ಮುಂದುವರೆದ ವೈದ್ಯರ ಧರಣಿ: ಮೃತರ ಸಂಖ್ಯೆ ಐದಕ್ಕೆ ಏರಿಕೆ
ಬೆಳಗಾವಿ, ನವೆಂಬರ್ ೧೪ : ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ 2017 (ಕೆಪಿಎಂಇ) ಮಾಡಿರುವ ತಿದ್ದುಪಡಿಯಲ್ಲಿನ ಕೆಲವು ಅಂಶಗಳನ್ನು ಕೈಬಿಡುವಂತೆ ಆಗ್ರಹಿಸಿ ಭಾರತೀಯ ವೈದ್ಯ ಸಂಘದ (ಐಎಂಎ) ರಾಜ್ಯ ಘಟಕದ ಸದಸ್ಯರು ಬೆಳಗಾವಿಯಲ್ಲಿ ಧರಣಿ ಮುಂದುವರೆಸಿದ್ದಾರೆ.
ಹಲವು ಖಾಸಗಿ ಆಸ್ಪತ್ರೆಗಳನ್ನು ಸುತ್ತಾಡಿದ ಬಳಿಕ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದಾಗ ಮೃತಪಟ್ಟಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಖಾಸಗಿ ವೈದ್ಯರ ಪ್ರತಿಭಟನೆ ಹಿನ್ನೆಲೆ ಚಿಕಿತ್ಸೆ ಸಿಗದೆ ಚಿಕ್ಕೋಡಿಯ ಬಾಲಕಿಯೊಬ್ಬಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಕಲ್ಲವ್ವ ಶ್ರೀಶೈಲ್ ಅಂಬಿ(೧೨) ಮೃತ ಬಾಲಕಿ.
ರಕ್ತವಾಂತಿ ರೋಗದಿಂದ ಬಳಲುತ್ತಿದ್ದ ಬಾಲಕಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಾದ ಬಾಲಕಿ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾಳೆ.
ವೈದ್ಯರ ಮುಷ್ಕರದಿಂದ ಈಗಾಗಲೇ ನಾಲ್ಕು ಜೀವಗಳು ಬಲಿಯಾಗಿವೆ. ಹಾಸನದಲ್ಲಿ ಇಂದು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಗು ಸಾವನ್ನಪ್ಪಿದೆ . ಸಕಾಲಕ್ಕೆ ಚಿಕಿತ್ಸೆ ದೊರೆಯದ ಹಿನ್ನೆಲೆಯಲ್ಲಿ ಪಿಡಿಒ ಮೃತಪಟ್ಟಿದ್ದಾರೆ. ಗಂಗಾವತಿ ತಾಲೂಕಿನ ಮುಕ್ಕುಂಪಿ ಗ್ರಾಮದಲ್ಲಿ ಪಿಡಿಒ ಗ್ಯಾನಪ್ಪ ಬಡ್ನಾಳ (56) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕೊಪ್ಪಳ ತಾಲೂಕಿನ ವನಬಳ್ಳಾರಿ ಗ್ರಾಮಪಂಚಾಯತ್ ನ ಪಿಡಿಒ ಆಗಿದ್ದ ಗ್ಯಾನಪ್ಪ ಅವರಿಗೆ ಬೆಳಗಿನ ವೇಳೆ ಹೃದಯಾಘಾತವಾಗಿದೆ. ಗಂಗಾವತಿಯ ಖಾಸಗಿ ಆಸ್ಪತ್ರೆ ಬಾಗಿಲು ಮುಚ್ಚಿ ವೈದ್ಯರು ಮುಷ್ಕರಕ್ಕೆ ತೆರಳಿದ್ದರು. ಇದರಿಂದಾಗಿ ಪಿಡಿಒಗೆ ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿದ್ದಾರೆ. ಸಾರ್ವಜನಿಕರು ಇವರಿಬ್ಬರ ಮುಸುಕಿನ ಆಟದಲ್ಲಿ ನಮ್ಮನ್ನು ಯಾಕೆ ಹೊಣೆ ಮಾಡುತ್ತಿದ್ದೀರ ಎಂದು ಬೇಸರ ವ್ಯಕ್ತಪಡಿಸಿದರು.
ಸೋಮವಾರ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಹೊರ ರೋಗಿಗಳು ಪರದಾಡಿದ್ದರು. ಆದರೆ ಮಂಗಳವಾರ ಹೊರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಂದೊಮ್ಮೆ ಬೆಳಗಾವಿಯಲ್ಲಿ ಧರಣಿಯಲ್ಲಿ ನಿರತರಾಗಿರುವ ವೈದ್ಯರು ಚಿಕಿತ್ಸೆ ನೀಡದಂತೆ ಸೂಚಿಸಿದರೆ ತಕ್ಷಣವೇ ಚಿಕಿತ್ಸೆ ನೀಡುವುದನ್ನು ನಿಲ್ಲಿಸುತ್ತೇವೆ ಎಂದು ವೈದ್ಯರು ತಿಳಿಸಿದರು.
ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ರಾಜಿನಾಮೆ ನೀಡಬೇಕು ಅಥವಾ ಸಮಸ್ಯೆಗೊಂದು ಪರಿಹಾರ ಸೂಚಿಸಬೇಕು ಇವೆರಡೂ ಮಾಡದಿದ್ದಲ್ಲಿ ಧರಣಿ ಮುಂದುವರೆಯುತ್ತದೆ. ನಿನ್ನೆ ಮುಖ್ಯಮಂತ್ರಿಯವರು ಮನವಿ ಮಾಡಿಕೊಂಡ ಕಾರಣ30 ಸಾವಿರ ವೈದ್ಯರ ಪೈಕಿ 25 ಸಾವಿರ ವೈದ್ಯರನ್ನು ಹಿಂದಕ್ಕೆ ಕಳುಹಿಸಿದ್ದೇವೆ. ಇದು ಬೆದರಿಕೆಯಲ್ಲ ಸಚಿವ ರಮೇಶ್ ಕುಮಾರ್ ಅವರು ಬಿಲ್ ಪಾಸ್ ಮಾಡಿದ್ದೇ ಆದರೆ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳುತ್ತೇವೆ ಎಂದು ಕೆಪಿಎಂಇ ಅಧ್ಯಕ್ಷ ಡಾ. ಎಚ್.ಎನ್. ರಾಘವೇಂದ್ರ ಹೇಳಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications