Breaking; ಬೆಳಗಾವಿಯಿಂದ ಎಲ್ಲಾ ವಿಮಾನ ರದ್ದುಗೊಳಿಸಿದ ಸ್ಪೈಸ್ಜೆಟ್
ಬೆಳಗಾವಿ, ಡಿಸೆಂಬರ್ 07; ಸ್ಪೈಸ್ಜೆಟ್ ಬೆಳಗಾವಿ ವಿಮಾನ ನಿಲ್ದಾಣದಿಂದ ಎಲ್ಲಾ ವಿಮಾನ ಸೇವೆಗಳನ್ನು ರದ್ದುಗೊಳಿಸಿದೆ. ಡಿಸೆಂಬರ್ 10ರಿಂದ ಯಾವುದೇ ವಿಮಾನಗಳು ಸಂಚಾರ ನಡೆಸುವುದಿಲ್ಲ.
ಕಡಿಮೆ ಖರ್ಚಿನಲ್ಲಿ ವಿಮಾನ ಸೇವೆ ಒದಗಿಸುವ ಸ್ಪೈಸ್ ಜೆಟ್ ಬೆಳಗಾವಿಯಿಂದ ಎಲ್ಲಾ ವಿಮಾನಗಳನ್ನು ರದ್ದುಗೊಳಿಸುತ್ತಿದೆ. ಇದರಿಂದಾಗಿ ಪ್ರಮುಖ ನಗರಗಳಿಗೆ ಬೆಳಗಾವಿಯಿಂದ ವಿಮಾನ ಸಂಪರ್ಕ ಕಡಿತಗೊಳ್ಳಲಿದೆ.
ಸ್ಪೈಸ್ಜೆಟ್ ಬೆಳಗಾವಿ-ನವದೆಹಲಿ ನಡುವೆ ಸಹ ನೇರ ವಿಮಾನ ಸೇವೆ ಒದಗಿಸುತ್ತಿತ್ತು. ಈ ವಿಮಾನ ಸಹ ಡಿಸೆಂಬರ್ 10ರ ಬಳಿಕ ಸ್ಥಗಿತಗೊಳ್ಳಲಿದೆ. ಆದ್ದರಿಂದ ಬೆಳಗಾವಿಯಿಂದ ದೆಹಲಿಗೆ ಹೋಗುವವರು 5 ಗಂಟೆ ಪ್ರಯಾಣ ಮಾಡಿ, ಸಂಪರ್ಕ ವಿಮಾನ ಹತ್ತಿ ದೆಹಲಿಗೆ ಹೋಗಬೇಕಿದೆ.

ಬೆಳಗಾವಿ-ಮುಂಬೈ, ಬೆಳಗಾವಿ-ಹೈದರಾಬಾದ್ ನಡುವಿನ ವಿಮಾನ ಸೇವೆಯನ್ನು ಕೆಲವು ದಿನಗಳ ಹಿಂದೆ ಸ್ಥಗಿತಗೊಳಿಸಿತ್ತು. ಬೆಳಗಾವಿ-ನವದೆಹಲಿ ವಿಮಾನ ಸೇವೆಯ ಬುಕ್ಕಿಂಗ್ ಅನ್ನು ಸಹ ಸ್ಪೈಸ್ ಜೆಟ್ ರದ್ದುಗೊಳಿಸಿದೆ.
ಕಳೆದ ಮೂರು ವರ್ಷಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣದಿಂದ ಹಲವು ವಿಮಾನಗಳ ಸೇವೆಗಳು ರದ್ದುಗೊಂಡಿವೆ.
ರದ್ದುಗೊಂಡಿರುವ ವಿಮಾನಗಳು
* ಸ್ಪೈಸ್ಜೆಟ್ ; ಬೆಳಗಾವಿ-ಮುಂಬೈ
* ಸ್ಪೈಸ್ಜೆಟ್; ಬೆಳಗಾವಿ-ಹೈದರಾಬಾದ್
* ಸ್ಪೈಸ್ಜೆಟ್; ಬೆಳಗಾವಿ-ದೆಹಲಿ
* ಸ್ಪೈಸ್ಜೆಟ್; ಬೆಳಗಾವಿ-ಬೆಂಗಳೂರು
* ಇಂಡಿಗೋ; ಬೆಳಗಾವಿ-ಚೆನ್ನೈ
* ಅಲಯನ್ಸ್ ಏರ್; ಬೆಳಗಾವಿ-ಪುಣೆ
* ಅಲಯನ್ಸ್ ಏರ್; ಬೆಳಗಾವಿ-ಬೆಂಗಳೂರು
* ಸ್ಟಾರ್ ಏರ್; ಬೆಳಗಾವಿ-ಬೆಂಗಳೂರು
* ಸ್ಟಾರ್ ಏರ್; ಬೆಳಗಾವಿ-ನಾಸಿಕ್
* ಟ್ರೂಜೆಟ್; ಬೆಳಗಾವಿ-ಮೈಸೂರು
* ಟ್ರೂಜೆಟ್; ಬೆಳಗಾವಿ-ತಿರುಪತಿ
* ಟ್ರೂಜೆಟ್; ಬೆಳಗಾವಿ-ಕಡಪ
* ಟ್ರೂಜೆಟ್; ಬೆಳಗಾವಿ-ಹೈದರಾಬಾದ್
ರಾಜ್ಯದ 3ನೇ ಅತಿ ಹೆಚ್ಚು ದಟ್ಟಣೆಯ ವಿಮಾನ; ಅಕ್ಟೋಬರ್ ತಿಂಗಳಿನಲ್ಲಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡುವ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾಗಿತ್ತು. ಆದ್ದರಿಂದ ಅತಿ ಹೆಚ್ಚು ದಟ್ಟಣೆಯ ರಾಜ್ಯದ 3ನೇ ವಿಮಾನ ನಿಲ್ದಾಣ ಎಂದು ಗುರುತಿಸಿಕೊಂಡಿತ್ತು.
ಅಕ್ಟೋಬರ್ ತಿಂಗಳಿನಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಪ್ರಯಾಣಿಕರ ಸಂಖ್ಯೆ 24,359. ಬೆಳಗಾವಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡುವರ ಸಂಖ್ಯೆ 29 ಸಾವಿರ. ಹುಬ್ಬಳ್ಳಿಗೆ 468 ವಿಮಾನಗಳು ಆಗಮಿಸಿದ್ದರೆ, ಬೆಳಗಾವಿಗೆ 522 ವಿಮಾನಗಳು ಆಗಮಿಸಿದ್ದವು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications