ರಿಲ್ಯಾಕ್ಸ್ ಮೂಡ್ನಲ್ಲಿ ಫಿಶ್ ಜೊತೆಗೆ ಟೈಂಪಾಸ್ ಮಾಡಿದ ಜಾರಕಿಹೊಳಿ
ಬೆಳಗಾವಿ, ಜೂನ್, 03: ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆದಿದ್ದು, ಫಲಿತಾಂಕ್ಕೆ ಇನ್ನು ಕೆಲವೇ ಕ್ಷಣಗಳು ಬಾಕಿಯಿವೆ. ಇನ್ನು ಚಿಕ್ಕೋಡಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಗಳು ಪ್ರಿಯಾಂಕ ರಾಜಕೀಯ ಭವಿಷ್ಯದ ಬಗ್ಗೆ ತಲೆಕೆಡಿಸಿಕೊಳ್ಳದೇ ಸಚಿವ ಸತೀಶ್ ಜಾರಕೀಹೊಳಿ ಅವರು ಮೀನಿಗೆ ಕಾಳಾಕುವ ಮೂಲಕ ಎಂಜಾಯ್ ಮಾಡುತ್ತಿರುವ ದೃಶ್ಯ ಕುತೂಹಲ ಕೆರಳಿಸಿದೆ.
ಸಚಿವ ಸತೀಶ್ ಜಾರಕಿಹೊಳಿ ಅವರು, ಮಗಳು ಪ್ರಿಯಾಂಕ ಜಾರಕಿಹೊಳಿ ರಾಜಕೀಯ ಭವಿಷ್ಯದ ಬಗ್ಗೆ ಯಾವುದೇ ಯೋಚನೆಯಿಲ್ಲದೆ, ಮಾರ್ಕಂಡೇಯ ನದಿಯಲ್ಲಿ ಮೀನುಗಳಿಗೆ ಆಹಾರ ನೀಡಿ ಗಮನ ಸೆಳೆದಿದ್ದಾರೆ.

ಇಂದು (ಜೂನ್ 03) ಬೆಳ್ಳಂಬೆಳಗ್ಗೆ ವಿಹಾರಕ್ಕೆ ತೆರಳಿದ ಸತೀಶ್ ಜಾರಕಿಹೊಳಿ ಅವರು, ಬೆಳಗಾವಿ ಜಿಲ್ಲೆಯ ಗೋಕಾಕ್ ಯೋಗಿ ಕೊಳ್ಳದ ಬಳಿ ಹರಿಯುತ್ತಿರುವ ಮಾರ್ಕಂಡೇಯ ನದಿ ದಂಡೆ ಮೇಲೆ ನಿಂತು ಮೀನುಗಳಿಗೆ ಆಹಾರ ನೀಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಯಾರೇ ಗೆದ್ದರೂ ಮೊದಲ ಬಾರಿ ಸಂಸತ್ಗೆ: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26ರಂದು ಮತದಾನ ನಡೆದಿದ್ದು, ಜೂನ್ 4ಕ್ಕೆ ಫಲಿತಾಂಶ ಹೊರಬೀಳಲಿದೆ. ಮತ್ತೊಂದೆಡೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿ ಯಾರೇ ಗೆಲುವು ಸಾಧಿಸಿದರೂ ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಲಿದ್ದಾರೆ. ಹಾಗಾದರೆ ಇಲ್ಲಿ ಯಾರಿಗೆ ವರ್ಚಸ್ಸು ಹೆಚ್ಚಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ಒಳಗೊಂಡಿರುವ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರಾ ಹಣಾಹಣಿ ಏರ್ಪಟ್ಟಿದೆ. ಹಾಲಿ ಬಿಜೆಪಿ ವಶದಲ್ಲಿದ್ದ ಕ್ಷೇತ್ರವನ್ನು ಮತ್ತೇ ತನ್ನ ವಶ ಆಗಲಿದೆ ಎಂಬುದು ಕೈ ಪಾಳೇಯದ ವಿಶ್ವಾಸವಾದರೆ, ಕ್ಷೇತ್ರದಲ್ಲಿ ಎರಡನೇ ಬಾರಿ ಕಮಲ ಅರಳಲಿದೆ ಎಂಬುದು ಬಿಜೆಪಿಗರ ಮಾತಾಗಿದೆ.
ಮೋದಿ ಅಲೆ- ಸಿದ್ದರಾಮಯ್ಯ ಹವಾ ಎರಡರ ನಡುವೆ ಜಂಗಿಕುಸ್ತಿ ನಡೆದಿರುವುದರಿಂದ ರಾಜ್ಯದ ಹೈವೊಲ್ಟೆಜ್ ಕ್ಷೇತ್ರಗಳಲ್ಲಿ ಚಾಮರಾಜನಗರ ಕೂಡ ಒಂದಾಗಿದೆ.
ಇನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಸ್.ಬಾಲರಾಜು ಬಿಜೆಪಿ ಹಾಗೂ ಜಾತ್ಯತೀತ ಜನತಾದಳ ಮೈತ್ರಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ನಿಂದ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನಿಲ್ ಬೋಸ್ ಕಣಕ್ಕಿಳಿದಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರವಾಗಿದೆ.
ಕ್ಷೇತ್ರದಲ್ಲಿ ಬಿಜೆಪಿಯ ಓರ್ವ ಶಾಸಕನೂ ಇಲ್ಲದಿರುವುದು, ಸಿದ್ದರಾಮಯ್ಯ ವರುಣ ಕೂಡ ಕ್ಷೇತ್ರಕ್ಕೆ ಒಳಪಡುವುದು ಹಾಗೂ ಗ್ಯಾರಂಟಿಗಳ ಮಹಿಮೆಯಿಂದ ಕಾಂಗ್ರೆಸ್ ಗೆಲ್ಲಲ್ಲಿದೆ ಎಂಬುದು ಕೈ ಪಕ್ಷದ ವಿಶ್ವಾಸವಾಗಿದೆ. ಆದರೆ, ಮೋದಿ ನಾಮಬಲ ಹಾಗೂ ಬಾಲರಾಜು ಸಜ್ಜನ ರಾಜಕಾರಣಿ ಎಂಬ ದಿಸೆಯಲ್ಲಿ ಮತಗಳು ಸಿಕ್ಕು ಕಮಲ ಅರಳುವ ಲೆಕ್ಕಾಚಾರದಲ್ಲಿ ಬಿಜೆಪಿಯದ್ದಾಗಿದೆ.
ಚಾಮರಾಜನಗರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳು ಹಾಗೂ ಮೈಸೂರು ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳು ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡಲಿದೆ. ಕಾಂಗ್ರೆಸ್ನ 7 ಹಾಗೂ ಜೆಡಿಎಸ್ನ ಓರ್ವ ಶಾಸಕರು ಕ್ಷೇತ್ರದಲ್ಲಿದ್ದಾರೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಒಟ್ಟು 14 ಮಂದಿ ಕಣದಲ್ಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರಾ ಹಣಾಹಣಿ ಇದೆ. ಕಳೆದ ಚುನಾವಣೆಯಲ್ಲಿ ಬಿಎಸ್ಪಿ ಉತ್ತಮ ಸ್ಪರ್ಧೆ ಒಡ್ಡಿದ್ದರಿಂದ ಈ ಬಾರಿ ಆನೆಯ ಮತ ಗಳಿಕೆಯೂ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications