ಶಾದಿಭಾಗ್ಯದ ವಿರುದ್ಧ ಬೇಕಾದ್ರೆ ಕೋರ್ಟ್ ಗೆ ಹೋಗಿ!
ಬೆಳಗಾವಿ, ಡಿ. 5 : ಬುಧವಾರ ವಿಧಾನ ಪರಿಷತ್ತಿನಲ್ಲಿ ಶಾದಿಭಾಗ್ಯ ಯೋಜನೆ ಕುರಿತ ವಿಚಾರ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಬಿಸಿ-ಬಿಸಿ ಚರ್ಚೆಗೆ ಕಾರಣವಾಯಿತು. ಸಂವಿಧಾನ ಬದ್ಧವಾಗಿ ಯೋಜನೆ ಜಾರಿಗೆ ತಂದಿದ್ದೇವೆ ಇದನ್ನು ಬೇಕಾದರೆ ನ್ಯಾಯಾಲದಲ್ಲೂ ಪ್ರಶ್ನಿಸಿ ಎಂದು ಸಿಎಂ ಪ್ರತಿಪಕ್ಷಗಳಿಗೆ ಸವಾಲು ಹಾಕಿದರು.
ಬುಧವಾರ ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಶಾದಿಭಾಗ್ಯ ಯೋಜನೆಯನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತ ಮಾಡಬೇಡಿ ಎಂದುಸ ಸರ್ಕಾರಕ್ಕೆ ಮನವಿ ಮಾಡುವ ಮೂಲಕ ಚರ್ಚೆ ಆರಂಭಿಸಿದರು. ಇದಕ್ಕೆ ಬಿಜೆಪಿಯ ಇತರ ಸದಸ್ಯರು ಧ್ವನಿ ಗೂಡಿಸಿಸದರು. ಅಂತಿಮವಾಗಿ ಬಿಜೆಪಿ ಸಭಾತ್ಯಾಗ ಮಾಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.

ಶಾದಿಭಾಗ್ಯ ಯೋಜನೆಯ ಕುರಿತು ಚರ್ಚೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಆರ್ಥಿಕ ಲಭ್ಯತೆ ನೋಡಿಕೊಂಡು ಎಲ್ಲ ವರ್ಗಗಳ ಬಡ ಮಹಿಳೆಯರಿಗೆ ಯೋಜನೆ ವಿಸ್ತರಣೆಗೆ ಮಾಡಲು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.(ಬುಧವಾರ ಸದನದಲ್ಲಿ ಏನಾಯ್ತ?)
ಒಂದು ಹಂತದಲ್ಲಿ ಬಿಜೆಪಿ ಸದಸ್ಯರು ಮತಬ್ಯಾಂಕ್ ರಾಜಕೀಯ ಮಾಡುತ್ತಿದ್ದೀರಿ ಎಂದು ಘೋಷಣೆ ಕೂಗಿದರು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ ಕಾನೂನಿನಂತೆ ಯೋಜನೆ ಘೋಷಿಸಿದ್ದೇವೆ. ಬೇಕಾದರೆ ಕೋರ್ಟ್ನಲ್ಲಿ ಪ್ರಶ್ನಿಸಿ ಎಂದೂ ಸಿಎಂ ಸವಾಲು ಹಾಕಿದರು. ಈ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. (ಶಾದಿ ಭಾಗ್ಯ : ಅಡಕತ್ತರಿಯಲ್ಲಿ ಸಿಎಂ ಸಿದ್ದರಾಮಯ್ಯ)
ಗೌಡರ ಸವಾಲು : ಶಾದಿಭಾಗ್ಯ ಯೋಜನೆ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿದೆ ಎಂಬ ಅಪವಾದದಿಂದ ತಪ್ಪಿಸಿಕೊಳ್ಳಲು ಎಲ್ಲ ವರ್ಗಗಳಿಗೆ ಘೋಷಣೆ ಮಾಡಿ 50ಕೋಟಿ ರೂ. ತೆಗೆದಿರಿಸಿ ಎಂದು ಪರಿಷತ್ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಸರ್ಕಾರಕ್ಕೆ ಸವಾಲು ಹಾಕಿದರು.
ಚರ್ಚೆಯಲ್ಲಿ ಪಾಲ್ಗೊಂಡ ಬಿಜೆಪಿ ಸದಸ್ಯ ಗೋ.ಮಧುಸೂದನ್ ಬಜೆಟ್ನಲ್ಲಿ ಅಲ್ಪಸಂಖ್ಯಾತರಿಗೆ ಎಂದು ಹೇಳಿ ಅನಂತರ ಆದೇಶದಲ್ಲಿ ಮುಸ್ಲಿಮರಿಗೆ ಎಂದು ಮಾತ್ರ ಬದಲಾವಣೆ ಮಾಡಿದ್ದೀರಿ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಆದೇಶದಲ್ಲಿ ಆಗಿರುವ ತಪ್ಪಿಗೆ ಸ್ಪಷ್ಟೀಕರಣ ಆದೇಶ ನೀಡಲಾಗಿದ್ದು, ಎಲ್ಲ ಅಲ್ಪಸಂಖ್ಯಾತ ಬಡ ಮಹಿಳೆಯರಿಗೆ ಎಂದು ಬದಲಾವಣೆ ಮಾಡಲಾಗಿದೆ ಎಂದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications