ಮಗನ ಶವವನ್ನು ತನ್ನ ಕೈಯಾರೆ ಹೊರ ತೆಗೆದ ತಂದೆಯ ಕರುಣಾಜನಕ ಕತೆ
ಬೈಲಹೊಂಗಲ, ಆಗಸ್ಟ್ 13: ಈ ಜಲ ಪ್ರವಾಹದಲ್ಲಿ ಜೀವ ಕಳೆದುಕೊಂಡವರೆಷ್ಟೋ, ಮನೆ, ಜಮೀನು, ಬೆಳೆ, ಸಂಬಂಧಿಕರು, ತಾವು ಇಷ್ಟಪಟ್ಟು ಸಲಹಿದ ಜಾನುವಾರುಗಳು ನೋಡನೋಡುತ್ತಿದ್ದಂತೆಯೇ ಕಣ್ಮರೆಯಾಗಿವೆ.
ಹಾಗೆಯೇ ಧಾರಾಕಾರ ಮಳೆಗೆ ಮೈದುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಮಗನ ಶವವನ್ನು ತಂದೆಯೇ ಹೊರಕ್ಕೆ ತಂದು ಕರಣುಜಾನಕ ಕತೆ ಇದು. ಮಗ ಕಳೆದು ಹೋಗಿದ್ದಾನೆ, ದೇವರೇ ಬದುಕಿದ್ದರೆ ಸಾಕಪ್ಪಾ ಎಂದು ಬೇಡಿಕೊಳ್ಳುತ್ತಲೇ ಪೊಲೀಸ್ ಠಾಣೆಗೆ ಕಾಣೆಯಾದ ಮಗನ ಬಗ್ಗೆ ದೂರು ನೀಡಿದ್ದಾರೆ.
ಮರುದಿನವೂ ಮಗ ಬಂದಿಲ್ಲ, ಒಂದೆಡೆ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ, ಮಗ ಬಂದೇ ಬರುತ್ತಾನೆ ಎಂದು ಹೆಂಡತಿಗೆ ಸಮಾಧಾನ ಮಾಡುತ್ತಿದ್ದರೂ ಕಣ್ತುಂಬಿ ಬರುತ್ತಿದೆ. ಎಲ್ಲಿ ಹುಡುಕಿದರೂ ಮಗ ಪತ್ತೆಯಿಲ್ಲ.

ಮರುದಿನ ಸೋಮವಾರ ಬೆಳಗ್ಗೆ ಮೃತ ಯುವಕನ ಚಿಕ್ಕಪ್ಪ ಈರಪ್ಪ ಹೊಲದ ಕಡೆ ಹೋದ ಸಂದರ್ಭದಲ್ಲಿ ಸಂಗಮೇಶ್ ಕೊಚ್ಚಿಕೊಂಡು ಹೋಗಿದ್ದ ಸ್ಥಳದಿಂದ 200 ಮೀ ದೂರದಲ್ಲಿ ಗಿಡಗಂಟಿಯೊಳಗೆ ಆತನ ಶವ ಸಿಲುಕಿರುವುದು ನೋಡಿದ್ದಾರೆ. ತಕ್ಷಣ ಮನೆಗೆ ದೌಡಾಯಿಸಿ , ತನ್ನ ಅಣ್ಣ ಬಸಪ್ಪನಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಮನೆಗೆ ದೌಡಾಯಿಸಿ ಕೊನೆಗೆ ಶವದ ಮೇಲಿದ್ದ ಬಟ್ಟೆ ಯ ಆಧಾರದ ಮೇಲೆ ಆತ ತಮ್ಮ ಮಗನೇ ಎಂದು ಖಚಿತಪಡಿಸಿಕೊಂಡು ಬಸಪ್ಪ ಹಳ್ಳಕ್ಕೆ ಇಳಿದು ತಾವೇ ಸಾಕಿ ಬೆಳಸಿದ ಕೈಯಿಂದ ಮಗನ ಶವ ಹೊರಕ್ಕೆ ತೆಗೆದಿದ್ದಾರೆ.
ಈ ಮನಕಲಕುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಶನಿವಾರ ಮೇವು ತರಲು ಹೋಗಿ , ಬೆಳವಡಿ ಗ್ರಾಮದಲ್ಲಿ ತುಂಬಿ ಹರಿಯುತ್ತಿದ್ದ ಸಂಗೊಳ್ಳಿ-ಜಿಡ್ಡಿ ಹಳ್ಳವನ್ನು ದಾಟುವ ವೇಳೆ ಗ್ರಾಮದ ಸಂಗಮೇಶ ಬಸಪ್ಪ ಹುಂಬಿ (22)ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದ, ಈ ಸಂಬಂಧ ಯುವಕನ ಕುಟುಂಬಸ್ಥರು ದೊಡವಾಡ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಭಾರಿ ಮಳೆಯಿಂದ ರಕ್ಷಣಾ ಕಾರ್ಯಕ್ಕೆ ಅಡಚಣೆ ಉಂಟಾಗಿತ್ತು. ಕೊನೆಗೂ ಮಗ ಸಿಕ್ಕಿದ್ದ ಆದರೆ ಜೀವಂತವಲ್ಲ ಶವವಾಗಿ...
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications