ಡಿಸಿಎಂ ವಿರುದ್ದ ಹೇಳಿಕೆ ನೀಡಿ ನಂತರ ವಾಪಸ್ ಪಡೆದ ಜಾರಕಿಹೊಳಿ
Recommended Video
ಬೆಳಗಾವಿ, ಸೆ 27: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿರುದ್ದ ಹೇಳಿಕೆ ನೀಡಿ, ನಂತರ ತನ್ನ ಹೇಳಿಕೆಯನ್ನು ರಮೇಶ್ ಜಾರಕಿಹೊಳಿ ವಾಪಸ್ ಪಡೆದಿದ್ದಾರೆ.
ಚಿಕ್ಕೋಡಿಯಲ್ಲಿ ಮಾತನಾಡುತ್ತಿದ್ದ ಜಾರಕಿಹೊಳಿ ' ಒತ್ತಡದಿಂದ ಏನೇನೋ ಮಾತನಾಡಿಬಿಟ್ಟೆ. ನಾನು ನೀಡಿದ ಹೇಳಿಕೆಯನ್ನು ವಾಪಸ್ ಪಡೆಯುತ್ತಿದ್ದೇನೆ" ಎಂದು ಹೇಳಿದರು.
" ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರ ಬಗ್ಗೆ ಮಾತನಾಡಬಾರದಿತ್ತು. ಬಾಯಿತಪ್ಪಿ ಮಾತನಾಡಿಬಿಟ್ಟೆ" ಎಂದು ಜಾರಕಿಹೊಳಿ ನೀಡಿರುವ ಸಮಜಾಯಿಶಿ, ರಾಜ್ಯ ರಾಜಕಾರಣದಲ್ಲಿ ಹಲವು ಚರ್ಚೆಗೆ ನಾಂದಿ ಹಾಡಿದೆ.

ಕೃಷ್ಣಾ ನದಿ ಪ್ರವಾಹ ಪೀಡಿತ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭ ಅಥಣಿ ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಕುರಿತು ಲಕ್ಷ್ಮಣ ಸವದಿ ಅವಾಚ್ಯ ಶಬ್ದಗಳನ್ನು ಬಳಸಿದ್ದ ವಿಡಿಯೋ ವೈರಲ್ ಆಗಿತ್ತು. ಅದಕ್ಕೆ ಮಹೇಶ್ ಕುಮಟಳ್ಳಿ ಬೇಸರ ವ್ಯಕ್ತಪಡಿಸಿದ್ದರು.
" ಮೊಬೈಲ್ ನಲ್ಲಿ ಮಾತನಾಡುತ್ತಾ ಸವದಿ "ಕುಮಟಳ್ಳಿಯಂಥ ದರಿದ್ರ ಮಕ್ಕಳ ಹೆಸರು ನೆನಪಿಸಬೇಡಿ, ಅವನ ಸುದ್ದಿ ತಗೊಂಡ್ ನಾನೇನು ಮಾಡಲಿ. ನನ್ನ ಮೂಡ್ ಹಾಳು ಮಾಡಬೇಡಿ" ಎಂದು ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ್ದ ರಮೇಶ್ ಜಾರಕಿಹೊಳಿ, ಸವದಿ ಈ ರೀತಿಯ ಹೇಳಿಕೆಯನ್ನು ನೀಡಿರುವುದು ದುರ್ದೈವ. ಅಥಣಿಯ ಜನ ತಿರಸ್ಕಾರ ಮಾಡಿದರೂ, ಡಿಸಿಎಂ ಆಗಿದ್ದಾರೆ. ಅವನ ಮಾತಿನಿಂದಲೇ ಆ ಮಟ್ಟಕ್ಕೆ ಬಂದಿದ್ದಾನೆ" ಎಂದು ಜಾರಕಿಹೊಳಿ ಹೇಳಿದ್ದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications