ಡಿಕೆಶಿ ವಿರುದ್ಧ ಪ್ರತಿಭಟನೆ; ಬೆಳಗಾವಿಗೆ ಹೊರಟು ನಿಂತ ಕೆಪಿಸಿಸಿ ಅಧ್ಯಕ್ಷ
ಬೆಳಗಾವಿ, ಮಾರ್ಚ್ 28; ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ವಿರುದ್ಧ ಪ್ರತಿಭಟನೆ ನಡೆಯುವಾಗಲೇ ಡಿ. ಕೆ. ಶಿವಕುಮಾರ್ ಬೆಳಗಾವಿಗೆ ಹೊರಟು ನಿಂತಿದ್ದಾರೆ.
ಭಾನುವಾರ ಡಿ. ಕೆ. ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಗೋಕಾಕ್ನಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದ ಕಡೆಗೆ ಸಾಗುತ್ತಿರುವ ಮೆರವಣಿಗೆ ಸಾಗುತ್ತಿದ್ದು, ಡಿಕೆಶಿ ಅಣಕು ಶವದ ಮೆರವಣಿಗೆ ಮಾಡಿ ಆಕ್ರೋಶ ಹೊರಹಾಕುತ್ತಿದ್ದಾರೆ.
ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಗೋಕಾಕನಲ್ಲಿ ಬೃಹತ್ ಪ್ರತಿಭಟನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ. ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹ. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದ ಕಡೆಗೆ ಸಾಗುತ್ತಿರುವ ಮೆರವಣಿಗೆ. ಡಿಕೆಶಿ ಅಣಕು ಶವದ ಮೆರವಣಿಗೆ ಮಾಡಿ ಆಕ್ರೋಶ.#Gokak @DKShivakumar #RameshJarkiholi pic.twitter.com/mjQjJhlFAt
— oneindiakannada (@OneindiaKannada) March 28, 2021
ಡಿ. ಕೆ. ಶಿವಕುಮಾರ್ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆಯುತ್ತಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡುತ್ತಿರುವ ಡಿ. ಕೆ. ಶಿವಕುಮಾರ್ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.

'ಡಿಕೆಶಿ ನಾಯಕನಲ್ಲ, ಕಳ್ಳನಾಯಕ' ಎಂಬ ಬ್ಯಾನರ್ ಪ್ರದರ್ಶನ ಮಾಡುತ್ತಿದ್ದಾರೆ. ಡಿಕೆಶಿ ರಾಜಕೀಯದಲ್ಲಿರಲು ಅನರ್ಹ, ಹುಡುಗಿಯನ್ನು ಇಟ್ಟುಕೊಂಡು ಡಿಕೆಶಿ ರಾಜಕೀಯ ಮಾಡುತ್ತಿದ್ದಾರೆ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ.
ಬೆಳಗಾವಿಗೆ ಡಿಕೆಶಿ; ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬೆಂಗಳೂರು ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಹೊರಟಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅವರಿಗೆ ಮುತ್ತಿಗೆ ಹಾಕಲು ರಮೇಶ್ ಜಾರಕಿಹೊಳಿ ಬೆಂಬಲಿಗರು ತಯಾರಿ ನಡೆಸಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications