ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ : ಕುರಿ ಕಾಯ್ದ ಪೊಲೀಸರು

By Manjunatha
|
Google Oneindia Kannada News

ಬೆಳಗಾವಿ, ನವೆಂಬರ್ 15 : ಸುವರ್ಣಸೌಧದ ಒಳಗೆ ಅಧಿವೇಶನ ನಡೆಯುತ್ತಿದ್ದರೆ ಹೊರಗೆ ಪೊಲೀಸರು ಲಾಠಿ ಬೀಸುತ್ತಾ 'ಟರ್ ಬ್ಯಾ' ಎನ್ನುತ್ತಾ ಕುರಿಗಳನ್ನು ಸುವರ್ಣಸೌಧದ ಅಂಗಳದಿಂದ ಆಚೆ ಅಟ್ಟುವುದರಲ್ಲಿ ನಿರತರಾಗಿದ್ದರು.

ಮೌಢ್ಯ ನಿಷೇಧ ಕಾಯ್ದೆ ಸದನದಲ್ಲಿ ಮಂಡನೆ, ಮುಖ್ಯಾಂಶಗಳುಮೌಢ್ಯ ನಿಷೇಧ ಕಾಯ್ದೆ ಸದನದಲ್ಲಿ ಮಂಡನೆ, ಮುಖ್ಯಾಂಶಗಳು

ಹೌದು ಇಂದು (ನವೆಂಬರ್ 15) ರ ಮಧ್ಯಾಹ್ನ ವಿಧಾನಸಭೆ ಕಲಾಪ ಪ್ರಾರಂಭವಾಗುವ ಹೊತ್ತಿಗೆ ಸರಿಯಾಗಿ ನೂರಾರು ಜನ ಕುರುಬ ಜನಾಂಗದ ಹೋರಾಟಗರರು ಬಾವುಟಗಳನ್ನು ಹಿಡಿದು ಸುವರ್ಣಸೌಧದ ಮುಂದೆ ಘೋಷಣೆಗಳನ್ನು ಕೂಗತೊಡಗಿದರು. ತಮ್ಮೊಂದಿಗೆ ತಂದಿದ್ದ ಕುರಿಗಳನ್ನು ಸೌಧದ ಒಳಕ್ಕೆ ನುಗ್ಗಿಸಲು ಪ್ರಯತ್ನಪಟ್ಟರು. ಇದರಿಂದ ಸದನದ ಹೊರಗೆ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.

Sheeps in front of Suvarna soudha!

ಕುರುಬ ಜನಾಂಗವನ್ನು ಎಸ್.ಟಿ ಗೆ ಸೇರಿಬೇಕೆಂಬ ಒತ್ತಾಯದೊಂದಿಗೆ ಬಂದಿದ್ದ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆಯ ಹೋರಾಟಗಾರರು ಸುವರ್ಣಸೌಧದ ಒಳಕ್ಕೆ ಕುರಿಗಳನ್ನು ಹಾಯಿಸಲು ಪ್ರಯತ್ನಪಟ್ಟರು.

ಪ್ರತಿಭಟನಾಕಾರರನ್ನು ಚದುರಿಸಲು ವಿಫಲರಾದ ಪೊಲೀಸರು ಕೊನೆಗೆ ಲಘು ಲಾಠಿ ಪ್ರಹಾರ ಮಾಡಬೇಕಾಯಿತು. ನಂತರ ಹೋರಾಟ ಮಾಡುತ್ತಿದ್ದ ಕೆಲವು ಮುಖಂಡರನ್ನು ಪೊಲೀಸರು ಬಂಧಿಸಿದರು.

ಕೊನೆಗೆ ಪೊಲೀಸರೆ ತಮ್ಮ ಲಾಠಿ ಬೀಸುತ್ತಾ 'ಟರ್ ಬ್ಯಾ' ಎನ್ನುತ್ತಾ ಕುರಿಗಳನ್ನು ಸುವರ್ಣಸೌಧದ ಅಂಗಳದಿಂದ ಆಚೆಗೆ ತರುಬಿದರು.

English summary
Kuruba community people try to led sheeps into the Suvarna soudha in order to protest. Kuruba community people insists their caste should added to S.T community.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X