ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣ: ಕರವೇಯಿಂದ ಸುವರ್ಣ ಸೌಧಕ್ಕೆ ಮುತ್ತಿಗೆ
ಬೆಳಗಾವಿ, ಡಿಸೆಂಬರ್ 20: ಸ್ವಾತಂತ್ರ್ಯ ಸೇನಾನಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸಗೊಳಿಸಿದ ಎಂಇಎಸ್ ಮತ್ತು ಶಿವಸೇನೆ ಕಾರ್ಯಕರ್ತರ ಕೃತ್ಯವನ್ನು ಖಂಡಿಸಿ ಇಂದು ಬೆಳಗಾವಿಯಲ್ಲಿ ಕರವೇ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆಗೆ ನಡೆಸುತ್ತಿದ್ದಾರೆ. ಶಿವಸೇನೆ ಮತ್ತು ಎಂಇಎಸ್ ನಡೆಯನ್ನು ಖಂಡಿಸಿ ಇಂದು ಸರಣಿ ಹೋರಾಟ ನಡೆಸಲಾಗುತ್ತಿದೆ.
ರಾಜ್ಯಾದ್ಯಂತ ಕರವೇ ಕಾರ್ಯಕರ್ತರು ಬೆಳಗಾವಿಗೆ ಆಗಮಿಸಿದ್ದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಮಹಾರಾಷ್ಟ್ರ ಏಕೀಕರಣ ಸಮಿತಿ( ಎಂಇಎಸ್) ಮತ್ತು ಶಿವಸೇನೆಯನ್ನು ಭಯೋತ್ಪಾದಕ ಗುಂಪುಗಳು ಎಂದು ಕರವೇ ಕರೆದಿದ್ದು ಇಂದು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದು ತಪ್ಪಿಸಲಾಗದು ಎಂದು ಹೇಳಿದೆ. ಸುವರ್ಣ ಸೌಧಕ್ಕೂ ಮುತ್ತಿಗೆ ಹಾಕಲು ಕರವೇ ಕಾರ್ಯಕರ್ತರು ನಿರ್ಧರಿಸಿದ್ದಾರೆ. ಬೆಳಗಾವಿಯಲ್ಲಿ ನಾಲ್ಕು ದಿಕ್ಕುಗಳಲ್ಲೂ ಇಂದು ಬೃಹತ್ ಪ್ರತಿಭಟನೆ ನಡೆಯಲಿದ್ದು ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಿರೇಬಾಗೇವಾಡಿ ಟೋಲ್ ಗೇಟ್ನಿಂದ ಒಂದು ಮೆರವಣಿಗೆ, ಬಾಗಲಕೋಟೆ ಮಾರ್ಗವಾಗಿ ಮತ್ತೊಂದು, ಚಿನ್ನಮ್ಮ ವೃತ್ತದಿಂದ ಸುವರ್ಣ ಚಲೋ, ಪೀರನವಾಡಿಯಿಂದ ಬೈಕ್ -ಕಾರು ಮೂಲಕ ಮತ್ತೊಂದು ಮೆರವಣಿಗೆ ನಡೆಸಲಿದ್ದಾರೆ.
ಈ ವೇಳೆ ಮಾತನಾಡಿದ ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ, "ಶಿವಸೇನೆ ಮತ್ತು ಎಂಇಎಸ್ ಕರ್ನಾಟಕದ ಸ್ವಾಭಿಮಾನವನ್ನು ಕೆರಳಿಸಿದೆ. ಎಂಇಎಸ್ ಕಾರ್ತಕರ್ತರು ಪ್ರತಿಮೆಯನ್ನು ಧ್ವಂಸಗೊಳಿಸುವಾಗ ಬಯಲಾಗಿ ಬಿಟ್ಟು ನಮ್ಮನ್ನು ತಡೆಯುವಂತ ಕೆಲಸ ಮಾಡುತ್ತಿದ್ದಾರೆ. ಇದು ನಿಜಕ್ಕೂ ಖಂಡನೀಯವಾಗಿದೆ" ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

'ಒಂದು ಕಿ.ಲೋ ಪಾದಯಾತ್ರೆ ಮಾಡುತ್ತೇವೆ. ನಾವು ನಮ್ಮ ಗುರಿ, ಬದ್ಧತೆ, ನಿಷ್ಠೆಯನ್ನು ತಲುಪುವಂತ ಕೆಲಸ ಮಾಡುತ್ತೇವೆ. ಈ ಸರ್ಕಾರಕ್ಕೆ ಮೊದಲಿದಂಲೂ ಎಂಇಎಸ್ ಯನ್ನು ನಿಷೇಧ ಮಾಡಬೇಕು ಎಂದು ಹೇಳುತ್ತಿದ್ದೇವೆ. ಆದರೆ ಈ ಸರ್ಕಾರ ಎಂಈಎಸ್ ಪುಂಡಾಟ ಸಹಿಸಿಕೋಂಡು ಬಂದಿವೆ. ಇವತ್ತಿನ ಸರ್ಕಾರ ಅಂತಲ್ಲ ಹಿಂದಿನ ಸರ್ಕಾರ ಕೂಡ ಇದೇ ಮಾಡಿದೆ. ಈಗಲಾದರೂ ರಣಹೇಡಿ ಆಗಬೇಡಿ. ಈ ನೆಲದ ಸ್ವಾಭಿಮಾನವನ್ನು ಉಳಿಸುವಂತ ಕೆಲಸ ಮಾಡಿ" ಎಂದು ನಾರಾಯಣಗೌಡರು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
'ಈ ಬಗ್ಗೆ ನಾನು ರಾಜಕೀಯ ನಾಯಕರೊಂದಿಗೆ ಮಾಡಿದ್ದೇನೆ. ಅವರು ಇಂದು ಸದನದಲ್ಲಿ ಮಾತನಾಡುತ್ತೇವೆ ಎಂದಿದ್ದಾರೆ. ಒಂದು ವೇಳೆ ಸದನದಲ್ಲಿ ಈ ಬಗ್ಗೆ ಪ್ರಸ್ತಾಪ ಮಾತನಾಡಿಲ್ಲ ಅಂದರೆ ಕ್ರಮ ತೆಗೆದುಕೊಂಡಿಲ್ಲ ಎಂದರೆ ನಾವು ಇನ್ನುಮುಂದೆ ಯಾವ ಪಕ್ಷಕ್ಕೂ ಮತ ಹಾಕುವುದಿಲ್ಲ'ಎಂದು ಖಡಕ್ ಹೇಳಿಕೆ ನೀಡಿದ್ದಾರೆ.
'ಮರಾಠಿಗರ ಮತದಾನಕ್ಕಾಗಿ ರಾಜ್ಯದಲ್ಲಿ ಎಂಇಎಸ್ ಪುಂಡರ ಚಟುವಟಿಕೆಗಳನ್ನು ಸಹಿಸಿಕೊಳ್ಳುತ್ತಿದ್ದಾರೆ. ಓಟು ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ರಾಜಕೀಯ ನಾಯಕರು ಓಟಿಗಾಗಿ ಅವರನ್ನು ಸಹಿಸಿಕೊಂಡಿದ್ದಾರೆ. ಎಂಇಎಸ್ ನ್ನು ಭಯೋತ್ಪಾದಕರು ಎಂದು ಮರಾಠಿಗರೇ ತಿರಸ್ಕಾರ ಮಾಡಿದ್ದಾರೆ. ಹೀಗಿರುವಾಗ ಎಂಇಎಸ್ ಅವರನ್ನು ಓಲೈಸುವುದನ್ನು ಬಿಡಬೇಕು. ಕರ್ನಾಟಕದ ನೆಲದ ಸ್ವಾಭಿಮಾನವನ್ನು ಎತ್ತಿ ಹಿಡಿಯುವಂತ ಕೆಲ ಮಾಡಬೇಕು ಎನ್ನುವುದು ನನ್ನ ಮನವಿ' ಎಂದು ಮನವಿ ಮಾಡಿದ್ದಾರೆ.
ನಮ್ಮ ರಾಜ್ಯ ರಕ್ಷಣೆಗಾಗಿ ನಾವು ಬೆಂಗಳೂರಿನಿಂದ ಬರುವಂತ ಪರಿಸ್ಥಿತಿ ಬಂದೊದಗಿದೆ. ಕನ್ನಡದ ಭಾವುಟವನ್ನು ಸುಟ್ಟು ಹಾಕಿದ್ದಾರೆ. ಮಹಿಳೆಯರು ಅರಿಶಿಣ ಕುಂಕುಮ ಎಂದು ನಮ್ಮ ಕನ್ನಡದ ಬಾವುಟವನ್ನು ನೋಡುತ್ತಾರೆ. ಅದನ್ನು ಸುಟ್ಟ್ಟು ಹಾಕಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕರವೇ ಮಹಿಳಾ ಕಾರ್ಯಕರ್ತರು ಕಿಡಿ ಕಾರಿದ್ದಾರೆ.
Recommended Video
ಇದು ಕರವೇ ಕರ್ತವ್ಯ ಮಾತ್ರವಲ್ಲ ಎಲ್ಲರ ಕರ್ತವ್ಯ. ಭಾಷೆ, ನಡೆ, ನುಡಿ ಅಂತ ಬಂದರೆ ಮೊದಲು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದೇವೆ. ಹೋರಾಟವನ್ನು ಹತ್ತಿಕ್ಕುವಂತೆ ಕೆಲಸವನ್ನು ಸರ್ಕಾರ ಮಾಡುತ್ತಲೇ ಬಂದಿದೆ. ಏನೇ ಆಗಲಿ ನಾವು ಪ್ರತಿಭಟನೆ ಮಾಡಿ ಮುತ್ತಿಗೆ ಹಾಕುವ ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications