ಕಿತ್ತೂರು ಉತ್ಸವದಲ್ಲಿ ಖಾಸಗಿ ಬೌನ್ಸರ್ಗಳ ದರ್ಬಾರ್: ಜನ ಹೈರಾಣು
ಬೆಳಗಾವಿ, ಅಕ್ಟೋಬರ್ 24: ಉತ್ತರ ಕರ್ನಾಟಕದ ಹೆಮ್ಮೆಯ ಕಿತ್ತೂರು ಉತ್ಸವದಲ್ಲಿ ಸಮರ್ಥವಾಗಿ ಜಿಲ್ಲಾ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದ್ದರೂ ಖಾಸಗಿ ಬೌನ್ಸರ್ ಗಳ ನಿಯೋಜನೆ ಮಾಡಿರುವುದು ಕಿತ್ತೂರು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಐತಿಹಾಸಿಕ ಕಿತ್ತೂರಿನ 200ನೇ ವರ್ಷದ ಉತ್ಸವದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಇದ್ದರೂ, ಹೆಚ್ಚುವರಿ ಖಾಸಗಿ ಬೌನ್ಸರ್ ನಿಯೋಜನೆ ಮಾಡಿದ್ದು ಕಿತ್ತೂರು ತಾಲೂಕಿನ ಜನರ ಕಿರಿಕಿರಿಗೆ ಕಾರಣವಾಗಿದೆ. ಬೌನ್ಸರ್ ತಂಡಗಳ ಅತಿಯಾದ ವರ್ತನೆಯಿಂದ ಜನ ಉತ್ಸವವನ್ನು ಸಂಭ್ರಮಿಸಲು ಅಡ್ಡಿಯಾಗುತ್ತಿದ್ದು, ಕೆಲವರು ಅರ್ಧದಿಂದಲೇ ಉತ್ಸವದಿಂದ ಮರಳುತ್ತಿದ್ದಾರೆ ಎನ್ನಲಾಗಿದೆ.

ಕಿತ್ತೂರು ಉತ್ಸವಕ್ಕೆ 9 ಡಿವೈಎಸ್ಪಿ, 26 ಸಿಪಿಐ, 56. ಎಎಸ್ಐ ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಆದರೆ ಕಿತ್ತೂರು ಉತ್ಸವದ ಖರ್ಚು ವೆಚ್ಚ ತೋರಿಸಲು ಖಾಸಗಿ ಬಾನ್ಸರ್ಗಳನ್ನು ನೇಮಕ ಮಾಡಿರುವುದು ಕಿತ್ತೂರು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಪೊಲೀಸರು ಕಿತ್ತೂರು ಉತ್ಸವಕ್ಕೆ ಬರುವ ಜನರಿಗೆ ಸೌಜನ್ಯದಿಂದ ವರ್ತಿಸುತ್ತಿದ್ದಾರೆ. ಆದರೆ ಖಾಸಗಿ ಬೌನ್ಸರ್ಗಳು ಸಾರ್ವಜನಿಕರೊಂದಿಗೆ ಕೆಟ್ಟ ರೀತಿಯಲ್ಲಿ ವರ್ತನೆ ಮಾಡುತ್ತಿದ್ದಾರೆ ಎನ್ನುವ ಆರೋಪ ಜೋರಾಗಿದೆ. ಇಲ್ಲಿಯವರೆಗೆ ನಡೆದ ಕಿತ್ತೂರು ಉತ್ಸವದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಸಮರ್ಥವಾಗಿ ಮಾಡಿಕೊಂಡು ಬಂದಿದೆ.

ಆದರೆ 200ನೇ ವರ್ಷದ ಕಿತ್ತೂರು ಉತ್ಸವದಲ್ಲಿ ಪೊಲೀಸರಿಗಿಂತ ಖಾಸಗಿ ಬಾನ್ಸರ್ಗಳೇ ಹೆಚ್ಚಾಗಿ ಕಂಡು ಬಂದಿದ್ದು ಪೊಲೀಸ್ ಇಲಾಖೆಯ ಮೇಲೆಯೇ ಕಿತ್ತೂರಿನ ಜನ ಅನುಮಾನ ಪಡುತ್ತಿದ್ದಾರೆ. ಉಳಿದ ಎರಡು ದಿನದ ಉತ್ಸವದಲ್ಲಿ ಈ ಬೌನ್ಸರ್ ಗಳನ್ನು ತೆಗೆದು ಹಾಕಿ ಪೊಲೀಸರೇ ಭದ್ರತೆ ನೀಡಿದರೆ ಸಾಕು ಎನ್ನುವ ಮಾತು ಕಿತ್ತೂರು ಜನರ ಒತ್ತಾಯವಾಗಿದೆ.
ವೀರ ರಾಣಿ ಕಿತ್ತೂರು ಚನ್ನಮ್ಮನ ಐತಿಹಾಸಿಕ 200ನೇ ವಿಜಯೋತ್ಸವ ಮತ್ತು ಕಿತ್ತೂರು ಉತ್ಸವ-2024ಕ್ಕೆ ಈಗಾಗಲೇ ಅದ್ಧೂರಿ ಚಾಲನೆ ನೀಡಲಾಗಿದೆ. ಕಿತ್ತೂರಿನ ಜನ ಬಹುದಿನದಿಂದ ಕಾದಿದ್ದ ಬೃಹತ್ ಉತ್ಸವಕ್ಕೆ ಚಾಲನೆ ಸಿಕ್ಕಿದ್ದು, ಕಿತ್ತೂರು ಮಾತ್ರವಲ್ಲದೇ ಬೆಳಗಾವಿ ಜಿಲ್ಲೆಯ ಇತರ ಕಡೆಗಳಿಂದ ಜನ ತಂಡೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. ಆದರೆ ಕಿತ್ತೂರು ಉತ್ಸವನ್ನು ಸಂಭ್ರಮಿಸಲು ಬಂದ ಜನಕ್ಕೆ ಖಾಸಗಿ ಬೌನ್ಸರ್ಗಳ ಕಾಟ ಹೆಚ್ಚಾಗಿದ್ದು, ಕೂಡಲೇ ಅವರನ್ನು ವಜಾಗೊಳಿಸಬೇಕು ಎನ್ನುವ ಆಗ್ರಹ ಜೋರಾಗಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನ ಹರಿಸಬೇಕಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications