ಮಹಾರಾಷ್ಟ್ರ ಸಚಿವರ ಭೇಟಿಯನ್ನು ವಿರೋಧಿಸಿ ಬೆಳಗಾವಿಯಲ್ಲಿ ಪ್ರತಿಭಟನೆ
ಬೆಳಗಾವಿ ಡಿಸೆಂಬರ್ 5: ಮಹಾರಾಷ್ಟ್ರ ಸಚಿವರ ಭೇಟಿಯನ್ನು ವಿರೋಧಿಸಿ ಬೆಳಗಾವಿಯಲ್ಲಿ ಇಂದು ಕೂಡ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಬೆಳಗಾವಿಯ ಗೋಗ್ಟೆ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಬಾವುಟ ಹಿಡಿದು ಸಂಭ್ರಮಿಸಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗೆ ಮಹಾರಾಷ್ಟ್ರ ಬೆಂಬಲಿಸುವ ಸಹಪಾಠಿಗಳು ಥಳಿಸಿದ್ದಾರೆ. ಈ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಯನ್ನು ಖಂಡಿಸಿ ಕರವೇ ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದ್ದರು. ಇಂದೂ ಕೂಡ ಕನ್ನಡ ಪರ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಪೋಲೀಸರ ನಿಷ್ಕ್ರಿಯತೆಯ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಘಟನೆಯ ವಿಡಿಯೋ ವೈರಲ್ ಆಗಿದ್ದು ಈ ವಿಡಿಯೋದಲ್ಲಿ ಬೆಳಗಾವಿಯ ಗೋಗ್ಟೆ ಕಾಲೇಜಿನ ಫೆಸ್ಟ್ ನಡೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಕನ್ನಡ ಬಾವುಟ ಹಿಡಿದು ಸಂಭ್ರಮಿಸಿದ್ದಾನೆ. ಈ ವೇಳೆ ಮಹಾರಾಷ್ಟ್ರ ಬೆಂಬಲಿಸುವು ವಿದ್ಯಾರ್ಥಿಗಳು ಥಳಿಸಿದ್ದಾರೆ.
A 2nd PUC student beaten up for holding #Karnataka flag at Gogte college #Belagavi during inter college fest yesterday. He was beaten up by his classmates for holding the flag. Cops inform the students support #Maharashtra. Hence, they were upset. Cops are inquiring the matter. pic.twitter.com/DLm6YacbFf
— Imran Khan (@KeypadGuerilla) December 1, 2022
ಹೀಗಾಗಿ ಈ ಘಟನೆಯನ್ನು ಖಂಡಿಸಿ ನಿನ್ನೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು. ಬೆಳಗಾವಿ-ಗೋವಾ ಮುಖ್ಯ ರಸ್ತೆಯನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಕೆಲವು ಹಳ್ಳಿಗಳು ಸೇರಿದ ಕೆಲ ಜಿಲ್ಲೆಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಮಹಾರಾಷ್ಟ್ರ ಸರ್ಕಾರ ವಾದಿಸುತ್ತಿದೆ. ಮಹಾರಾಷ್ಟ್ರದ ಕೆಲವು ಹಳ್ಳಿಗಳು ಮತ್ತು ಜಿಲ್ಲೆಗಳು ಕರ್ನಾಟಕ್ಕೆ ಸೇರಬೇಕೆಂದು ಕರ್ನಾಟಕ ಸರ್ಕಾರ ವಾದಿಸುತ್ತಿದೆ. ಈ ಕುರಿತು ನೇಮಿಸಲಾಗಿದ್ದ ಮಹಾಜನ್ ಆಯೋಗವು "ಕರ್ನಾಟಕದಲ್ಲಿನ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಹೋಗಲಿ ಮತ್ತು ಮಹಾರಾಷ್ಟ್ರದ ಕೆಲ ತಾಲ್ಲೂಕುಗಳು ಕರ್ನಾಟಕಕ್ಕೆ ಬರಲಿ" ಎಂದು ವರದಿ ಸಲ್ಲಿಸಿತ್ತು. ಇದನ್ನು ಒಪ್ಪದ ಮಹಾರಾಷ್ಟ್ರ ಸರ್ಕಾರ 2004ರಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications