ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೇಣುಕಾಚಾರ್ಯ ಕಾಂಗ್ರೆಸ್ ಸೇರ್ತಾರೆ ಅನ್ನೋಕಾಗುತ್ತಾ: ರಮೇಶ್ ಜಾರಕಿಹೊಳಿ

|
Google Oneindia Kannada News

Recommended Video

ರಮೇಶ್ ಜಾರಕಿಹೊಳಿ ಭೇಟಿ ಮಾಡಿದ ರೇಣುಕಾಚಾರ್ಯ ! | Oneindia Kannada

ಬೆಳಗಾವಿ, ಸೆಪ್ಟೆಂಬರ್ 11: "ಬಿಜೆಪಿ ನಾಯಕರನ್ನು ನಾವು ಭೇಟಿ ಮಾಡಿದರೆ ತಪ್ಪೇನು? ಎರಡು ದಿನಗಳ ಹಿಂದೆ ಬಿಜೆಪಿಯ ರೇಣುಕಾಚಾರ್ಯ ನಮ್ಮನೆಗೆ ಬಂದಿದ್ದರು. ಹಾಗಂತ ಅವರು ಕಾಂಗ್ರೆಸ್ ಸೇರ್ತಾರೆ ಅನ್ನೋಕಾಗುತ್ತಾ?" ಎಂದು ಪತ್ರಕರ್ತರನ್ನು ಪ್ರಶ್ನಿಸಿದರು ಕಾಂಗ್ರೆಸ್ ಮುಖಂಡ, ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ.

ಕರ್ನಾಟಕ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ, ಸೆ.17ಕ್ಕೆ ಕ್ಲೈಮ್ಯಾಕ್ಸ್? ಕರ್ನಾಟಕ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ, ಸೆ.17ಕ್ಕೆ ಕ್ಲೈಮ್ಯಾಕ್ಸ್?

ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ದಿಢೀರ್ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಸಹೋದರ ಸತೀಶ್ ಜಾರಕಿಹೊಳಿ ಅವರಿಗೆ ಲೋಕಸಭಾ ಟಿಕೇಟ್ ನೀಡಬೇಕು ಎಂದು ಒತ್ತಾಯಿಸಿದರು.

ಸಹೋದರನ ಸಿಎಂ ಮಾಡಲು ಬಿಜೆಪಿಗೆ ಹೊರಟರಾ ರಮೇಶ್ ಜಾರಕಿಹೊಳಿ?ಸಹೋದರನ ಸಿಎಂ ಮಾಡಲು ಬಿಜೆಪಿಗೆ ಹೊರಟರಾ ರಮೇಶ್ ಜಾರಕಿಹೊಳಿ?

"ಮಹಾರಾಷ್ಟ್ರದಲ್ಲೂ ನಮ್ಮ ಸಕ್ಕರೆ ಕಾರ್ಖಕಾನೆಗಳಿವೆ. ಆದ್ದರಿಂದ ನಾವು ಅಲ್ಲಿನ ಬಿಜೆಪಿ ಸಚಿವರನ್ನೂ ಒಮ್ಮೊಮ್ಮೆ ಭೇಟಿ ಮಾಡುತ್ತೇವೆ. ಬಿಜೆಪಿ ನಾಯಕರನ್ನು ಭೇಟಿ ಮಾಡಿದರೆ ಅದಕ್ಕೆ ಊಹಾಪೋಹಗಳನ್ನು ಅಂಟಿಸುವುದು ಏಕೆ? ಇತ್ತೀಚೆಗೆ ಬಿಜೆಪಿಯ ರೇಣುಕಾಚಾರ್ಯ ನಮ್ಮ ಮನೆಗೆ ಬಂದಿದ್ದರು. ಹಾಗಂತ ಅವರು ಕಾಂಗ್ರೆಸ್ ಗೆ ಏರುತ್ತಾರೆ ಎನ್ನುವುದಕ್ಕಾಗುತ್ತದೆಯೇ?" ಎಂದು ರಮೇಶ್ ಪ್ರಶ್ನಿಸಿದರು.

ಸಚಿವ ಸ್ಥಾನದ ಆಸೆಗೆ ಸಂಧಾನಕ್ಕೆ ಒಪ್ಪಿದರಾ ಜಾರಕಿಹೊಳಿ?ಸಚಿವ ಸ್ಥಾನದ ಆಸೆಗೆ ಸಂಧಾನಕ್ಕೆ ಒಪ್ಪಿದರಾ ಜಾರಕಿಹೊಳಿ?

Ramesh Jarakiholis reaction about joing BJP

ಸತೀಶ್ ಜಾರಕಿಹೊಳಿ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂಬ ನನ್ನ ಮಾತಿಗೆ ಈಗಲೂ ಬದ್ಧನಾಗಿದ್ದೇನೆ ಎಂದ ಅವರು, ಬೆಳಗಾವಿ ರಾಜಕೀಯವನ್ನು ನಾವು ಬಗೆಹರಿಸಿಕೊಳ್ಳುತ್ತೇವೆ, ಅದಕ್ಕೆ ಮತ್ತೊಬ್ಬರ ಮಧ್ಯಪ್ರವೇಶದ ಅಗತ್ಯವಿಲ್ಲ ಎಂದು ಸಚಿವ ಡಿಕೆ ಶಿವಕುಮಾರ್ ಅವರಿಗೆ ಟಾಂಗ್ ನೀಡಿದರು.

English summary
Congress leader and minister Ramesh Jarkiholi tells to media n Belagavi that, "What happens if we meet BJP leaders for personal reasons? Two days before BJP leader Renukacharya came to our home. Do you think he will join Congress?"
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X