ಮಾಧ್ಯಮಗಳ ವಿರುದ್ಧ ರಮೇಶ್ ಜಾರಕಿಹೊಳಿ ಗರಂ
Recommended Video

ಬೆಳಗಾವಿ, ಜನವರಿ 03 : 'ನೀವು ಹುಚ್ಚರಿದ್ದೀರಿ..ನಿಮ್ಮನ್ನು ಜಾಡಿಸಿ ಒದಿಬೇಕು...ನಿಮ್ಮದು ಅತಿ ಆಯಿತು' ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಧ್ಯಮಗಳ ವಿರುದ್ಧ ಅಸಮಾಧಾನಗೊಂಡರು.
ಗುರುವಾರ ಬೆಳಗ್ಗೆ ಬ್ಯಾಡ್ಮಿಂಟನ್ ಆಟ ಮುಗಿಸಿ ಗೋಕಾಕ್ನ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಆಗಮಿಸಿದರು. ಆಗ ಮಾಧ್ಯಮದವರು ಅವರನ್ನು ಪ್ರಶ್ನಿಸಲು ಮುಂದಾದರು. ಈ ಸಮಯದಲ್ಲಿ ಅವರು ಅಸಮಾಧಾನ ಹೊರ ಹಾಕಿದರು.
ಜಾರಕಿಹೊಳಿ ಅವರನ್ನು ಮಾಧ್ಯಮದವರು ಪ್ರಶ್ನಿಸಲು ಮುಂದಾದಾಗ, 'ನೀವು ಹುಚ್ಚರಿದ್ದೀರಿ. ನಿಮ್ಮನ್ನು ಜಾಡಿಸಿ ಒದಿಬೇಕು, ನಿಮ್ಮದು ಅತಿ ಆಯಿತು' ಎಂದು ಪ್ರತಿಕ್ರಿಯೆ ನೀಡಿದರು.

ನಾಪತ್ತೆಯಾಗಿದ್ದರು : ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟ ಪುನಾರಚನೆ ಮಾಡುವಾಗ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈ ಬಿಡಲಾಗಿತ್ತು. ಈ ಬೆಳವಣಿಗೆ ಬಳಿಕ ರಮೇಶ್ ಜಾರಕಿಹೊಳಿ ನಾಪತ್ತೆಯಾಗಿದ್ದರು.
4 ದಿನ ಸಮಯ ಕೇಳಿದ ಮಾಜಿ ಸಚಿವ : ರಮೇಶ್ ಜಾರಕಿಹೊಳಿ ಅವರು ತಮ್ಮ ಮುಂದಿನ ನಿರ್ಧಾರವನ್ನು ಪ್ರಕಟಿಸಲು 4 ದಿನಗಳ ಕಾಲಾವಕಾಶ ಕೇಳಿದ್ದಾರೆ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲಿದ್ದಾರೆಯೇ? ಎಂದು ಕಾದು ನೋಡಬೇಕು.











Click it and Unblock the Notifications