Get Updates
Get notified of breaking news, exclusive insights, and must-see stories!

New Railway Line: ಯಲ್ಲಮ್ಮ ಭಕ್ತರಿಗೆ ಗುಡ್ ನ್ಯೂಸ್, ಸವದತ್ತಿಗೆ ರೈಲ್ವೆ ಸಂಪರ್ಕ ಪ್ರಸ್ತಾವನೆ

ನವದೆಹಲಿ, ಆಗಸ್ಟ್ 08: ಬೆಳಗಾವಿ ಭಾಗದಲ್ಲಿ ಸಾಕಷ್ಟು ಪ್ರೇಕ್ಷಣಿಯ, ಧಾರ್ಮಿಕ ಸ್ಥಳಗಳಿವೆ. ಈ ಪೈಕಿ ಸವದತ್ತಿ ಶ್ರೀ ಯಲ್ಲಮ್ಮ ದೇವಿ ದೇವಸ್ಥಾನವು ಒಂದು. ಇಲ್ಲಿಗೆ ತೆರಳಬೇಕಾದರೆ ನೀವು ರಸ್ತೆ ಮಾರ್ಗವಾಗಿ ಸಾಗಬೇಕು. ಇಲ್ಲಿಗೆ ರೈಲ್ವೆ ಸಂಪರ್ಕ ಕಲ್ಪಿಸಿದರೆ ಹೇಗಿರುತ್ತದೆ? ಇದು ಸಾಧ್ಯವಾ? ಈ ಬಗ್ಗೆ ರೈಲ್ವೆ ಇಲಾಖೆ ಹೇಳುವುದೇನು? ಈ ಕುರಿತು ಒಂದಷ್ಟು ಅಂಶಗಳು ಇಲ್ಲಿವೆ. ಎಲ್ಲವು ಅಂದುಕೊಂಡಂತಾದರೆ ಯಲ್ಲಮ್ಮನ ಭಕ್ತರಿಗೆ ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ.

ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಅವರು ಇತ್ತೀಚೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಮುಖ ರೈಲ್ವೆ ಯೋಜನೆ ಕುರಿತು ಪ್ರಸ್ತಾಪಿಸಿದ್ದಾರೆ. ಈ ಕುರಿತು ಪ್ರಸ್ತಾವನೆಯನ್ನು ಅವರು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ.

Proposal of New Railway Line Connection to Savadatti in Belagavi Requested Project Survey

ಹೌದು, ಬೆಳಗಾವಿಯ ಸವದತ್ತಿಗೆ ಸಾರಿಗೆ ಸಂಪರ್ಕ ಸುಧಾರಿಸುವ ನಿಟ್ಟಿನಲ್ಲಿ ಹಾಗೂ ರಾಜ್ಯ ಲಕ್ಷಾಂತರ ಭಕ್ತರಿಗೆ ತೀರ್ಥಯಾತ್ರೆ ಇನ್ನಷ್ಟು ಸರಳಗೊಳಿಸುವ ನಿಟ್ಟಿನಲ್ಲಿ ಮಹತ್ವ ಚಿಂತನೆಯನ್ನು ಜಗದೀಶ್ ಶೆಟ್ಟರ್ ಬಿತ್ತಿದ್ದಾರೆ. ಸವದತ್ತಿ ಭಾಗಕ್ಕೆ ರೈಲು ಸಂಪರ್ಕ ಬೇಕು ಎನ್ನುವುದು ಬಹುವರ್ಷಗಳ ಬೇಡಿಕೆಯು ಆಗಿತ್ತು. ಈವರೆಗೆ ಆ ಬಗ್ಗೆ ಯಾರು ತಲೆಕೆಡಿಸಿಕೊಂಡಿರಲಿಲ್ಲ.

ಸವದತ್ತಿ ಹೊಸ ರೈಲ್ವೆ ಮಾರ್ಗಕ್ಕಾಗಿ ಸಮೀಕ್ಷೆ

ಇದೀಗ ಸಂಸದ ಜಗದೀಶ್ ಶೆಟ್ಟರ್ ಅವರು ಸವದತ್ತಿಗೆ ಹೊಸ ರೈಲು ಮಾರ್ಗ ನಿರ್ಮಾಣ ಕಾರ್ಯಸಾಧ್ಯತೆ ಕುರಿತು ರೈಲ್ವೆ ಇಲಾಖೆ ಅಧ್ಯಯನ ನಡೆಸಿ, ಸಮೀಕ್ಷೆ ಕೈಗೊಳ್ಳಬೇಕು. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಮುಖೇನ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅಪಾರ ಭಕ್ತಗಣ ಹೊಂದಿರುವ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಪ್ರತಿ ಹುಣ್ಣಿಮೆಗೆ ಸಹಸ್ರ ಸಂಖ್ಯೆಯಲ್ಲಿ ಭಕ್ತರು ತೆರಳುತ್ತಾರೆ. ದೇವಸ್ಥಾನ ಸುತ್ತಮುತ್ತ ಹಾಗೂ ರಸ್ತೆಯಲ್ಲಿ ಕಾಲಿಡಲು ಜಾಗವೇ ಇಲ್ಲವೆಂಬಂತೆ ಭಕ್ತರು ದಂಡು ಕಂಡು ಬರುತ್ತದೆ. ಗುಡ್ಡದಲ್ಲಿರುವ ಈ ಸವದತ್ತಿ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ. ಆದರೆ ಇಲ್ಲಿಗೆ ಈವರೆಗೆ ರೈಲು ಸಂಪರ್ಕ ಕಲ್ಪಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ.

ಸವದತ್ತಿಗೆ ರೈಲು ಸಂಪರ್ಕದ ಅಗತ್ಯತೆ ಇದೆ

ಇದೀಗ ಸವದತ್ತಿಗೆ ರೈಲ್ವೆ ಸಂಪರ್ಕ ಕಲ್ಪಿಸುವ ಕಾಲ ಹತ್ತಿರವಾದಂತಿದೆ. ಈ ನಿಟ್ಟಿನಲ್ಲಿ ಕೇಂದ್ರ ಮನವಿ ಮಾಡಿರುವ ಜಗದೀಶ್ ಶೆಟ್ಟರ್ ಅವರು, ಭಕ್ತರ ಸುಗಮ ಯಾತ್ರೆಗೆ ಅನುಕೂಲವಾಗುವಂತೆ ರೈಲು ಸಂಪರ್ಕ ಕಲ್ಪಿಸುವ ಯೋಜನೆ ಘೋಷಿಸಬೇಕು ಎಂದ ಶೆಟ್ಟರ್ ಅವರು, ಸವದತ್ತಿಗೆ ರೈಲು ಸಂಪರ್ಕದ ತುರ್ತು ಅಗತ್ಯ ಎಷ್ಟಿದೆ ಎಂಬುದನ್ನು ಒತ್ತಿ ಹೇಳಿದರು.

Proposal of New Railway Line Connection to Savadatti in Belagavi Requested Project Survey

ಸವದತ್ತಿ ಯಲ್ಲಮ್ಮನ ಗುಡ್ಡ ವ್ಯಾಪ್ತಿಯಲ್ಲಿ ಪ್ರತಿ ಹುಣ್ಣಿಮೆ, ಜಾತ್ರೆ ಹಾಗೂ ವಿಶೇಷ ದಿನಗಳ ಸಂದರ್ಭದಲ್ಲಿ ಭಕ್ತಾದಿಗಳ ಸಂಖ್ಯೆ ಹೆಚ್ಚಿರುತ್ತದೆ. ದೇವಸ್ಥಾನದ ರಸ್ತೆಯಲ್ಲಿ ನಿರಂತರ ಸಂಚಾರ ದಟ್ಟಣೆ (ಟ್ರಾಫಿಕ್) ಕಂಡು ಬರುತ್ತದೆ. ಇದರಿಂದ ಅಕ್ಕ ಪಕ್ಕದ ಊರುಗಳಿಗೆ ತೆರಳುವವರಿಗೆ ಸಾರ್ವಜನಿಕ ಸಾರಿಗೆಗೆ ತೊಂದರೆ ಆಗುತ್ತದೆ. ಅಲ್ಲದೇ ರಸ್ತೆ ಸಂಚಾರದ ಮೇಲಿನ ಒತ್ತಡವು ತಗ್ಗುತ್ತದೆ. ಮುಖ್ಯವಾಗಿ ಲಕ್ಷಾಂತರ ಜನರಿಗೆ ರೈಲ್ವೆ ಸಂಪರ್ಕ ಸಾಕಷ್ಟು ಸಹಕಾರಿಯಾಗಲಿದೆ.

ಹುಬ್ಬಳ್ಳಿ ಕಚೇರಿಗೆ ಸೂಚನೆ ನೀಡುವಂತೆ ಮನವಿ

ಈ ಉದ್ದೇಶಿತ ಸವದತ್ತಿ ರೈಲು ಮಾರ್ಗದ ಸಮೀಕ್ಷೆಗೆ ನೈಋತ್ಯ ರೈಲ್ವೆಯ ವಲಯದ ಕೇಂದ್ರ ಕಚೇರಿ ಹುಬ್ಬಳ್ಳಿ ಪ್ರಧಾನ ವ್ಯವಸ್ಥಾಪಕರಿಗೆ ಸೂಚನೆ ನೀಡಬೇಕು ಎಂದು ಅವರು ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಿದರು.

ಜಗದೀಶ್ ಶೆಟ್ಟರ್ ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವ ವೈಷ್ಣವ್ ಅವರು, ಹೊಸ ರೈಲು ಮಾರ್ಗದ ಕಾರ್ಯಸಾಧ್ಯತೆ, ಸಂಭಾವ್ಯ ಪ್ರಗತಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.

ಪ್ರವಾಸಿ ತಾಣವಾಗಿ ಮಾಡಲು ಸೂಕ್ತ ಸ್ಥಳವಿದು

ಈ ಸವದತ್ತಿ ಯಲ್ಲಮ್ಮನ ಗುಡ್ಡದ ವ್ಯಾಪ್ತಿಯಲ್ಲಿ ಸಾಕಷ್ಟು ಸ್ಥಳಾವಕಾಶ ಇದೆ. ದೇವಸ್ಥಾನವನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವ ಜೊತೆಗೆ ಪ್ರವಾಸಿ ತಾಣವನ್ನಾಗಿ ಮಾಡುವ ಎಲ್ಲ ಸಂಪನ್ಮೂಲವು ಇಲ್ಲಿದೆ. ಸೂಕ್ತ ರೀತಿಯಲ್ಲಿ ಈ ಸ್ಥಳವನ್ನು ಅಭಿವೃದ್ಧಿ ಪಡಿಸಿದಲ್ಲಿ, ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ. ದೇವಸ್ಥಾನ ಸಮೀಪವೇ ಧಾರ್ಮಿಕ ಐತಿಹ್ಯದ ಪರಶುಗಡ ಸ್ಥಳವಿದೆ. ಕೆಲವೇ ಅಂತರದಲ್ಲಿ ಗೋಕಾಕ್ ಜೋಗ ಜಲಪಾತ, ನವಿಲುತೀರ್ಥ ದಂತಹ ಪ್ರಮುಖ ಪ್ರವಾಸಿ ಸ್ಥಳಗಳು ಇವೆ. ಇವು ಸಹ ಇನ್ನಷ್ಟು ಅಭಿವೃದ್ಧಿಗೊಳ್ಳುತ್ತವೆ.

ಸದ್ಯ ಬಹುಕಾಲದ ಬೇಡಿಕೆ ಈಡೇರುವ ಕಾಲ ಸನಿಹವಾಗಿದ್ದು, ಮುಂದಿನ ದಿನಗಳಲ್ಲಿ ಈ ಭಾಗದ ಜನರಿಗೆ ಗುಡ್ ನ್ಯೂಸ್ ದೊರೆಯಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+