ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ, ಚಂದ್ರಬಾಬು ನಾಯ್ಡು ಜೊತೆ ಪ್ರಚಾರ
ಬೆಳಗಾವಿ, ಏಪ್ರಿಲ್ 19: ರಾಜ್ಯದಲ್ಲಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣಕ್ಕೆ ಆಗಮಿಸಿರುವ ರಾಹುಲ್ ಗಾಂಧಿ ಅವರು, ಇಂದು ರಾಯಚೂರಿನಲ್ಲಿ ಬೃಹತ್ ಸಮಾವೇಶದಲ್ಲಿ ಭಾಷಣ ನಡೆಸಲಿದ್ದಾರೆ.
'ಭಾರತ-ಪಾಕ್ ಪ್ರಧಾನಿಗಳು ಡರ್ಟಿ ಪಾಲಿಟಿಕ್ಸ್ ಮಾಡುತ್ತಿದ್ದಾರೆ'
ವಿಶೇಷವಾಗಿ ಇಂದು ರಾಹುಲ್ ಗಾಂಧಿ ಅವರು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ಪ್ರಚಾರ ಮಾಡಲಿದ್ದಾರೆ.
ಸಿದ್ದರಾಮಯ್ಯ, ಖರ್ಗೆ, ಪರಮೇಶ್ವರ್, ಡಿ.ಕೆ.ಶಿವಕುಮಾರ್, ಕೆ.ಸಿ.ವೇಣುಗೋಪಾಲ್ ಅವರುಗಳು ಸಮಾವೇಶದಲ್ಲಿ ಇರಲಿದ್ದಾರೆ, ಜೊತೆಗೆ ಸ್ಥಳೀಯ ಅಭ್ಯರ್ಥಿಗಳು ಸಹ ಸಮಾವೇಶದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಕೆಲವು ಭಾಗಗಳಲ್ಲಿ ತೆಲುಗು ಪ್ರಭಾವ ಇರುವ ಕಾರಣ ಚಂದ್ರಬಾಬು ನಾಯ್ಡು ಅವರೊಂದಿಗೆ ಜಂಟಿ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಮಾಡುತ್ತಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಚಂದ್ರಬಾಬು ನಾಯ್ಡು ಅವರು ಮಂಡ್ಯಕ್ಕೆ ಆಗಮಿಸಿ ಪ್ರಚಾರ ನಡೆಸಿದ್ದರು.