ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಮೇಶ ಜಾರಕಿಹೊಳಿ ಯಾವುದೇ ಬೇಡಿಕೆ ಇಟ್ಟಿಲ್ಲ: ಸತೀಶ ಜಾರಕಿಹೊಳಿ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

Recommended Video

ಸಹೋದರನ ಫೋನ್‍ಗೂ ಸಿಗದ ರಮೇಶ್ ಜಾರಕಿಹೊಳಿ | Oneindia Kannada

ಬೆಳಗಾವಿ, ಡಿಸೆಂಬರ್ 26: ಭಿನ್ನಮತ ಶಮನಕ್ಕೆ ಎಲ್ಲರೂ ಪ್ರಯತ್ನ ಮಾಡುತ್ತಿದ್ದು, ಶಾಸಕ ರಮೇಶ ಜಾರಕಿಹೊಳಿ ಅವರನ್ನು ಹುಡುಕಿ ಭೇಟಿ ಆಗಬೇಕಿದೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಸುದ್ದಿಗಾರರೊಂದಿಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು ಖಾತೆ ನಿಗದಿ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದರು.

ರಮೇಶ್ ಜಾರಕಿಹೊಳಿ ಅಸಮಾಧಾನ : ಸತೀಶ್ ಜಾರಕಿಹೊಳಿ ಹೇಳಿದ್ದೇನು?ರಮೇಶ್ ಜಾರಕಿಹೊಳಿ ಅಸಮಾಧಾನ : ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಮೊದಲಿನಿಂದ ರಮೇಶ ಜಾರಕಿಹೊಳಿ ಹಾಗೇ ಇದ್ದಾರೆ. ರಾಜಕೀಯವಾಗಿ ಅವರಿಗೆ ಏನು ಹೇಳಬೇಕು ಎಂದು ಪ್ರಯತ್ನಿಸುತ್ತೇನೆ. ರಮೇಶ ಜಾರಕಿಹೊಳಿಗೆ ಇನ್ನೂ ಫೋನ್ ಮಾಡಿಲ್ಲ, ಸಂಪರ್ಕಿಸಿಲ್ಲ. ಸಂಜೆ ಅವರ ಜತೆ ಮಾತನಾಡುತ್ತೇನೆ. ಸರಿಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತೇವೆ ಎಂದರು.

Satish jarkiholi spokes with journalists about Ramesh Jarakiholi

ಯಾವ ಶಾಸಕರು ರಾಜೀನಾಮೆ ಕೊಡಲ್ಲ, ಸರ್ಕಾರ ಸುಭದ್ರ : ದೇವೇಗೌಡಯಾವ ಶಾಸಕರು ರಾಜೀನಾಮೆ ಕೊಡಲ್ಲ, ಸರ್ಕಾರ ಸುಭದ್ರ : ದೇವೇಗೌಡ

ಆರು ತಿಂಗಳಿಂದ ಬಿಜೆಪಿ ಅವರು ಆಪರೇಷನ್ ಬಗ್ಗೆ ಹೇಳುತ್ತಲೇ ಇದ್ದಾರೆ. ಆದರೆ ನಾವು ಅಸಮಾಧಾನ ಇತ್ಯರ್ಥಪಡಿಸಲು ಪ್ರಯತ್ನಿಸುತ್ತೇವೆ. ಯಾರೂ ಪಕ್ಷ ಬಿಟ್ಟು ಹೋಗುವ ಪ್ರಶ್ನೆ ಇಲ್ಲ. ಶಾಸಕ ರಮೇಶ ಜಾರಕಿಹೊಳಿಗೆ ಯಾವುದೇ ಬೇಡಿಕೆ ಇಲ್ಲ. ನನ್ನ ಮೇಲೆ ಯಾವುದೇ ಮುನಿಸಿಲ್ಲ ಎಂದು ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.

English summary
Minister Satish jarkiholi spokes with journalists about MLA Ramesh Jarakiholi in Belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X