ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ: ಯಲ್ಲಮ್ಮ ಜಾತ್ರೆಯಲ್ಲಿ ದರೋಡೆಕೋರರ ಆರ್ಭಟ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಡಿಸೆಂಬರ್ 15: ಬೆಳಗಾವಿ ಗಡಿಯಲ್ಲಿನ ಕೊಕಟನೂರು ಯಲ್ಲಮ್ಮನ ಜಾತ್ರೆಯಲ್ಲಿ ದರೋಡೆಕೋರರ ಗುಂಪು ದಾಳಿ ಮಾಡಿ ಭಕ್ತಾದಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಗ-ನಾಣ್ಯ ದೋಚಿದೆ.

ತಡ ರಾತ್ರಿ ದಾಳಿ ನಡೆಸಿರುವ 20ಕ್ಕೂ ಹೆಚ್ಚು ಜನ ದರೋಡೆಕೋರರ ಗುಂಪು, ಬಹಿರ್ದೆಸೆಗೆಂದು ಬಯಲಿಗೆ ತೆರಳಿದ್ದ ಭಕ್ತಾದಿಗಳ ಮೇಲೆ ದಾಳಿ ನಡೆಸಿ ಚಾಕುವಿನಿಂದ ಮನಸೋಇಚ್ಛೆ ಹಲ್ಲೆ ನಡೆಸಿ ಹಣ, ಒಡವೆ, ಮೊಬೈಲ್ ಗಳನ್ನು ದೋಚಿದೆ.

ಬೆಳಗಾವಿ: ಪ್ರೇಮಿಗಳನ್ನು ದೋಚುತ್ತಿದ್ದ ಐವರ ಬಂಧನಬೆಳಗಾವಿ: ಪ್ರೇಮಿಗಳನ್ನು ದೋಚುತ್ತಿದ್ದ ಐವರ ಬಂಧನ

ಇರಿತಕ್ಕೊಳಗಾದವರಲ್ಲಿ ಸತೀಶ ಪಾಟೀಲ, ಪ್ರವೀಣ ಸ್ವಾಮಿ ಎಂಬುವವರಿಗೆ ತೀರ್ವ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

Robbers stubbed devotees in Belagavi Yallamma fair

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಗ್ರಾಮದಲ್ಲಿ ನಡೆಯುತ್ತಿರುವ ಈ ಜಾತ್ರೆಯಲ್ಲಿ ಉತ್ತರ ಕರ್ನಾಟಕ-ದಕ್ಷಿಣ ಮಹಾರಾಷ್ಟ್ರ ದಿಂದ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ, ಕಳೆದೆಂದೂ ಈ ರೀತಿಯ ಅಹಿತಕರ ಘಟನೆ ನಡೆದಿರಲಿಲ್ಲ, ಆದರೆ ಈಗ ನಡೆದಿರುವ ಘಟನೆ ಭಕ್ತಾದಿಗಳನ್ನು ಬೆಚ್ಚಿ ಬೀಳಿಸಿದೆ.

ಇರಿತಕ್ಕೊಳಗಾದ ಬಹುತೇಕರು ಭಕ್ತರು ಮಹಾರಾಷ್ಟ್ರದ ಕೊಲ್ಹಾಪುರ ನಿವಾಸಿಗಳು ಎನ್ನಲಾಗಿದೆ. ಗಾಯಾಳುಗಳನ್ನು ಅಥಣಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Belagavi district Kokatanuru villages Yallamma fair 20 peoples robbers group attacked on some devotees and stubbed them with knife and robed their gold, money and mobiles. injured people were admitted to Athani hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X