ಬೆಳಗಾವಿ : ಕುರಿ ಕಾಯ್ದ ಪೊಲೀಸರು
ಬೆಳಗಾವಿ, ನವೆಂಬರ್ 15 : ಸುವರ್ಣಸೌಧದ ಒಳಗೆ ಅಧಿವೇಶನ ನಡೆಯುತ್ತಿದ್ದರೆ ಹೊರಗೆ ಪೊಲೀಸರು ಲಾಠಿ ಬೀಸುತ್ತಾ 'ಟರ್ ಬ್ಯಾ' ಎನ್ನುತ್ತಾ ಕುರಿಗಳನ್ನು ಸುವರ್ಣಸೌಧದ ಅಂಗಳದಿಂದ ಆಚೆ ಅಟ್ಟುವುದರಲ್ಲಿ ನಿರತರಾಗಿದ್ದರು.
ಹೌದು ಇಂದು (ನವೆಂಬರ್ 15) ರ ಮಧ್ಯಾಹ್ನ ವಿಧಾನಸಭೆ ಕಲಾಪ ಪ್ರಾರಂಭವಾಗುವ ಹೊತ್ತಿಗೆ ಸರಿಯಾಗಿ ನೂರಾರು ಜನ ಕುರುಬ ಜನಾಂಗದ ಹೋರಾಟಗರರು ಬಾವುಟಗಳನ್ನು ಹಿಡಿದು ಸುವರ್ಣಸೌಧದ ಮುಂದೆ ಘೋಷಣೆಗಳನ್ನು ಕೂಗತೊಡಗಿದರು. ತಮ್ಮೊಂದಿಗೆ ತಂದಿದ್ದ ಕುರಿಗಳನ್ನು ಸೌಧದ ಒಳಕ್ಕೆ ನುಗ್ಗಿಸಲು ಪ್ರಯತ್ನಪಟ್ಟರು. ಇದರಿಂದ ಸದನದ ಹೊರಗೆ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.

ಕುರುಬ ಜನಾಂಗವನ್ನು ಎಸ್.ಟಿ ಗೆ ಸೇರಿಬೇಕೆಂಬ ಒತ್ತಾಯದೊಂದಿಗೆ ಬಂದಿದ್ದ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆಯ ಹೋರಾಟಗಾರರು ಸುವರ್ಣಸೌಧದ ಒಳಕ್ಕೆ ಕುರಿಗಳನ್ನು ಹಾಯಿಸಲು ಪ್ರಯತ್ನಪಟ್ಟರು.
ಪ್ರತಿಭಟನಾಕಾರರನ್ನು ಚದುರಿಸಲು ವಿಫಲರಾದ ಪೊಲೀಸರು ಕೊನೆಗೆ ಲಘು ಲಾಠಿ ಪ್ರಹಾರ ಮಾಡಬೇಕಾಯಿತು. ನಂತರ ಹೋರಾಟ ಮಾಡುತ್ತಿದ್ದ ಕೆಲವು ಮುಖಂಡರನ್ನು ಪೊಲೀಸರು ಬಂಧಿಸಿದರು.
ಕೊನೆಗೆ ಪೊಲೀಸರೆ ತಮ್ಮ ಲಾಠಿ ಬೀಸುತ್ತಾ 'ಟರ್ ಬ್ಯಾ' ಎನ್ನುತ್ತಾ ಕುರಿಗಳನ್ನು ಸುವರ್ಣಸೌಧದ ಅಂಗಳದಿಂದ ಆಚೆಗೆ ತರುಬಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications