ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಹಿನ್ನೆಲೆಯಲ್ಲಿ ಸರಳ ಕನಕದಾಸ ಜಯಂತಿ ಆಚರಣೆ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ನವೆಂಬರ್ 25: ಕೋವಿಡ್-19 ಹಿನ್ನೆಲೆಯಲ್ಲಿ ಡಿ.3 ರಂದು ಕನಕದಾಸ ಜಯಂತಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಕನಕದಾಸ ಜಯಂತಿ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಳಗಾವಿಯ ಕಾಲೇಜ್‌ಗಳಿಗೆ ಡಿಸಿಎಂ ಅಶ್ವಥ್ ನಾರಾಯಣ ಭೇಟಿಬೆಳಗಾವಿಯ ಕಾಲೇಜ್‌ಗಳಿಗೆ ಡಿಸಿಎಂ ಅಶ್ವಥ್ ನಾರಾಯಣ ಭೇಟಿ

ಡಿ.3 ರಂದು ಬೆಳಿಗ್ಗೆ 9.30 ಗಂಟೆಗೆ ಬುಡಾ ಕಚೇರಿ ಬಳಿಯಿರುವ ಕನಕದಾಸ ವೃತ್ತದಲ್ಲಿ, ಕನಕದಾಸ ಭಾವಚಿತ್ರಕ್ಕೆ ಮಾಲಾರ್ಪಣೆ ನಡೆಯಲಿದೆ. ಇದಾದ ಬಳಿಕ ರಂಗಮಂದಿರದ ಆವರಣದಲ್ಲಿರುವ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

Belagavi: Simple Kanakadasa Jayanti Celebration In The Background Of Coronavirus

ಕನಕದಾಸರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

Belagavi: Simple Kanakadasa Jayanti Celebration In The Background Of Coronavirus

Recommended Video

ರಾಜ್ಯ ರಾಜಕಾರಣ ಅಲ್ಲೋಲ ಕಲ್ಲೋಲವಾಗಲಿದೆ ಎಂದ ಕೋಡಿ ಮಠದ ಶ್ರೀಗಳು | Oneindia Kannada

ಇದೇ ವೇಳೆ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸರಳ ರೀತಿಯಲ್ಲಿ ಕನಕದಾಸ ಜಯಂತಿಯನ್ನು ಆಚರಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

English summary
"It is decided to celebrate Kanakadasa Jayanthi on December 3 in the wake of Covid-19,' said Belagavi District Collector MG Hiremath.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X