'ಎಲ್ಲವನ್ನೂ ಸಿಎಂ ಮಾಡೋದಾದ್ರೆ ಬೆಳಗಾವಿಯ ನಾಲ್ವರು ಸಚಿವರು ಯಾಕೆ?' - ಸತೀಶ್ ಜಾರಕಿಹೊಳಿ
ಬೆಳಗಾವಿ, ಮೇ 31: ''ಎಲ್ಲವನ್ನೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರೇ ಮಾಡುವುದಾದರೆ ಜಿಲ್ಲೆಯ ನಾಲ್ವರು ಸಚಿವರು ಯಾಕಾಗಿ ಇದ್ದಾರೆ'' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟೀಕಿಸಿದ್ದಾರೆ.
ಮಂಗಳ ಬಿಮ್ಸ್ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸಲು ಸ್ವತಃ ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುವುದಾಗಿ ಹೇಳಿದ್ದರು. ಈ ವಿಚಾರದಲ್ಲಿ ಜಿಲ್ಲೆಯ ಸಚಿವರುಗಳ ಬಗ್ಗೆ ಲೇವಡಿ ಮಾಡಿರುವ ಸತೀಶ್ ಜಾರಕಿಹೊಳಿ, ''ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುವುದಾಗಿ ಹೇಳಿದ್ದಾರೆ. ಎಲ್ಲವೂ ಮುಖ್ಯಮಂತ್ರಿಗಳೇ ಮಾಡುವುದಾದರೆ ಜಿಲ್ಲೆಯ ನಾಲ್ವರು ಸಚಿವರು ಯಾಕೆ ಬೇಕು'' ಎಂದು ಪ್ರಶ್ನಿಸಿದ್ದಾರೆ.
ಬೆಳಗಾವಿ ಫಲಿತಾಂಶ: "ಏನಯ್ಯ ಸತೀಶ್, ಎಷ್ಟು ಟೆನ್ಷನ್ ಕೊಡ್ತಿಯಲ್ಲಪ್ಪ''
''ಜಿಲ್ಲೆಯಲ್ಲಿರುವ ಮಂತ್ರಿಗಳು ಬಿಮ್ಸ್ಗೆ ತೆರಳಿ ಸಭೆ ನಡೆಸಿ, ಏನು ಸಮಸ್ಯೆ ಎಂಬುವುದನ್ನು ಸರಿಯಾಗಿ ಕಂಡುಕೊಂಡು ಸಮಸ್ಯೆ ಪರಿಹರಿಸಬೇಕು. ಅದನ್ನು ಬಿಟ್ಟು ಎಲ್ಲವೂ ಮುಖ್ಯಮಂತ್ರಿಗಳೇ ಮಾಡುವುದೆಂದರೇ ಎಷ್ಟು ಸರಿ? ಅಷ್ಟಕ್ಕೂ ಎಲ್ಲವೂ ಮುಖ್ಯಮಂತ್ರಿಗಳೇ ಮಾಡಲು ಆಗುವುದಿಲ್ಲ'' ಎಂದು ಕೂಡಾ ಹೇಳಿದರು.

ಇನ್ನು ''ಯಾವುದೇ ಸರ್ಕಾರ ಆಡಳಿತ ನಡೆಸುವುದಾದರೂ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಅದೇ ಜಿಲ್ಲೆಯವರು ಆಗಿರಬೇಕು ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಉಸ್ತುವಾರಿ ಸಚಿವರು ಅದೇ ಜಿಲ್ಲೆಯವರಾದರೆ ಅವರಿಗೆ ಅಲ್ಲಿನ ಸಮಸ್ಯೆಗಳ ಬಗ್ಗೆ ತಿಳಿದಿರುತ್ತದೆ. ಹಾಗಾದರೆ ಸಮಸ್ಯೆ ಬಗೆಹರಿಸಲು ಸುಲಭವಾಗುತ್ತದೆ'' ಎಂದು ಅಭಿಪ್ರಾಯಿಸಿದರು.
ಸುರೇಶ್ ಅಂಗಡಿ ನಿಧನದಿಂದಾಗಿ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯು ಮೇ 2 ರಂದು ನಡೆದಿದ್ದು, ಬಿಜೆಪಿಯ ದಿವಂಗತ ಸುರೇಶ್ ಅಂಗಡಿ ಪತ್ನಿ ಮಂಗಳಾ ಸುರೇಶ್ ಅಂಗಡಿ ಎದುರು ಭಾರೀ ಪೈಪೋಟಿ ನೀಡಿ ಸತೀಶ್ ಜಾರಕಿಹೊಳಿ ಪರಾಭವಗೊಂಡಿದ್ದರು.
(ಒನ್ಇಂಡಿಯಾ ಸುದ್ದಿ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications