ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಮಲ್ ಪಂತ್ ಕುರಿತು ಡಿಕೆಶಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಜಾರಕಿಹೊಳಿ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಆಗಸ್ಟ್ 21: "ಮಿಸ್ಟರ್' ಎಂಬ ಪದವನ್ನು ಸಾಮಾನ್ಯವಾಗಿ ಬಳಕೆ ಮಾಡಲಾಗುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಿಸ್ಟರ್ ಅಂದಿದ್ದರಲ್ಲಿ ತಪ್ಪೇನಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಮರ್ಥಿಸಿಕೊಂಡರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ಹೀಗೆ ಮಾಡದಂತೆ ನಮ್ಮ ಅಧ್ಯಕ್ಷರು ಆಯುಕ್ತರಿಗೆ ಹೇಳಿದ್ದಾರೆ ಎಂದರು.

ಮಾತೃಭಾಷೆ ಮರಾಠಿಯಾದ್ರೂ ಕನ್ನಡದಲ್ಲಿ ಪೂರ್ಣಾಂಕ; ಬೆಳಗಾವಿ ಕುವರಿಯರಿಗೆ ವಿಶೇಷ ‌ಗೌರವಮಾತೃಭಾಷೆ ಮರಾಠಿಯಾದ್ರೂ ಕನ್ನಡದಲ್ಲಿ ಪೂರ್ಣಾಂಕ; ಬೆಳಗಾವಿ ಕುವರಿಯರಿಗೆ ವಿಶೇಷ ‌ಗೌರವ

ಈ ವೇಳೆ ಮಿಸ್ಟರ್ ಎಂಬ ಪದವನ್ನು ಡಿ.ಕೆ ಶಿವಕುಮಾರ್ ಬಳಸಿದ್ದಾರೆ. ಇದನ್ನು ಬಿಜೆಪಿಯ ಕೆಲ ನಾಯಕರು ಧಮ್ಕಿ ಹಾಕಿದ್ದಾರೆ ಎನ್ನುತ್ತಿದ್ದಾರೆ. ಈ ಮೊದಲು ಬಿಜೆಪಿ ನಾಯಕರು ಕೂಡ ಹೀಗೆ ನಡೆದುಕೊಂಡಿದ್ದಾರೆ ಎಂದು ತಿರುಗೇಟು ನೀಡಿದರು.

Belagavi: Satish Jarakiholi React On DK Shivakumar Statement About Kamal Pant

ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದರೂ ಕಂದಾಯ ಸಚಿವರು ಮಾತ್ರ ಇತ್ತ ಬರುತ್ತಿಲ್ಲ. ಕಂದಾಯ ಸಚಿವರು ಕೇವಲ ಬೆಂಗಳೂರಿಗೆ ಸೀಮಿತರಾಗಿದ್ದಾರೆ. ಈ ಭಾಗದ ಜನರು ಎಷ್ಟೇ ಸಮಸ್ಯೆ ಎದುರಿಸುತ್ತಿದ್ದರೂ ಕಂದಾಯ ಸಚಿವ ಆರ್.ಅಶೋಕ್ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.

ಕಳೆದ ವರ್ಷದ ಪ್ರವಾಹದ ಸಂದರ್ಭದಲ್ಲೂ ಆರ್.ಅಶೋಕ್ ಅವರು ಉತ್ತರ ಕರ್ನಾಟಕ ಪ್ರವಾಸ ಮಾಡಿರಲಿಲ್ಲ. ಸಚಿವರು ಬೆಂಗಳೂರು ಬಿಟ್ಟು ಹೊರಬಂದು ಇಲ್ಲಿನ ಜನರ ಸಮಸ್ಯೆಗಳನ್ನು ಆಲಿಸಬೇಕು ಎಂದು ಆಗ್ರಹಿಸಿದರು.

English summary
KPCC Working president Satish Jarakiholi accused Congress activists of targeting in Bengaluru riots.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X