ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಎಂಎ ಆಯ್ತು, ಈಗ ಎಂಇಎಸ್ ಮುಖಂಡನಿಂದ ಬಹುಕೋಟಿ ಹಗರಣ ಆರೋಪ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ನವೆಂಬರ್ 14: ಐಎಂಎ ಹಗರಣದ ನಂತರ ರಾಜ್ಯದಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿಯಲ್ಲಿ ಎಂಇಎಸ್ ಮುಖಂಡರೊಬ್ಬರು ಸಾವಿರಾರು ಕೋಟಿ ರೂಪಾಯಿ ವಂಚನೆ ಮಾಡಿರುವುದಾಗಿ ತಿಳಿದುಬಂದಿದೆ.

ಎಂಇಎಸ್ ಮುಖಂಡ ಕಿರಣ್ ಠಾಕೂರ್ ಒಡೆತನದ ಲೋಕಮಾನ್ಯ ಮಲ್ಟಿ ಪರ್ಪಸ್ ಕೊ ಆಪರೇಟಿವ್ ಸೊಸೈಟಿಯಿಂದ ವಂಚನೆ ನಡೆದಿದ್ದು, ಠೇವಣಿದಾರರು ಇಟ್ಟಿರುವ ಹಣವನ್ನು ದುರುಪಯೋಗ ಪಡಿಸಿಕೊಂಡಿರುವುದಾಗಿ ಆರೋಪಿಸಿದ್ದಾರೆ.

ಐಎಂಎ ಹಗರಣ; ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ಐಎಂಎ ಹಗರಣ; ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಸುಮಾರು 2 ಸಾವಿರ ಕೋಟಿ ರೂಪಾಯಿವರೆಗೂ ಹಣ ದುರುಪಯೋಗವಾಗಿದ್ದು, ಶಾಸಕ ಅಭಯ ಪಾಟೀಲ್ ಸೇರಿದಂತೆ 60 ಶಾಸಕರು ಸೇರಿ ಇಡಿ, ಕೇಂದ್ರ ಹಣಕಾಸು ಇಲಾಖೆ, ರಾಜ್ಯ ಸರ್ಕಾರಕ್ಕೆ ದೂರು ನೀಡಿದ್ದಾರೆ. ಪ್ರಕರಣದ ಸಂಪೂರ್ಣ ತನಿಖೆಗೆ ಸಹಕಾರ ಇಲಾಖೆಗೆ ಸೂಚನೆ ನೀಡಲಾಗಿದ್ದು, ಇಂದಿನಿಂದ ಸಹಕಾರ ಇಲಾಖೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

Scam By Lokamanya Multipurpose Co Society In Belagavi

ಗೋವಾ, ಮಹಾರಾಷ್ಟ್ರ, ಕರ್ನಾಟಕದ ಹಲವು ರಾಜಕಾರಣಿಗಳು ಈ ಸೊಸೈಟಿಯಲ್ಲಿ ಹಣ ಹೂಡಿಕೆ ಮಾಡಿರುವುದಾಗಿಯೂ ತಿಳಿದುಬಂದಿದೆ. ಟಿಳಕವಾಡಿ ಬ್ರ್ಯಾಂಚ್ ಗೆ ಸಹಕಾರ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಸಹಕಾರ ರೆಜಿಸ್ಟ್ರಾರ್ ಶಿವಪ್ರಕಾಶ ಅವರಿಂದ ದಾಖಲೆಗಳ ಪರಿಶೀಲನೆ ಮುಂದುವರೆದಿದೆ.

English summary
Another multi-crore fraud case has emerged in the state after the IMA scandal. A MES leader in Belagavi has been accused of embezzling thousands of crores of rupees,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X