ಮುಂದುವರೆದ ವೈದ್ಯರ ಧರಣಿ: ಮೃತರ ಸಂಖ್ಯೆ ಐದಕ್ಕೆ ಏರಿಕೆ
ಬೆಳಗಾವಿ, ನವೆಂಬರ್ ೧೪ : ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ 2017 (ಕೆಪಿಎಂಇ) ಮಾಡಿರುವ ತಿದ್ದುಪಡಿಯಲ್ಲಿನ ಕೆಲವು ಅಂಶಗಳನ್ನು ಕೈಬಿಡುವಂತೆ ಆಗ್ರಹಿಸಿ ಭಾರತೀಯ ವೈದ್ಯ ಸಂಘದ (ಐಎಂಎ) ರಾಜ್ಯ ಘಟಕದ ಸದಸ್ಯರು ಬೆಳಗಾವಿಯಲ್ಲಿ ಧರಣಿ ಮುಂದುವರೆಸಿದ್ದಾರೆ.
ಹಲವು ಖಾಸಗಿ ಆಸ್ಪತ್ರೆಗಳನ್ನು ಸುತ್ತಾಡಿದ ಬಳಿಕ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದಾಗ ಮೃತಪಟ್ಟಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಖಾಸಗಿ ವೈದ್ಯರ ಪ್ರತಿಭಟನೆ ಹಿನ್ನೆಲೆ ಚಿಕಿತ್ಸೆ ಸಿಗದೆ ಚಿಕ್ಕೋಡಿಯ ಬಾಲಕಿಯೊಬ್ಬಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಕಲ್ಲವ್ವ ಶ್ರೀಶೈಲ್ ಅಂಬಿ(೧೨) ಮೃತ ಬಾಲಕಿ.
ರಕ್ತವಾಂತಿ ರೋಗದಿಂದ ಬಳಲುತ್ತಿದ್ದ ಬಾಲಕಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಾದ ಬಾಲಕಿ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾಳೆ.
ವೈದ್ಯರ ಮುಷ್ಕರದಿಂದ ಈಗಾಗಲೇ ನಾಲ್ಕು ಜೀವಗಳು ಬಲಿಯಾಗಿವೆ. ಹಾಸನದಲ್ಲಿ ಇಂದು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಗು ಸಾವನ್ನಪ್ಪಿದೆ . ಸಕಾಲಕ್ಕೆ ಚಿಕಿತ್ಸೆ ದೊರೆಯದ ಹಿನ್ನೆಲೆಯಲ್ಲಿ ಪಿಡಿಒ ಮೃತಪಟ್ಟಿದ್ದಾರೆ. ಗಂಗಾವತಿ ತಾಲೂಕಿನ ಮುಕ್ಕುಂಪಿ ಗ್ರಾಮದಲ್ಲಿ ಪಿಡಿಒ ಗ್ಯಾನಪ್ಪ ಬಡ್ನಾಳ (56) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕೊಪ್ಪಳ ತಾಲೂಕಿನ ವನಬಳ್ಳಾರಿ ಗ್ರಾಮಪಂಚಾಯತ್ ನ ಪಿಡಿಒ ಆಗಿದ್ದ ಗ್ಯಾನಪ್ಪ ಅವರಿಗೆ ಬೆಳಗಿನ ವೇಳೆ ಹೃದಯಾಘಾತವಾಗಿದೆ. ಗಂಗಾವತಿಯ ಖಾಸಗಿ ಆಸ್ಪತ್ರೆ ಬಾಗಿಲು ಮುಚ್ಚಿ ವೈದ್ಯರು ಮುಷ್ಕರಕ್ಕೆ ತೆರಳಿದ್ದರು. ಇದರಿಂದಾಗಿ ಪಿಡಿಒಗೆ ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿದ್ದಾರೆ. ಸಾರ್ವಜನಿಕರು ಇವರಿಬ್ಬರ ಮುಸುಕಿನ ಆಟದಲ್ಲಿ ನಮ್ಮನ್ನು ಯಾಕೆ ಹೊಣೆ ಮಾಡುತ್ತಿದ್ದೀರ ಎಂದು ಬೇಸರ ವ್ಯಕ್ತಪಡಿಸಿದರು.
ಸೋಮವಾರ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಹೊರ ರೋಗಿಗಳು ಪರದಾಡಿದ್ದರು. ಆದರೆ ಮಂಗಳವಾರ ಹೊರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಂದೊಮ್ಮೆ ಬೆಳಗಾವಿಯಲ್ಲಿ ಧರಣಿಯಲ್ಲಿ ನಿರತರಾಗಿರುವ ವೈದ್ಯರು ಚಿಕಿತ್ಸೆ ನೀಡದಂತೆ ಸೂಚಿಸಿದರೆ ತಕ್ಷಣವೇ ಚಿಕಿತ್ಸೆ ನೀಡುವುದನ್ನು ನಿಲ್ಲಿಸುತ್ತೇವೆ ಎಂದು ವೈದ್ಯರು ತಿಳಿಸಿದರು.
ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ರಾಜಿನಾಮೆ ನೀಡಬೇಕು ಅಥವಾ ಸಮಸ್ಯೆಗೊಂದು ಪರಿಹಾರ ಸೂಚಿಸಬೇಕು ಇವೆರಡೂ ಮಾಡದಿದ್ದಲ್ಲಿ ಧರಣಿ ಮುಂದುವರೆಯುತ್ತದೆ. ನಿನ್ನೆ ಮುಖ್ಯಮಂತ್ರಿಯವರು ಮನವಿ ಮಾಡಿಕೊಂಡ ಕಾರಣ30 ಸಾವಿರ ವೈದ್ಯರ ಪೈಕಿ 25 ಸಾವಿರ ವೈದ್ಯರನ್ನು ಹಿಂದಕ್ಕೆ ಕಳುಹಿಸಿದ್ದೇವೆ. ಇದು ಬೆದರಿಕೆಯಲ್ಲ ಸಚಿವ ರಮೇಶ್ ಕುಮಾರ್ ಅವರು ಬಿಲ್ ಪಾಸ್ ಮಾಡಿದ್ದೇ ಆದರೆ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳುತ್ತೇವೆ ಎಂದು ಕೆಪಿಎಂಇ ಅಧ್ಯಕ್ಷ ಡಾ. ಎಚ್.ಎನ್. ರಾಘವೇಂದ್ರ ಹೇಳಿದ್ದಾರೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications