸತೀಶ್ ಜಾರಕಿಹೊಳಿ ಅವರು ಪರಿಶೀಲಿಸಿದರು.

ಬುದ್ಧ ಬಸವ ಅಂಬೇಡ್ಕರ್ ಶಾಂತಿಧಾಮದಲ್ಲಿ ಕಳೆದ 15 ದಿನಗಳಿಂದ ನಡೆಯುತ್ತಿರುವ ಸಿದ್ಧತಾ ಕಾರ್ಯಗಳು ಅಂತಿಮ ಹಂತಕ್ಕೆ ತಲುಪಿದ್ದು ಈ ಹಿನ್ನೆಲೆಯಲ್ಲಿ ಶಾಸಕರು ಸಿದ್ಧತೆ ಕಾರ್ಯಗಳು ವಿಕ್ಷಿಸಿದ ನಂತರ ಸಂಘಟಿಕರೊಂದಿಗೆ ಕಾರ್ಯಕ್ರಮದ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಕಳೆದ 3 ವರ್ಷಗಳಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಈ ಬಾರಿ ಸುಮಾರು 50 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಸದಾಶಿವ ನಗರದ ರುದ್ರಭೂಮಿ ಮದುವೆ ಮನೆಯಂತೆ ಕಂಗೊಳಿಸುತ್ತಿದ್ದು ಇದರ ಸಿದ್ಧತೆಗಳನ್ನು ಕಂಡು ಶಾಸಕರು ಮೆಚ್ಚುಗೆ ವ್ಯಕತಪಡಿಸಿದರು.

ಅಲ್ಲದೇ ರಾಜ್ಯಾದ್ಯಂತದಿಂದ ಬರುವ ಜನರಿಗೆ ಕಾರ್ಯಕ್ರಮದಲ್ಲಿ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಬರುವ ಜನರಿಗೆ ಉಪಹಾರ, ಊಟ ನೀರು ಆಸನಗಳ ವ್ಯವಸ್ಥೆಗಳನ್ನು ಯಾವುದೇ ರೀತಿಯ ತೊಂದರೆಯಾಗದಂತೆ ಒದಗಿಸಿಕೊಡಬೇಕೆಂದು ಶಾಸಕರು ಸಂಘಟಿಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಂಘಟಕರುಗಳಾದ ಮಹೇಶ ಕಡಪಟ್ಟಿ, ನಾಡಗೌಡ (ಢವಳೇಶ್ವರ), ಮಲಗೌಡ ಪಾಟೀಲ, ಆರೀಪ ಪೀರಜಾದೆ, ವಿಜಯ ತಳವಾರ, ಅಲ್ಲಾಖಾನ, ಹಬೀಬ ಶಿಲ್ಲೇದಾರ, ಅನಿಲ ಪಾವಸೆ, ರವಿ ಹಂದಿಗುಂದ, ರಮೇಶ ಪಾಟೀಲ ಮತ್ತು ಇತರರು ಉಪಸ್ತಿತರಿದ್ದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಧುರೈ ಏಕೆ? ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ಏರ್ಪೋರ್ಟಾಗಿ ಘೋಷಿಸಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ











Click it and Unblock the Notifications