ಮೌಢ್ಯ ವಿರೋಧಿ ಸಂಕಲ್ಪ ದಿನ: ಪೂರ್ವ ಸಿದ್ಧತೆ ಪರಿಶೀಲನೆ
ಬೆಳಗಾವಿ, ಡಿಸೆಂಬರ್ 04 : ನಗರದ ಮಹಾನಗರ ಪಾಲಿಕೆಯ ಸದಾಶಿವ ನಗರದ ಬುದ್ಧ ಬಸವ ಅಂಬೇಡ್ಕರ್ ಶಾಂತಿಧಾಮ (ಸ್ಮಶಾನದಲ್ಲಿ) ಮಾನವ ಬಂಧುತ್ವ ವೇದಿಕೆ ವತಿಯಿಂದ ಡಿ.06 ರಂದು ಮೌಢ್ಯ ವಿರೋಧಿ ಸಂಕಲ್ಪ ದಿನ ನಡೆಯಲಿದೆ.
ಶಾಸಕ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಕಾರ್ಯಕ್ರಮ ನಡೆಯಲಿದೆ. ಸಮಾರಂಭದ ಪೂರ್ವ ಸಿದ್ಧತೆಗಳನ್ನು ಭಾನುವಾರ (ಡಿ.03)ರಂದು ಶಾಸಕ ಸತೀಶ್ ಜಾರಕಿಹೊಳಿ ಅವರು ಪರಿಶೀಲಿಸಿದರು.

ಬುದ್ಧ ಬಸವ ಅಂಬೇಡ್ಕರ್ ಶಾಂತಿಧಾಮದಲ್ಲಿ ಕಳೆದ 15 ದಿನಗಳಿಂದ ನಡೆಯುತ್ತಿರುವ ಸಿದ್ಧತಾ ಕಾರ್ಯಗಳು ಅಂತಿಮ ಹಂತಕ್ಕೆ ತಲುಪಿದ್ದು ಈ ಹಿನ್ನೆಲೆಯಲ್ಲಿ ಶಾಸಕರು ಸಿದ್ಧತೆ ಕಾರ್ಯಗಳು ವಿಕ್ಷಿಸಿದ ನಂತರ ಸಂಘಟಿಕರೊಂದಿಗೆ ಕಾರ್ಯಕ್ರಮದ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಕಳೆದ 3 ವರ್ಷಗಳಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಈ ಬಾರಿ ಸುಮಾರು 50 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಸದಾಶಿವ ನಗರದ ರುದ್ರಭೂಮಿ ಮದುವೆ ಮನೆಯಂತೆ ಕಂಗೊಳಿಸುತ್ತಿದ್ದು ಇದರ ಸಿದ್ಧತೆಗಳನ್ನು ಕಂಡು ಶಾಸಕರು ಮೆಚ್ಚುಗೆ ವ್ಯಕತಪಡಿಸಿದರು.

ಅಲ್ಲದೇ ರಾಜ್ಯಾದ್ಯಂತದಿಂದ ಬರುವ ಜನರಿಗೆ ಕಾರ್ಯಕ್ರಮದಲ್ಲಿ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಬರುವ ಜನರಿಗೆ ಉಪಹಾರ, ಊಟ ನೀರು ಆಸನಗಳ ವ್ಯವಸ್ಥೆಗಳನ್ನು ಯಾವುದೇ ರೀತಿಯ ತೊಂದರೆಯಾಗದಂತೆ ಒದಗಿಸಿಕೊಡಬೇಕೆಂದು ಶಾಸಕರು ಸಂಘಟಿಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಂಘಟಕರುಗಳಾದ ಮಹೇಶ ಕಡಪಟ್ಟಿ, ನಾಡಗೌಡ (ಢವಳೇಶ್ವರ), ಮಲಗೌಡ ಪಾಟೀಲ, ಆರೀಪ ಪೀರಜಾದೆ, ವಿಜಯ ತಳವಾರ, ಅಲ್ಲಾಖಾನ, ಹಬೀಬ ಶಿಲ್ಲೇದಾರ, ಅನಿಲ ಪಾವಸೆ, ರವಿ ಹಂದಿಗುಂದ, ರಮೇಶ ಪಾಟೀಲ ಮತ್ತು ಇತರರು ಉಪಸ್ತಿತರಿದ್ದರು.
-
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications