ಸಚಿವ ಎಂ.ಬಿ.ಪಾಟೀಲ್ ಪ್ರತಿಕೃತಿಗೆ ಚಪ್ಪಲಿ ಹಾರ
ನವೆಂಬರ್ 11, ಚಿಕ್ಕೋಡಿ : ಪ್ರತ್ಯೇಕ ಧರ್ಮ ಬೇಡಿಕೆ ಇರಿಸಿಕೊಂಡು ಮಾಡಿದ್ದ ಬೃಹತ್ ಲಿಂಗಾಯತರ ಸಮಾವೇಶದಲ್ಲಿ ಹೋರಾಟದ ಮುಂಚೂಣಿಯಲ್ಲಿರುವ ನೀರಾವರಿ ಸಚಿವ ಎಂ.ಬಿ.ಪಾಟೀಲ್ ಅವರು ಬಿಜೆಪಿ ಲೋಕಸಭಾ ಸದಸ್ಯ ಪ್ರಭಾಕರ್ ಕೋರೆ ಅವರ ವಿರುದ್ಧ ಲಘುವಾದ ಭಾಷೆ ಬಳಸಿದ್ದಾರೆ ಎಂದು ಆರೋಪಿಸಿ ಚಿಕ್ಕೋಡಿಯಲ್ಲಿ ಎಂ.ಬಿ.ಪಾಟೀಲ್ ಅವರ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಯಿತು.
ಚಿಕ್ಕೋಡಿಯ ಪರಟಿ ಲಿಂಗೇಶ್ವರ ಸ್ವಾಮಿ ದೇವಾಲಯದಿಂದ ಪ್ರಾರಂಭಗೊಂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರಾರು ಮಂದಿ ಕೈಗೆ ಕಪ್ಪುಪಟ್ಟಿ ಧರಿಸಿಕೊಂಡು ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಘೊಷಣೆಗಳನ್ನು ಕೂಗಿದರು ಹಾಗೂ ಚಪ್ಪಲಿ ಹಾರ ಹಾಕಿದ್ದ ಎಂ.ಬಿ.ಪಾಟೀಲ್ ಅವರ ಪ್ರತಿಕೃತಿಯನ್ನು ಪಟ್ಟಣದಲ್ಲಿ ಮೆರವಣಿಗೆ ಮಾಡಿದರು.

ಪ್ರತಿಭಟನೆಯಲ್ಲಿ ನಿಡಸೋಸಿ ಮಠದ ಪಂಚಮ ಲಿಂಗೇಶ್ವರ ಸ್ವಾಮೀಜಿ ಹಾಗೂ ಇನ್ನು ವಿವಿಧ ಮಠದ ಸ್ವಾಮಿಗಳು ಪಾಲ್ಗೊಂಡಿದ್ದರು. ಜೊತೆಗೆ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ದುರ್ಯೋದನ ಐಹೊಳೆ, ರಾಜು ಕಾಗೆ, ಪಿ.ರಾಜೀವ್ ಭಾಗವಹಿಸಿದ್ದರು.
ಅಂತಿಮವಾಗಿ ಸಚಿವ ಎಂ.ಬಿ.ಪಾಟೀಲ್ ಅವರ ಪ್ರತಿಕೃತಿಯನ್ನು ಧಹಿಸಲಾಯಿತು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications