ಬೆಳಗಾವಿ ಅಧಿವೇಶನದಲ್ಲಿ ಊಟದ ಖರ್ಚಿಗೆ ಕತ್ತರಿ!
ಬೆಂಗಳೂರು, ನ. 23: ಸೋಮವಾರದಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗುವ ಹತ್ತು ದಿನಗಳ ಚಳಿಗಾಲದ ಅಧಿವೇಶನದದಲ್ಲಿ ಭಾಗವಹಿಸುವವರ ಊಟದ ಮೆನು ಸಿದ್ಧವಾಗಿದೆ. ಕಳೆದ ಅಧಿವೇಶನದಲ್ಲಿ ಊಟೋಚಾರಕ್ಕೆ ದುಂದು ವೆಚ್ಚ ಮಾಡಲಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಈ ಬಾರಿ ಊಟದ ಖರ್ಚಿಗೆ ಕತ್ತರಿ ಬಿದ್ದಿದೆ.
ನ.25ರ ಸೋಮವಾರದಿಂದ ಆರಂಭವಾಗುವ 10 ದಿನಗಳ ಅಧಿವೇಶನದ ಊಟೋಪಚಾರಕ್ಕೆ ಎರಡು ಕೋಟಿ ರೂ.ನಿಗದಿ ಪಡಿಸಲಾಗಿದೆ. ಜಿಲ್ಲಾಡಳಿತ ಮತ್ತು ಲೋಕೋಪಯೋಗಿ ಇಲಾಖೆಗೆ ಭೋಜನ ವ್ಯವಸ್ಥೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದು, ಊಟದ ವ್ಯವಸ್ಥೆಯ ಗುತ್ತಿಗೆಯನ್ನು ಧಾರವಾಡದ ಮಯೂರ್ ಕೇಟರರ್ ಗುತ್ತಿಗೆ ಪಡೆದಿದೆ.

ಕಳೆದ ಬಾರಿಯ ಅಧಿವೇಶನದ ಸಂದರ್ಭದಲ್ಲಿ ದಕ್ಷಿಣ ಕರ್ನಾಟಕದ ಜನಪ್ರತಿನಿಧಿಗಳಿಗಾಗಿ ರಾಗಿ ಮುದ್ದೆ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಈ ಬಾರಿ ಮುದ್ದೆ ಊಟಕ್ಕೆ ತಡೆ ನೀಡಲಾಗಿದೆ. ದಿನವೊಂದಕ್ಕೆ ಮೂರು ಸಿಹಿಗಳನ್ನು ಕಳೆದ ಬಾರಿ ನೀಡಲಾಗಿತ್ತು, ಈ ಬಾರಿ ಅದನ್ನು ಒಂದಕ್ಕೆ ಮಿಸಲಿಡಲಾಗಿದೆ. ದಿನಕ್ಕೊಂದು ಸಿಹಿ ತಿಂಡಿಯನ್ನು ಅಧಿವೇಶನದಲ್ಲಿ ಭಾಗವಹಿಸಿದವರಿಗೆ ನೀಡಲಾಗುತ್ತದೆ.
ಮುಖ್ಯಮಂತ್ರಿ, ಸಚಿವರು, ಶಾಸಕರು, ಅಧಿಕಾರಿಗಳು, ಮಾರ್ಷಲ್ಗಳು, ಮಾಧ್ಯಮದವರು, ಇತರ ಸಿಬ್ಬಂದಿ ಸೇರಿ ಪ್ರತಿದಿನ ಸುಮಾರು ಮೂರು ಸಾವಿರ ಜನರು ಭೋಜನ ಸವಿಯಲಿದ್ದಾರೆ. ಒಂದು ಊಟಕ್ಕೆ 300 ರಿಂದ 350 ರೂ. ವೆಚ್ಚವಾಗಲಿದೆ. ಪೊಲೀಸರು, ಚಾಲಕರಿಗೆ ಸೌಧದಲ್ಲಿಯೇ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದೆ.
ಊಟದ ಮೆನು : ರೊಟ್ಟಿ, ಚಪಾತಿ, ಎಣ್ಣೆಗಾಯಿ, ಭಾಜಿ, ಕಾಳಿನ ಪಲ್ಲೆ, ಸಾಂಬಾರು, ಚಟ್ನಿ, ಪುಟಾಣಿ ಚಟ್ನಿ, ಸಿಹಿ, ಬಿಳಿ ಅನ್ನ, ಮಸಾಲೆ ಅನ್ನ, ಮಜ್ಜಿಗೆ, ಮಣ್ಣಿನ ಗಡಿಗೆಯಲ್ಲಿ ಕೆನೆ ಮೊಸರು, ಹಣ್ಣು, ಬಾಳೆಹಣ್ಣು, ಪಾನ್ಬೀಡಾ ನೀಡಲಾಗುತ್ತಿದೆ. ಧಾರವಾಡ ಪೇಡ, ಗೋಕಾಕ ಕರದಂಟು, ಗೋದಿ ಹುಗ್ಗಿ, ಬುಂದಿ ಲಾಡುಗಳನ್ನು ಪ್ರತಿದಿನ ಒಂದರಂತೆ ನೀಡಲು ಸಿದ್ಧತೆ ನಡೆದಿದೆ.
ಬೆಂಗಳೂರು ವಿಧಾನಸೌಧದದಲ್ಲಿನ ಊಟದ ವ್ಯವಸ್ಥೆಯಂತೆ, ಮೇಲ್ಮನೆ ಹಾಗೂ ಕೆಳಮನೆಯವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಶಾಸಕರು, ಸಚಿವರಿಗೆ ಬ್ಯಾಂಕ್ವೆಟ್ ಹಾಲ್ನಲ್ಲಿ, ಮಾಧ್ಯಮದವರು, ಅಧಿಕಾರಿಗಳಿಗೆ ನೆಲ ಮಹಡಿಯಲ್ಲಿ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಸೌಧದ ಹೊರಗಡೆ ಎರಡು ಕಡೆಗಳಲ್ಲಿ ಕ್ಯಾಂಟೀನ್ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications