'ರಾಸಲೀಲೆ'ಯಲ್ಲಿ' ಜಾರಿಬಿದ್ದ ಬೆಳಗಾವಿ ಸಾಹುಕಾರ್: ರಾಜ್ಯದ ಮಾನ ಹರಾಜು
ಬೆಳಗಾವಿ ಸಾಹುಕಾರ್ ಎಂದು ಎಲ್ಲರಿಂದ ಕರೆಸಿಕೊಳ್ಳುತ್ತಿದ್ದ ಹಾಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ "ರಾಸಲೀಲೆ' ಎಂಬ ಕೊಳಕು ಚರಂಡಿಗೆ ಜಾರಿ ಬಿದ್ದಿದ್ದಾರೆ. ಒಂದು ರಾಷ್ಟ್ರೀಯ ಪಕ್ಷದ ಸರ್ಕಾರದಲ್ಲಿ ಸಚಿವರಾಗಿದ್ದುಕೊಂಡು ಇಂತಹ ಹೀನ ಕೃತ್ಯ ಮಾಡಿರುವುದು ರಾಜ್ಯದ ಮಾನವನ್ನು ಹರಾಜು ಹಾಕಿದಂತಾಗಿದೆ.
ಬೆಳಗಾವಿ ರಾಜಕಾರಣದಲ್ಲಿ ಜಾರಕಿಹೊಳಿ ಕುಟುಂಬ ಬಹಳ ಪ್ರಭಾವಿಯಾಗಿದೆ. ಶ್ರೀಮಂತ ಮನೆತನದ ರಮೇಶ್ ಜಾರಕಿಹೊಳಿ, ತಾವೇ ತೋಡಿಕೊಂಡ ಬಾವಿಗೆ ಬಿದ್ದು ಒದ್ದಾಡುತ್ತಿದ್ದಾರೆ. ಈಗ ಬಿಡುಗಡೆಯಾಗಿರುವ ಸೆಕ್ಸ್ ಸಿಡಿಯಲ್ಲಿ ಯುವತಿಯೊಂದಿಗೆ ಸಚಿವ ರಮೇಶ್ ಜಾರಕಿಹೊಳಿ ಇರುವುದು ಸ್ಪಷ್ಟವಾಗಿದೆ.
ತನಗೆ ಸಚಿವ ಸ್ಥಾನ ನೀಡಲಿಲ್ಲ ಎಂದು ಸಿಟ್ಟಿಗೆದ್ದು ಮೈತ್ರಿ ಸರ್ಕಾರವನ್ನೇ ಬೀಳಿಸಿದ್ದ ರಮೇಶ್ ಜಾರಕಿಹೊಳಿ, ಈಗ ತಾವೇ ರಾಸಲೀಲೆ ಸಿಡಿಯಲ್ಲಿ ಬಿದ್ದು, ರಾಜ್ಯದ ಜನರಿಗೆ ಮುಖ ತೋರಿಸದಂತಾಗಿದ್ದಾರೆ. ರಾಸಲೀಲೆ ಬಿಡುಗಡೆಯಾಗುವುದಕ್ಕೂ ಮೊದಲು ಸಚಿವ ರಮೇಶ್ ಜಾರಕಿಹೊಳಿ ಅವರು ಮಹಿಳೆಯೊಂದಿಗೆ ಕರೆ ಮಾಡಿ ಮಾತನಾಡಿರುವುದು ವೈರಲ್ ಆಗಿತ್ತು.

ಮಹಿಳೆಯೊಂದಿಗೆ ಸಚಿವ ರಮೇಶ್ ಜಾರಕಿಹೊಳಿ ನಡೆಸಿರುವ ಈ ರಾಸಲೀಲೆ ಒಪ್ಪಿತವಾಗಿತ್ತೋ ಅಥವಾ ಸಚಿವರನ್ನು ಬಲೆಗೆ ಬೀಳಿಸಲು ತಂತ್ರ ರೂಪಿಸಲಾಗಿತ್ತೋ ಎನ್ನುವುದು ಉನ್ನತ ಪೊಲೀಸ್ ತನಿಖೆಯ ನಂತರ ತಿಳಿದು ಬರಲಿದೆ.
ಸೆಕ್ಸ್ ಸಿಡಿ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ತಕ್ಷಣವೇ ಅವರ ರಾಜೀನಾಮೆ ಪಡೆಯಬೇಕೆಂದು ರಾಜ್ಯ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.
ಒಬ್ಬ ಸಚಿವರಾಗಿದ್ದುಕೊಂಡು, ಸಹಾಯ ಕೇಳಿಕೊಂಡು ಬಂದ ಯುವತಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದು, ಅದರಲ್ಲೂ ರಾಜ್ಯ ರಾಜಕಾರಣದ ಪ್ರಭಾವಿ ವ್ಯಕ್ತಿಯಾಗಿದ್ದುಕೊಂಡು ಇಂತಹ ಕೀಳುಮಟ್ಟದ ಪ್ರಕರಣಗಳಲ್ಲಿ ಸಿಕ್ಕಿಬಿದ್ದು, ರಾಜ್ಯದ ಮಾನ, ಒಂದು ಪಕ್ಷದ ಗೌರವವನ್ನು ಹಾಳು ಮಾಡಿದ್ದಾರೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.
ಈ ರಾಸಲೀಲೆ ಬಿಡುಗಡೆಗೊಂಡ ನಂತರ ನನಗೆ ಹಾಗೂ ಯುವತಿಗೆ ಬೆದರಿಕೆ ಕರೆ ಬರುತ್ತಿವೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಆತ್ಮೀಯರಾಗಿರುವ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯನ್ನು ತಕ್ಷಣ ಪಡೆದುಕೊಳ್ಳುತ್ತಾರೋ ಅಥವಾ ಹೈಕಮಾಂಡ್ ಸೂಚನೆಗೆ ಕಾಯುತ್ತಾರೋ ಎನ್ನುವುದನ್ನು ನೋಡಬೇಕಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ರಮೇಶ್ ಜಾರಕಿಹೊಳಿಯದ್ದೇ ಕಾಮಪುರಾಣ ಚಿತ್ರಗಳು, ದೃಶ್ಯಗಳು ಕಂಡುಬರುತ್ತಿದೆ. ಜಾರಕಿಹೊಳಿ ಅವರ ಕಾಮಪುರಾಣದ ಸಿಡಿ ಇದೀಗ ಫುಲ್ ವೈರಲ್ ಆಗಿದೆ. ಫೋಟೋ ಹಾಗೂ ವಿಡಿಯೋ ತುಣುಕುಗಳು ತೀರಾ ಅಶ್ಲೀಲವಾಗಿದ್ದು, ನೋಡಲು ಅನರ್ಹವಾಗಿದೆ. ಪ್ರತಿಯೊಂದು ಚಾನಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಹಾಗೂ ಫೋಟೋಗಳು ಹರಿದಾಡುತ್ತಿವೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications