ಬೆಳಗಾವಿ ಗಡಿಯಲ್ಲಿ ಭುಗಿಲೆದ್ದ ಪ್ರತಿಭಟನೆ: ಮಹಾರಾಷ್ಟ್ರ ವಾಹನಗಳಿಗೆ ಮಸಿ, ಕಲ್ಲು ತೂರಾಟ
ಬೆಳಗಾವಿ, ಡಿಸೆಂಬರ್ 06: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಭುಗಿಲೆದ್ದಿದೆ. ಮಹಾರಾಷ್ಟ್ರದ ತಂಟೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಬಳಿ ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದು ಕೋಪವನ್ನು ಹೊರಹಾಕಿದ್ದಾರೆ.
ಮಹಾರಾಷ್ಟ್ರದ ನಂಬರ್ ಪ್ಲೇಟ್ ಇರುವ ವಾಹನಗಳ ಮೇಲೆ ದಾಳಿ ನಡೆಸಿ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರೊಂದಿಗೆ ವಾಗ್ದಾದ ನಡೆಸಿದ್ದಾರೆ. ಪ್ರಕ್ಷಬ್ದ ಸನ್ನಿವೇಶವನ್ನು ತಿಳಿಗೊಳಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ದಶಕಗಳಿಂದಲೂ ಮಹಾರಾಷ್ಟ್ರ ಗಡಿ ತಂಟೆಯನ್ನು ತೆಗೆಯುತ್ತಿದೆ. ವಿವಾದವು ನ್ಯಾಯಾಲಯದಲ್ಲಿದ್ದರೂ, ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡಿ ಶಾಂತಿಯನ್ನು ಕದಡಲು ಯತ್ನಿಸುತ್ತಿದ್ದಾರೆ ಎಂದು ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಜೀವ ಬೀಡುತ್ತೇವೆ. ಆದರೆ, ಬೆಳಗಾವಿಯನ್ನು ಬಿಡುವುದಿಲ್ಲ' ಎಂಬ ಘೋಷಣೆಗಳನ್ನು ಕೂಗಿರುವ ಕರವೇ ಕಾರ್ಯಕರ್ತರು ಮಹಾರಾಷ್ಟ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ್ದಾರೆ.
ಇದೇ ವೇಳೆ, ಬೆಳಗಾವಿಗೆ ಭೇಟಿ ನೀಡಬೇಕಿದ್ದ ಮಹಾರಾಷ್ಟ್ರ ಸಚಿವರು ತಮ್ಮ ಭೇಟಿಯನ್ನು ಮುಂದೂಡಿದ್ದಾರೆ.

ಬೆಳಗಾವಿ ಚಿಕ್ಕೋಡಿ ಸೇರಿದಂತೆ ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಿಗಿಬಂದೋಬಸ್ತ್ ಅನ್ನು ಏರ್ಪಡಿಸಲಾಗಿದೆ. ಬೆಳಗಾವಿ ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಮಹಾರಾಷ್ಟ್ರದ ಗಡಿ ತಂಟೆಗೆ ಆಕ್ರೋಶ ವ್ಯಕ್ತಪಡಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 'ಬೆಳಗಾವಿ ವಿವಾದವು ನ್ಯಾಯಾಲಯದಲ್ಲಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ನ್ಯಾಯಾಲಯದಲ್ಲಿಯೇ ಪ್ರಕರಣವನ್ನು ಬಗೆಹರಿಸಿಕೊಳ್ಳಬೇಕು' ಎಂದು ಹೇಳಿದ್ದರು.
'ವಿವಾದ ಸಂಘರ್ಷವಾಗಿ ತಿರುಗಿದ ಈ ಸಂದರ್ಭದಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವುದು ಉಚಿತವಲ್ಲ. ಅವರ ಭೇಟಿಯಿಂದ ಬೆಳಗಾವಿಯ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ. ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ' ಎಂದು ತಿಳಿಸಿದ್ದರು.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications