ಬೆಳಗಾವಿ ಸವದತ್ತಿ ಯಲ್ಲಮ್ಮ ದೇವಾಲಯಕ್ಕೆ ರೈಲು ಸಂಪರ್ಕ?
ಬೆಳಗಾವಿ, ಜೂನ್ 20: ಉತ್ತರ ಕರ್ನಾಟಕದ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯ. ಬೆಳಗಾವಿ ಜಿಲ್ಲೆಯಲ್ಲಿರುವ ಈ ದೇವಾಲಯಕ್ಕೆ ಗಣ್ಯರು ಸೇರಿದಂತೆ ಪ್ರತಿ ವರ್ಷ ಕೋಟ್ಯಾಂತರ ಭಕ್ತರು ಭೇಟಿ ನೀಡುತ್ತಾರೆ.
ಲೋಕಸಭೆ ಚುನಾವಣೆ 2024ರಲ್ಲಿ ಜಯಗಳಿಸಿದ ಬೆಳಗಾವಿಯ ಸಂಸದ, ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಶಾಸಕ ಸಿ. ಸಿ. ಪಾಟೀಲ್, ವಿರೂಪಾಕ್ಷ ಮಾಮನಿ, ರತ್ನ ಮಾಮನಿ, ಸೌರಬ್ ಚೋಪ್ರಾ, ಬಸಯ್ಯ ಅಜ್ಜ, ರಮೇಶ ಗೋಮಾಡಿ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ನೂತನ ಸಂಸದರ ಜೊತೆ ದೇವಾಲಯದ ಆಡಳಿತ ಮಂಡಳಿ ಸಭೆಯನ್ನು ನಡೆಸಿತು. ದೇವಾಲಯಕ್ಕೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಒದಗಿಸಲು ಅನುದಾನವನ್ನು ನೀಡಬೇಕು. ಹಿಂದಿನ ಸಂಸದರು ಕ್ಷೇತ್ರಕ್ಕೆ ಅನುದಾನವನ್ನು ಒದಗಿಸಿರುವ ಕುರಿತು ಮಾಹಿತಿಯನ್ನು ನೀಡಲಾಯಿತು.
ದೇವಾಲಯಕ್ಕೆ ರೈಲು ಸಂಪರ್ಕ: ನೂತನ ಸಂಸದ ಜಗದೀಶ್ ಶೆಟ್ಟರ್ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯದಲ್ಲಿ ಮೂಲ ಸೌಕರ್ಯ ಒದಗಿಸಲು ಪೂರಕವಾಗಿ ಅನುದಾನ ಒದಗಿಸಲಾಗುತ್ತದೆ. ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ಸಹಾಯಕವಾಗಲು ದೇವಾಲಯಕ್ಕೆ ರೈಲು ಸಂಪರ್ಕ ಕಲ್ಪಿಸಲು ಪ್ರಯತ್ನ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು.
ತಿರುಪತಿ, ಶಿರಡಿ ಮಾದರಿಯಲ್ಲಿ ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯ ಅಭಿವೃದ್ಧಿಯಾಗಬೇಕಿದೆ. ಧಾರ್ಮಿಕ ಮತ್ತು ಪ್ರವಾಸಿ ತಾಣವಾಗಿ ಕ್ಷೇತ್ರವನ್ನು ಅಭವೃದ್ಧಿ ಮಾಡಲು ಅಗತ್ಯ ಸಹಕಾರ ನೀಡಬೇಕು ಎಂದು ದೇವಾಲಯದ ಆಡಳಿತ ಮಂಡಳಿ ಸಂಸದರಿಗೆ ಮನವಿ ಸಲ್ಲಿಕೆ ಮಾಡಿತು.
ಯಾವ-ಯಾವ ಅನುದಾನವನ್ನು ಬಳಕೆ ಮಾಡಬೇಕು ಎಂದು ಈಗಾಗಲೇ ಸಭೆ ನಡೆಸಿ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ದೇವಾಲಯದ ಆಡಳಿತ ಮಂಡಳಿ ಅಗತ್ಯವಿರುವ ಕಾಮಗಾರಿಗಳ ಪಟ್ಟಿಯನ್ನು ನೀಡಿದರೆ ಅನುದಾನ ಒದಗಿಸಲು ಪ್ರಯತ್ನ ನಡೆಸಲಾಗುತ್ತದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.
ಈ ವರ್ಷದ ಜನವರಿಯಲ್ಲಿ ಕರ್ನಾಟಕದ ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾ ರೆಡ್ಡಿ ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದರು. "ಪ್ರತಿವರ್ಷ ಕೋಟ್ಯಾಂತರ ಜನರು ಭೇಟಿ ನೀಡುವ ಸವದತ್ತಿ ಯಲ್ಲಮ್ಮ ದೇವಾಲಯ ಹಾಗೂ ಯಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲಾಗುವುದು" ಎಂದು ತಿಳಿಸಿದ್ದರು.
ಸವದತ್ತಿ ಯಲ್ಲಮ್ಮ ದೇವಾಲಯದಲ್ಲಿ ದೇವಿ ದರ್ಶನ ಪಡೆದು ಅಧಿಕಾರಿಗಳ ಸಭೆಯನ್ನು ನಡೆಸಿದ್ದ ಸಚಿವರು, "ಪ್ರಸಿದ್ಧ ಧಾರ್ಮಿಕ ಸ್ಥಳವಾಗಿರುವ ಸವದತ್ತಿ ಯಲ್ಲಮ್ಮ ದೇವಾಲಯಕ್ಕೆ ಕೋಟ್ಯಾಂತರ ಭಕ್ತರು ಭೇಟಿ ನೀಡುತ್ತಾರೆ. ಜಾತ್ರೆ ಸಂದರ್ಭದಲ್ಲಿ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಒದಗಿಸುವುದರ ಜತೆಗೆ ಲಕ್ಷಾಂತರ ಜನರಿಗೆ ಸುಗಮ ದರ್ಶನಕ್ಕೆ ಅನುಕೂಲವಾಗುವಂತೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ" ಎಂದು ಹೇಳಿದ್ದರು.
"ದೇವಾಲಯ ಪ್ರತಿವರ್ಷ ಅಂದಾಜು ರೂ. 20 ಕೋಟಿ ಆದಾಯ ಹೊಂದಿದೆ. ಈ ಆದಾಯದಲ್ಲಿ ದೇವಾಲಯ ನಿರ್ವಹಣೆ ಬಳಿಕ ಉಳಿಯುವ ಹಣವನ್ನು ಮಾಸ್ಟರ್ ಪ್ಲಾನ್ ಅನುಷ್ಠಾನಕ್ಕೆ ಬಳಸಬಹುದಾಗಿದೆ. ಇದಲ್ಲದೇ ಸರಕಾರದಿಂದಲೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಬಹುದು" ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದರು.
"ಪ್ರವಾಸೋದ್ಯಮ ಇಲಾಖೆಯ ವತಿಯಿಂದಲೂ ಪ್ರತ್ಯೇಕ ಯೋಜನೆಯನ್ನು ಕೂಡ ರೂಪಿಸುವ ಮೂಲಕ ಒಟ್ಟಾರೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು" ಎಂದು ಸಚಿವರು ಭರವಸೆ ನೀಡಿದ್ದರು.
ಸಭೆಯಲ್ಲಿ ಮಾತನಾಡಿದ್ದ ಸವದತ್ತಿ ಶಾಸಕ ವಿಶ್ವಾಸ್ ವೈದ್ಯ, "ಯಲ್ಲಮ್ಮ ದೇವಿ ದೇವಾಲಯದ ಒಳಹೋಗಲು ಒಂದು ದ್ವಾರ ಮಾತ್ರ ತೆರೆಯಲಾಗಿದೆ. ಆದರೆ, ಗುಡ್ಡಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವುದರಿಂದ ನಾಲ್ಕೂ ದ್ವಾರಗಳನ್ನು ತೆರೆದು ಅನುಕೂಲ ಕಲ್ಪಿಸಬೇಕು" ಎಂದು ಮನವಿ ಮಾಡಿದ್ದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications