ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೊಲೀಸ್ ಠಾಣೆಗೆ ಬೀಗ ಜಡಿಯಲು ಮುಂದಾದ ಸಾರ್ವಜನಿಕರು

By Manjunatha
|
Google Oneindia Kannada News

ಬೆಳಗಾವಿ, ಡಿಸೆಂಬರ್ 04 : ತಮ್ಮ ಅವಹಾಲು ಸ್ವೀಕರಿಸಲು ಯಾವ ಪೊಲೀಸ್ ಅಧಿಕಾರಿಯೂ ಬಾರದ್ದಕ್ಕೆ ರೊಚ್ಚಿಗೆದ್ದ ಪ್ರತಿಭಟನಾಕಾರರು ಪೊಲೀಸ್ ಠಾಣೆಗೆ ಬೀಗ ಜಡಿಯಲು ಮುಂದಾಗಿದ್ದಾರೆ.

ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು, ಪೊಲೀಸರಿಗೂ ಗಾಯಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು, ಪೊಲೀಸರಿಗೂ ಗಾಯ

ಶಹಪುರದ ಅಲವಾನ್ ಗಲ್ಲಿಯಲ್ಲಿ ನಿನ್ನೆ (ಡಿಸೆಂಬರ್ 03) ರಾತ್ರಿ ಮದುವೆ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಕೂಡಲೆ ಬಂಧಿಸಬೇಕು ಎಂದು ಶಾಸಕ ಅಭಯ್ ಪಾಟೀಲ ಅವರ ನೇತೃತ್ವದಲ್ಲಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.

Protesters try to lock Police station

ನಿನ್ನೆ (ಡಿಸೆಂಬರ್ 03) ರಾತ್ರಿ ಅಲವನ್ ಗಲ್ಲಿಯಲ್ಲಿ ಯುವಕರ ಗುಂಪು ಕಲ್ಲು ತೂರಾಟ ನಡೆಸಿ ಶಾಂತಿ ಭಂಗ ಮಾಡಿ ಸಾರ್ವಜನಿಕರ ಆಸ್ತಿ ಪಾಸ್ತಿಗಳನ್ನು ನಾಶ ಮಾಡಿ ಪುಂಡಾಟಿಕೆ ಪ್ರದರ್ಶಿಸಿದರೂ ಶಹಾಪೂರ ಪೋಲೀಸರು ಇನ್ನುವರೆಗೆ ಆರೋಪಿಗಳನ್ನು ಬಂಧಿಸಿಲ್ಲ ಎಂದು ಪ್ರತಿಭಟನಾ ನಿರತರು ದೂರಿದರು.

ಠಾಣೆಗೆ ಮುತ್ತಿಗೆ ಹಾಕಿ ಗಂಟೆಗಳೇ ಕಳೆದರು ಯಾವೊಬ್ಬ ಪೊಲೀಸ್ ಅಧಿಕಾರಿಯೂ ಅವಹಾಲು ಸ್ವೀಕರಿಸಲು ಬಾರದೇ ಇದ್ದಾಗ ರೊಚ್ಚಿಗೆದ್ದ ಸಾರ್ವಜನಿಕರು ಪೊಲೀಸ್ ಠಾಣೆಗೆ ಬೀಗ ಜಡಿಯಲು ಮುಂದಾದರು. ಆಗ ಸ್ಥಳೀಯ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಸುಮ್ಮನಾಗಿಸಿದರು.

English summary
Protesters in Belagavi's Shapura try to lock Shahapura Police station. they demanded to arrest stone pelter who threw stones at a marriage procession yesterday (December 03).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X