ಬೆಳಗಾವಿ-ವಿಜಯನಗರ ವಿಶೇಷ ವಿಮಾನ: ದರ ಮತ್ತು ವೇಳಾಪಟ್ಟಿ
ಬೆಳಗಾವಿ, ಜನವರಿ 24: ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಗಳ ಜನರಿಗೆ ಸ್ಟಾರ್ ಏರ್ ಸಿಹಿಸುದ್ದಿಯನ್ನು ನೀಡಿದೆ. ಎರಡು ನಗರದ ನಡುವೆ ವಿಮಾನ ಸೇವೆಯನ್ನು ಸ್ಟಾರ್ ಏರ್ ಘೋಷಣೆ ಮಾಡಿದೆ. ಜನವರಿ 25ರಿಂದ ಈ ವಿಶೇಷ ವಿಮಾನ ಸೇವೆ ಆರಂಭವಾಗಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ವಿಮಾನದ ದರ ಮತ್ತು ವೇಳಾಪಟ್ಟಿಯ ಮಾಹಿತಿ ನೀಡಲಾಗಿದೆ.
ಸ್ಟಾರ್ ಏರ್ ವಿಮಾನ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ಮತ್ತು ವಿಜಯನಗರದಲ್ಲಿರುವ ವಿದ್ಯಾನಗರ ವಿಮಾನ ನಿಲ್ದಾಣ (ಜಿಂದಾಲ್) ನಡುವೆ ಸಂಚಾರವನ್ನು ನಡೆಸಲಿದೆ. 50 ಸೀಟುಗಳ ERG-145 ಸಂಖ್ಯೆಯ ವಿಮಾನ ಉಭಯ ನಗರಗಳ ನಡುವೆ ಸಂಚಾರ ನಡೆಸಲಿದೆ.

ವೇಳಾಪಟ್ಟಿ, ದರ: ಸ್ಟಾರ್ ಏರ್ ಮಾಹಿತಿಯಂತೆ ಜನವರಿ 25 ಮತ್ತು 27ರಂದು ಈ ವಿಶೇಷ ವಿಮಾನ ಸಂಚಾರವನ್ನು ನಡೆಸಲಿದೆ. ಈ ಮಾರ್ಗದ ಪ್ರಯಾಣಕ್ಕೆ 1999 ರೂ. ಪ್ರಯಾಣ ದರವನ್ನು ನಿಗದಿ ಮಾಡಲಾಗಿದೆ. ಈಗಾಗಲೇ ವೆಬ್ಸೈಟ್ ಮೂಲಕ ಟಿಕೆಟ್ ಬುಕ್ಕಿಂಗ್ ಆರಂಭಿಸಲಾಗಿದೆ.
ವೇಳಾಪಟ್ಟಿಯ ಪ್ರಕಾರ ಜನವರಿ 25ರಂದು ವಿಮಾನ ಸಂಖ್ಯೆ S5 9359 ವಿದ್ಯಾ ನಗರ ವಿಮಾನ ನಿಲ್ದಾಣದಿಂದ ಸಂಜೆ 5.15ಕ್ಕೆ ಹೊರಡಲಿದೆ. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಂಜೆ 6.05ಕ್ಕೆ ತಲುಪಲಿದೆ. ಜನವರಿ 27ರಂದು S5 9371 ಸಂಖ್ಯೆಯ ವಿಮಾನ ಬೆಳಗಾವಿಯಿಂದ ಬೆಳಗ್ಗೆ 7.40ಕ್ಕೆ ಹೊರಡಲಿದ್ದು, ವಿದ್ಯಾ ನಗರಕ್ಕೆ 8.30ಕ್ಕೆ ತಲುಪಲಿದೆ.
ಉಭಯ ಜಿಲ್ಲೆಗಳ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂದು ಈ ವಿಶೇಷ ವಿಮಾನ ಸೇವೆಯ ಪ್ರಾರಂಭಿಕ ದರವನ್ನು 1999 ರೂ. ಎಂದು ನಿಗದಿ ಮಾಡಲಾಗಿದೆ. ಪ್ರಯಾಣಿಕರು ಈ ವಿಶೇಷ ವಿಮಾನ ಸೇವೆಯ ಉಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಬೆಳಗಾವಿ-ವಿಜಯನಗರ ನಡುವೆ ಸಂಚಾರ ನಡೆಸುವ ಜನರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಪ್ರಯಾಣಿಕರ ಬೇಡಿಕೆಯಂತೆ ವಿಶೇಷ ವಿಮಾನಗಳನ್ನು ಓಡಿಸಲಾಗುತ್ತಿದೆ ಎಂದು ಸ್ಟಾರ್ ಏರ್ ಅಧಿಕಾರಿಗಳು ಹೇಳಿದ್ದಾರೆ.
ಜಿಂದಾಲ್ ವಿಮಾನ ನಿಲ್ದಾಣವು ವಿಜಯನಗರ ಜಿಲ್ಲೆಯ ವಿದ್ಯಾನಗರದ ಟೌನ್ಶಿಪ್ ಬಳಿ ಇದೆ. ಈ ವಿಮಾನ ನಿಲ್ದಾಣ ಖಾಸಗಿ ಒಡೆತನದಲ್ಲಿದೆ. ಆದರೆ ಸಾರ್ವಜನಿಕ ಸೇವೆಗೆ ಇದನ್ನು ಬಳಕೆ ಮಾಡಲು ಅವಕಾಶವಿದೆ. ಅಲ್ಲದೇ ರಾಜಕಾರಣಿಗಳು ವಿಶೇಷ ವಿಮಾನದ ಮೂಲಕ ವಿಜಯನಗರಕ್ಕೆ ಭೇಟಿ ನೀಡುವಾಗ ಈ ವಿಮಾನ ನಿಲ್ದಾಣವನ್ನು ಬಳಕೆ ಮಾಡುತ್ತಾರೆ.
ಬೆಳಗಾವಿ ಮತ್ತು ವಿಜಯನಗರ ನಡುವೆ ಸಂಚಾರ ನಡೆಸುವ ಜನರ ಅನುಕೂಲಕ್ಕಾಗಿ ವಿಶೇಷ ವಿಮಾನ ಸೇವೆಯನ್ನು ಆರಂಭಿಸಲಾಗಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡವನ್ನು ನಿರ್ಮಾಣ ಮಾಡಲಾಗತ್ತಿದೆ.
ಹೊಸ ಟರ್ಮಿನಲ್ ಕಾಮಗಾರಿ ಶೇ 30ರಷ್ಟು ಮುಗಿದಿದೆ. ಇಲ್ಲಿಂದ ಕಾರ್ಗೋ ಸೇವೆಗಳನ್ನು ಆರಂಭಿಸಬೇಕು ಎಂದು ಹೆಚ್ಚಿನ ಬೇಡಿಕೆ ಇದೆ. 2025ರ ವೇಳೆಗೆ ಈ ಕಾಮಗಾರಿ ಪೂರ್ಣಗೊಂಡ ನಂತರ, ಈಗಾಗಲೇ ಅಸ್ತಿತ್ವದಲ್ಲಿರುವ ಟರ್ಮಿನಲ್ ಅನ್ನು ಕಾರ್ಗೋ ಸೇವೆಗಳಿಗೆ ಬಳಕೆ ಮಾಡಿಕೊಳ್ಳಲು ಚಿಂತನೆ ನಡೆಸಲಾಗಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications