Get Updates
Get notified of breaking news, exclusive insights, and must-see stories!

ಪೊಲೀಸ್ ಸಿಬ್ಬಂದಿ ಮೇಲೆ ಕ್ರಮಕ್ಕೆ ಸಚಿವ ರಮೇಶ್ ಜಾರಕಿಹೊಳಿ ಆಗ್ರಹ

ಬೆಳಗಾವಿ, ಏ. 27: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಗರದಲ್ಲಿ ‌ತನ್ನ ಮನೆಯ ಮುಂದೆ ವಾಹನ ತೊಳೆಯುತ್ತಿದ್ದ ಅರೆ ಸೈನಿಕ ಪಡೆಯ ಯೋಧನನ್ನು ಕೇವಲ ಮಾಸ್ಕ್ ಧರಿಸಿಲ್ಲ ಎನ್ನುವ ಕಾರಣಕ್ಕೆ ಬಂಧಿಸಿರುವುದು ಖಂಡನೀಯ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಒಬ್ಬ ಯೋಧ ಎನ್ನುವುದನ್ನೂ ಗಮನಿಸದೇ ಸಾರ್ವಜನಿಕವಾಗಿ ಹಿಂಸಿಸಿ, ಒಬ್ಬ ಖೈದಿಯಂತೆ ಕೈಗೆ ಕೋಳ ತೊಡಿಸಿ ಬಂಧಿಸಿರುವುದನ್ನು ಯಾವುದೇ ಕಾರಣಕ್ಕೂ ಸಮರ್ಥನೆ ಮಾಡಲು ಸಾಧ್ಯವಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಒಬ್ಬ ನಿರಪರಾಧಿ ಯೋಧನನ್ನು ಅತ್ಯಂತ ಅಮಾನುಷವಾಗಿ ಹಿಂಸಿಸಿ, ಬಂಧಿಸಿರುವುದು ಸಮವಸ್ತ್ರ ಧರಿಸಿದ ಸೈನಿಕರಿಗೆ ಮಾಡಿದ ಅವಮಾನ. ಕೂಡಲೇ ಬಂಧಿತ ಅರೆ ಸೈನಿಕ ಪಡೆಯ ಯೋಧನನ್ನು ಗೌರವದಿಂದ ಬಿಡುಗಡೆ ಮಾಡಬೇಕು. ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯ ಮೇಲೆ ತನಿಖೆ ನಡೆಸಿ ಶಿಸ್ತಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

ಸದಲಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಆರ್​ಪಿಎಫ್​ನ CoBRA ವಿಭಾಗದ ಕಮ್ಯಾಂಡೋ ಕ್ಯಾಪ್ಟನ್ ಸಚಿನ್ ಸಾವಂತ್ ಮೇಲೆ ಸ್ಥಳೀಯ ಪೊಲೀಸರು ಹಲ್ಲೆ ಎಸಗಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್​ಪಿಎಫ್)ನ ಎಡಿಜಿಪಿ ಸಂಜಯ್ ಅರೋರಾ ಇದನ್ನು ತನಿಖೆಗೊಳಪಡಿಸಬೇಕೆಂದು ಒತ್ತಾಯ ಮಾಡಿದ್ದರು.

Ramesh Jarakiholi said the arrest of the CRFF soldier cannot be justified

ಸಿಆರ್‌ಪಿಎಫ್‌ ಯೋಧನ ಮೇಲೆ ಹಲ್ಲೆ: ಪ್ರಕರಣಕ್ಕೆ ಟ್ವಿಸ್ಟ್

ಈ ಸಂಬಂಧ, ಕರ್ನಾಟಕ ರಾಜ್ಯ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಅರೋರಾ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದರು. ಈ ಬೆನ್ನಲ್ಲೀಗ ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಯೋಧನ ಮೇಲಿನ ಪೊಲೀಸರ ಹಲ್ಲೆಯನ್ನು ಖಂಡಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+